ಜಿಲ್ಲೆಗಳು

ಜಿ.ಎಸ್.ಬೆಟ್ಟಕ್ಕೆ ವಿದ್ಯುತ್ ಸಂಪರ್ಕ : ಅವಕಾಶಕ್ಕೆ ಮನವಿ

ಚಾಮರಾಜನಗರ: ಪ್ರಸಿದ್ದ ಯಾತ್ರಾಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಜರಾಯಿ ಇಲಾಖೆಯು ಅನುಮತಿ ನೀಡದೆ ಅಲೆದಾಡಿಸುತ್ತಿದ್ದಾರೆ ಎಂದು ಮೈಸೂರಿನ ಸಂಜಯ್ ಎಲೆಕ್ಟ್ರಿಕಲ್ ಮಾಲೀಕರಾದ ಆರ್.ಶ್ರೀಪಾಲ್ ದೂರಿದ್ದಾರೆ.

೪ ತಿಂಗಳ ಹಿಂದೆ ಬೆಟ್ಟಕ್ಕೆ ಭೇಟಿ ನೀಡಿದ್ದಾಗ ವಿದ್ಯುತ್ ಸಂಪರ್ಕ ಇಲ್ಲದಿರುವುದು ಕಂಡುಬoತು. ನಾನು ಸಂಪರ್ಕ ಕಲ್ಪಿಸುವ ಹರಕೆ ಹೊತ್ತಿದ್ದೇನೆ. ಆದರೆ, ಸಂಬoಧಿಸಿದವರಿoದ ಅವಕಾಶ ಸಿಗುತ್ತಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬoಧ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸ್ಥಳೀಯ ಶಾಸಕ ಸಿ.ಎಸ್.ನಿರಂಜನಕುಮಾರ್, ಗುಂಡ್ಲುಪೇಟೆ ತಹಸೀಲ್ದಾರ್. ಅರಣ್ಯ ಇಲಾಖೆ, ಸೆಸ್ಕಾಂಗೆ ಮನವಿ ಸಲ್ಲಿಸಿದ್ದೇನೆ. ಸಾಮಗ್ರಿಗಳನ್ನು ನೀಡಿದರೆ ವೆಚ್ಚವನ್ನು ಸ್ವತಃ ನಾನೇ ಭರಿಸಿ ಕೆಲಸ ನಿರ್ವಹಿಸಲಿದ್ದೇನೆ ಎಂದು ಕೋರಿದ್ದೇನೆ ಎಂದರು.
ವಿದ್ಯುತ್ ಲೈನ್ ಅಂದಾಜು ವೆಚ್ಚವು ೩.೧೮ ಲಕ್ಷ ರೂ. ವೆಚ್ಚವಾಗಲಿದೆ. ಬೆಟ್ಟವು ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ವ್ಯಾಪ್ತಿಗೆ ಬರಲಿದ್ದು, ಆನೆಗಳ ಓಡಾಟವಿದೆ. ಆದ್ದರಿಂದ ಬೆಟ್ಟದ ಮೇಲೆ ಎಲ್‌ಟಿ ಲೈನ್ ಮತ್ತು  ಪರಿವರ್ಧಕಗಳನ್ನು ಅಳವಡಿಸಬೇಕಿದೆ. ಈ ಸಾಮಗ್ರಿಗಳು ಸೆಸ್ಕಾಂನಲ್ಲಿ ಲಭ್ಯವಿಲ್ಲ. ಇವುಗಳ ವೆಚ್ಚ ಕಳೆದು ೮.೨೧ ಲಕ್ಷ ರೂ. ಖರ್ಚಾಗಲಿದೆ. ಇದನ್ನು ನಾವು ಭರಿಸಿ ಕೆಲಸ ಮಾಡಲು ಸಿದ್ದರಿದ್ದೇವೆ ಎಂದರು.
ಈ ಬಗ್ಗೆ ಚಾ.ನಗರ ಜಿಲ್ಲಾಧಿಕಾರಿಗಳು ಕ್ರಮ ವಹಿಸುವಂತೆ ಮುಜರಾಯಿ ಇಲಾಖೆಗೆ ಪತ್ರ ಬರೆದಿದ್ದಾರೆ. ಆದರೆ, ಈ ಇಲಾಖೆಯಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗುತ್ತಿಲ್ಲ. ಸಂಬoಧಿಸಿದವರು ಅನುಮತಿ ನೀಡಬೇಕೆಂದು ಆಗ್ರಹಿಸಿದರು.

andolanait

Recent Posts

ಸಂಸದ ಯದುವೀರ್ ಒಡೆಯರ್ ಹುಟ್ಟುಹಬ್ಬದಂದು ‘ರಂಗೋಲಿ’ ಶುಭಾಶಯ

ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…

11 mins ago

ಮಾರ್ಚ್.‌28ರಂದು ಐಪಿಎಲ್‌ ಉದ್ಘಾಟನಾ ಪಂದ್ಯ: ಆನ್‌ಲೈನ್‌ನಲ್ಲಿ ಮಾತ್ರ ಟಿಕೆಟ್‌ ಬುಕ್ಕಿಂಗ್‌

ಬೆಂಗಳೂರು: ಮಾರ್ಚ್.‌28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್‌ ಸೀಮಂತ್‌ ಕುಮಾರ್‌…

16 mins ago

ಇಂದು ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…

1 hour ago

ವಿಧಾನಮಂಡಲ ಅಧಿವೇಶನ ಒಂದು ದಿನ ಮೊಟಕು.?

ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.‌26ರಂದು ಕೊನೆಗೊಳ್ಳಲಿದೆ.…

1 hour ago

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ: 66 ಮಂದಿ ದುರ್ಮರಣ

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…

2 hours ago

ಓದುಗರ ಪತ್ರ: ಕಲ್ಲಾಗದಿರು ಮಳೆಯೇ!

ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…

3 hours ago