ಚಾಮರಾಜನಗರ: ಪ್ರಸಿದ್ದ ಯಾತ್ರಾಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಜರಾಯಿ ಇಲಾಖೆಯು ಅನುಮತಿ ನೀಡದೆ ಅಲೆದಾಡಿಸುತ್ತಿದ್ದಾರೆ ಎಂದು ಮೈಸೂರಿನ ಸಂಜಯ್ ಎಲೆಕ್ಟ್ರಿಕಲ್ ಮಾಲೀಕರಾದ ಆರ್.ಶ್ರೀಪಾಲ್ ದೂರಿದ್ದಾರೆ.
೪ ತಿಂಗಳ ಹಿಂದೆ ಬೆಟ್ಟಕ್ಕೆ ಭೇಟಿ ನೀಡಿದ್ದಾಗ ವಿದ್ಯುತ್ ಸಂಪರ್ಕ ಇಲ್ಲದಿರುವುದು ಕಂಡುಬoತು. ನಾನು ಸಂಪರ್ಕ ಕಲ್ಪಿಸುವ ಹರಕೆ ಹೊತ್ತಿದ್ದೇನೆ. ಆದರೆ, ಸಂಬoಧಿಸಿದವರಿoದ ಅವಕಾಶ ಸಿಗುತ್ತಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬoಧ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸ್ಥಳೀಯ ಶಾಸಕ ಸಿ.ಎಸ್.ನಿರಂಜನಕುಮಾರ್, ಗುಂಡ್ಲುಪೇಟೆ ತಹಸೀಲ್ದಾರ್. ಅರಣ್ಯ ಇಲಾಖೆ, ಸೆಸ್ಕಾಂಗೆ ಮನವಿ ಸಲ್ಲಿಸಿದ್ದೇನೆ. ಸಾಮಗ್ರಿಗಳನ್ನು ನೀಡಿದರೆ ವೆಚ್ಚವನ್ನು ಸ್ವತಃ ನಾನೇ ಭರಿಸಿ ಕೆಲಸ ನಿರ್ವಹಿಸಲಿದ್ದೇನೆ ಎಂದು ಕೋರಿದ್ದೇನೆ ಎಂದರು.
ವಿದ್ಯುತ್ ಲೈನ್ ಅಂದಾಜು ವೆಚ್ಚವು ೩.೧೮ ಲಕ್ಷ ರೂ. ವೆಚ್ಚವಾಗಲಿದೆ. ಬೆಟ್ಟವು ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ವ್ಯಾಪ್ತಿಗೆ ಬರಲಿದ್ದು, ಆನೆಗಳ ಓಡಾಟವಿದೆ. ಆದ್ದರಿಂದ ಬೆಟ್ಟದ ಮೇಲೆ ಎಲ್ಟಿ ಲೈನ್ ಮತ್ತು ಪರಿವರ್ಧಕಗಳನ್ನು ಅಳವಡಿಸಬೇಕಿದೆ. ಈ ಸಾಮಗ್ರಿಗಳು ಸೆಸ್ಕಾಂನಲ್ಲಿ ಲಭ್ಯವಿಲ್ಲ. ಇವುಗಳ ವೆಚ್ಚ ಕಳೆದು ೮.೨೧ ಲಕ್ಷ ರೂ. ಖರ್ಚಾಗಲಿದೆ. ಇದನ್ನು ನಾವು ಭರಿಸಿ ಕೆಲಸ ಮಾಡಲು ಸಿದ್ದರಿದ್ದೇವೆ ಎಂದರು.
ಈ ಬಗ್ಗೆ ಚಾ.ನಗರ ಜಿಲ್ಲಾಧಿಕಾರಿಗಳು ಕ್ರಮ ವಹಿಸುವಂತೆ ಮುಜರಾಯಿ ಇಲಾಖೆಗೆ ಪತ್ರ ಬರೆದಿದ್ದಾರೆ. ಆದರೆ, ಈ ಇಲಾಖೆಯಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗುತ್ತಿಲ್ಲ. ಸಂಬoಧಿಸಿದವರು ಅನುಮತಿ ನೀಡಬೇಕೆಂದು ಆಗ್ರಹಿಸಿದರು.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…