ಚಾಮರಾಜನಗರ: ಪ್ರಸಿದ್ದ ಯಾತ್ರಾಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಜರಾಯಿ ಇಲಾಖೆಯು ಅನುಮತಿ ನೀಡದೆ ಅಲೆದಾಡಿಸುತ್ತಿದ್ದಾರೆ ಎಂದು ಮೈಸೂರಿನ ಸಂಜಯ್ ಎಲೆಕ್ಟ್ರಿಕಲ್ ಮಾಲೀಕರಾದ ಆರ್.ಶ್ರೀಪಾಲ್ ದೂರಿದ್ದಾರೆ.
೪ ತಿಂಗಳ ಹಿಂದೆ ಬೆಟ್ಟಕ್ಕೆ ಭೇಟಿ ನೀಡಿದ್ದಾಗ ವಿದ್ಯುತ್ ಸಂಪರ್ಕ ಇಲ್ಲದಿರುವುದು ಕಂಡುಬoತು. ನಾನು ಸಂಪರ್ಕ ಕಲ್ಪಿಸುವ ಹರಕೆ ಹೊತ್ತಿದ್ದೇನೆ. ಆದರೆ, ಸಂಬoಧಿಸಿದವರಿoದ ಅವಕಾಶ ಸಿಗುತ್ತಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬoಧ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸ್ಥಳೀಯ ಶಾಸಕ ಸಿ.ಎಸ್.ನಿರಂಜನಕುಮಾರ್, ಗುಂಡ್ಲುಪೇಟೆ ತಹಸೀಲ್ದಾರ್. ಅರಣ್ಯ ಇಲಾಖೆ, ಸೆಸ್ಕಾಂಗೆ ಮನವಿ ಸಲ್ಲಿಸಿದ್ದೇನೆ. ಸಾಮಗ್ರಿಗಳನ್ನು ನೀಡಿದರೆ ವೆಚ್ಚವನ್ನು ಸ್ವತಃ ನಾನೇ ಭರಿಸಿ ಕೆಲಸ ನಿರ್ವಹಿಸಲಿದ್ದೇನೆ ಎಂದು ಕೋರಿದ್ದೇನೆ ಎಂದರು.
ವಿದ್ಯುತ್ ಲೈನ್ ಅಂದಾಜು ವೆಚ್ಚವು ೩.೧೮ ಲಕ್ಷ ರೂ. ವೆಚ್ಚವಾಗಲಿದೆ. ಬೆಟ್ಟವು ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ವ್ಯಾಪ್ತಿಗೆ ಬರಲಿದ್ದು, ಆನೆಗಳ ಓಡಾಟವಿದೆ. ಆದ್ದರಿಂದ ಬೆಟ್ಟದ ಮೇಲೆ ಎಲ್ಟಿ ಲೈನ್ ಮತ್ತು ಪರಿವರ್ಧಕಗಳನ್ನು ಅಳವಡಿಸಬೇಕಿದೆ. ಈ ಸಾಮಗ್ರಿಗಳು ಸೆಸ್ಕಾಂನಲ್ಲಿ ಲಭ್ಯವಿಲ್ಲ. ಇವುಗಳ ವೆಚ್ಚ ಕಳೆದು ೮.೨೧ ಲಕ್ಷ ರೂ. ಖರ್ಚಾಗಲಿದೆ. ಇದನ್ನು ನಾವು ಭರಿಸಿ ಕೆಲಸ ಮಾಡಲು ಸಿದ್ದರಿದ್ದೇವೆ ಎಂದರು.
ಈ ಬಗ್ಗೆ ಚಾ.ನಗರ ಜಿಲ್ಲಾಧಿಕಾರಿಗಳು ಕ್ರಮ ವಹಿಸುವಂತೆ ಮುಜರಾಯಿ ಇಲಾಖೆಗೆ ಪತ್ರ ಬರೆದಿದ್ದಾರೆ. ಆದರೆ, ಈ ಇಲಾಖೆಯಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗುತ್ತಿಲ್ಲ. ಸಂಬoಧಿಸಿದವರು ಅನುಮತಿ ನೀಡಬೇಕೆಂದು ಆಗ್ರಹಿಸಿದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…