ಚಾಮರಾಜನಗರ: ಪ್ರಸಿದ್ದ ಯಾತ್ರಾಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಜರಾಯಿ ಇಲಾಖೆಯು ಅನುಮತಿ ನೀಡದೆ ಅಲೆದಾಡಿಸುತ್ತಿದ್ದಾರೆ ಎಂದು ಮೈಸೂರಿನ ಸಂಜಯ್ ಎಲೆಕ್ಟ್ರಿಕಲ್ ಮಾಲೀಕರಾದ ಆರ್.ಶ್ರೀಪಾಲ್ ದೂರಿದ್ದಾರೆ.
೪ ತಿಂಗಳ ಹಿಂದೆ ಬೆಟ್ಟಕ್ಕೆ ಭೇಟಿ ನೀಡಿದ್ದಾಗ ವಿದ್ಯುತ್ ಸಂಪರ್ಕ ಇಲ್ಲದಿರುವುದು ಕಂಡುಬoತು. ನಾನು ಸಂಪರ್ಕ ಕಲ್ಪಿಸುವ ಹರಕೆ ಹೊತ್ತಿದ್ದೇನೆ. ಆದರೆ, ಸಂಬoಧಿಸಿದವರಿoದ ಅವಕಾಶ ಸಿಗುತ್ತಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬoಧ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸ್ಥಳೀಯ ಶಾಸಕ ಸಿ.ಎಸ್.ನಿರಂಜನಕುಮಾರ್, ಗುಂಡ್ಲುಪೇಟೆ ತಹಸೀಲ್ದಾರ್. ಅರಣ್ಯ ಇಲಾಖೆ, ಸೆಸ್ಕಾಂಗೆ ಮನವಿ ಸಲ್ಲಿಸಿದ್ದೇನೆ. ಸಾಮಗ್ರಿಗಳನ್ನು ನೀಡಿದರೆ ವೆಚ್ಚವನ್ನು ಸ್ವತಃ ನಾನೇ ಭರಿಸಿ ಕೆಲಸ ನಿರ್ವಹಿಸಲಿದ್ದೇನೆ ಎಂದು ಕೋರಿದ್ದೇನೆ ಎಂದರು.
ವಿದ್ಯುತ್ ಲೈನ್ ಅಂದಾಜು ವೆಚ್ಚವು ೩.೧೮ ಲಕ್ಷ ರೂ. ವೆಚ್ಚವಾಗಲಿದೆ. ಬೆಟ್ಟವು ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ವ್ಯಾಪ್ತಿಗೆ ಬರಲಿದ್ದು, ಆನೆಗಳ ಓಡಾಟವಿದೆ. ಆದ್ದರಿಂದ ಬೆಟ್ಟದ ಮೇಲೆ ಎಲ್ಟಿ ಲೈನ್ ಮತ್ತು ಪರಿವರ್ಧಕಗಳನ್ನು ಅಳವಡಿಸಬೇಕಿದೆ. ಈ ಸಾಮಗ್ರಿಗಳು ಸೆಸ್ಕಾಂನಲ್ಲಿ ಲಭ್ಯವಿಲ್ಲ. ಇವುಗಳ ವೆಚ್ಚ ಕಳೆದು ೮.೨೧ ಲಕ್ಷ ರೂ. ಖರ್ಚಾಗಲಿದೆ. ಇದನ್ನು ನಾವು ಭರಿಸಿ ಕೆಲಸ ಮಾಡಲು ಸಿದ್ದರಿದ್ದೇವೆ ಎಂದರು.
ಈ ಬಗ್ಗೆ ಚಾ.ನಗರ ಜಿಲ್ಲಾಧಿಕಾರಿಗಳು ಕ್ರಮ ವಹಿಸುವಂತೆ ಮುಜರಾಯಿ ಇಲಾಖೆಗೆ ಪತ್ರ ಬರೆದಿದ್ದಾರೆ. ಆದರೆ, ಈ ಇಲಾಖೆಯಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗುತ್ತಿಲ್ಲ. ಸಂಬoಧಿಸಿದವರು ಅನುಮತಿ ನೀಡಬೇಕೆಂದು ಆಗ್ರಹಿಸಿದರು.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…