Mysore
21
broken clouds

Social Media

ಸೋಮವಾರ, 16 ಮಾರ್ಚ್ 2026
Light
Dark

ಜಿ.ಎಸ್.ಬೆಟ್ಟಕ್ಕೆ ವಿದ್ಯುತ್ ಸಂಪರ್ಕ : ಅವಕಾಶಕ್ಕೆ ಮನವಿ

ಚಾಮರಾಜನಗರ: ಪ್ರಸಿದ್ದ ಯಾತ್ರಾಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಜರಾಯಿ ಇಲಾಖೆಯು ಅನುಮತಿ ನೀಡದೆ ಅಲೆದಾಡಿಸುತ್ತಿದ್ದಾರೆ ಎಂದು ಮೈಸೂರಿನ ಸಂಜಯ್ ಎಲೆಕ್ಟ್ರಿಕಲ್ ಮಾಲೀಕರಾದ ಆರ್.ಶ್ರೀಪಾಲ್ ದೂರಿದ್ದಾರೆ.

೪ ತಿಂಗಳ ಹಿಂದೆ ಬೆಟ್ಟಕ್ಕೆ ಭೇಟಿ ನೀಡಿದ್ದಾಗ ವಿದ್ಯುತ್ ಸಂಪರ್ಕ ಇಲ್ಲದಿರುವುದು ಕಂಡುಬoತು. ನಾನು ಸಂಪರ್ಕ ಕಲ್ಪಿಸುವ ಹರಕೆ ಹೊತ್ತಿದ್ದೇನೆ. ಆದರೆ, ಸಂಬoಧಿಸಿದವರಿoದ ಅವಕಾಶ ಸಿಗುತ್ತಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬoಧ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸ್ಥಳೀಯ ಶಾಸಕ ಸಿ.ಎಸ್.ನಿರಂಜನಕುಮಾರ್, ಗುಂಡ್ಲುಪೇಟೆ ತಹಸೀಲ್ದಾರ್. ಅರಣ್ಯ ಇಲಾಖೆ, ಸೆಸ್ಕಾಂಗೆ ಮನವಿ ಸಲ್ಲಿಸಿದ್ದೇನೆ. ಸಾಮಗ್ರಿಗಳನ್ನು ನೀಡಿದರೆ ವೆಚ್ಚವನ್ನು ಸ್ವತಃ ನಾನೇ ಭರಿಸಿ ಕೆಲಸ ನಿರ್ವಹಿಸಲಿದ್ದೇನೆ ಎಂದು ಕೋರಿದ್ದೇನೆ ಎಂದರು.
ವಿದ್ಯುತ್ ಲೈನ್ ಅಂದಾಜು ವೆಚ್ಚವು ೩.೧೮ ಲಕ್ಷ ರೂ. ವೆಚ್ಚವಾಗಲಿದೆ. ಬೆಟ್ಟವು ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ವ್ಯಾಪ್ತಿಗೆ ಬರಲಿದ್ದು, ಆನೆಗಳ ಓಡಾಟವಿದೆ. ಆದ್ದರಿಂದ ಬೆಟ್ಟದ ಮೇಲೆ ಎಲ್‌ಟಿ ಲೈನ್ ಮತ್ತು  ಪರಿವರ್ಧಕಗಳನ್ನು ಅಳವಡಿಸಬೇಕಿದೆ. ಈ ಸಾಮಗ್ರಿಗಳು ಸೆಸ್ಕಾಂನಲ್ಲಿ ಲಭ್ಯವಿಲ್ಲ. ಇವುಗಳ ವೆಚ್ಚ ಕಳೆದು ೮.೨೧ ಲಕ್ಷ ರೂ. ಖರ್ಚಾಗಲಿದೆ. ಇದನ್ನು ನಾವು ಭರಿಸಿ ಕೆಲಸ ಮಾಡಲು ಸಿದ್ದರಿದ್ದೇವೆ ಎಂದರು.
ಈ ಬಗ್ಗೆ ಚಾ.ನಗರ ಜಿಲ್ಲಾಧಿಕಾರಿಗಳು ಕ್ರಮ ವಹಿಸುವಂತೆ ಮುಜರಾಯಿ ಇಲಾಖೆಗೆ ಪತ್ರ ಬರೆದಿದ್ದಾರೆ. ಆದರೆ, ಈ ಇಲಾಖೆಯಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗುತ್ತಿಲ್ಲ. ಸಂಬoಧಿಸಿದವರು ಅನುಮತಿ ನೀಡಬೇಕೆಂದು ಆಗ್ರಹಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!