ಜಿಲ್ಲೆಗಳು

ಜಿ.ಎಸ್.ಬೆಟ್ಟಕ್ಕೆ ವಿದ್ಯುತ್ ಸಂಪರ್ಕ : ಅವಕಾಶಕ್ಕೆ ಮನವಿ

ಚಾಮರಾಜನಗರ: ಪ್ರಸಿದ್ದ ಯಾತ್ರಾಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಜರಾಯಿ ಇಲಾಖೆಯು ಅನುಮತಿ ನೀಡದೆ ಅಲೆದಾಡಿಸುತ್ತಿದ್ದಾರೆ ಎಂದು ಮೈಸೂರಿನ ಸಂಜಯ್ ಎಲೆಕ್ಟ್ರಿಕಲ್ ಮಾಲೀಕರಾದ ಆರ್.ಶ್ರೀಪಾಲ್ ದೂರಿದ್ದಾರೆ.

೪ ತಿಂಗಳ ಹಿಂದೆ ಬೆಟ್ಟಕ್ಕೆ ಭೇಟಿ ನೀಡಿದ್ದಾಗ ವಿದ್ಯುತ್ ಸಂಪರ್ಕ ಇಲ್ಲದಿರುವುದು ಕಂಡುಬoತು. ನಾನು ಸಂಪರ್ಕ ಕಲ್ಪಿಸುವ ಹರಕೆ ಹೊತ್ತಿದ್ದೇನೆ. ಆದರೆ, ಸಂಬoಧಿಸಿದವರಿoದ ಅವಕಾಶ ಸಿಗುತ್ತಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬoಧ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸ್ಥಳೀಯ ಶಾಸಕ ಸಿ.ಎಸ್.ನಿರಂಜನಕುಮಾರ್, ಗುಂಡ್ಲುಪೇಟೆ ತಹಸೀಲ್ದಾರ್. ಅರಣ್ಯ ಇಲಾಖೆ, ಸೆಸ್ಕಾಂಗೆ ಮನವಿ ಸಲ್ಲಿಸಿದ್ದೇನೆ. ಸಾಮಗ್ರಿಗಳನ್ನು ನೀಡಿದರೆ ವೆಚ್ಚವನ್ನು ಸ್ವತಃ ನಾನೇ ಭರಿಸಿ ಕೆಲಸ ನಿರ್ವಹಿಸಲಿದ್ದೇನೆ ಎಂದು ಕೋರಿದ್ದೇನೆ ಎಂದರು.
ವಿದ್ಯುತ್ ಲೈನ್ ಅಂದಾಜು ವೆಚ್ಚವು ೩.೧೮ ಲಕ್ಷ ರೂ. ವೆಚ್ಚವಾಗಲಿದೆ. ಬೆಟ್ಟವು ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ವ್ಯಾಪ್ತಿಗೆ ಬರಲಿದ್ದು, ಆನೆಗಳ ಓಡಾಟವಿದೆ. ಆದ್ದರಿಂದ ಬೆಟ್ಟದ ಮೇಲೆ ಎಲ್‌ಟಿ ಲೈನ್ ಮತ್ತು  ಪರಿವರ್ಧಕಗಳನ್ನು ಅಳವಡಿಸಬೇಕಿದೆ. ಈ ಸಾಮಗ್ರಿಗಳು ಸೆಸ್ಕಾಂನಲ್ಲಿ ಲಭ್ಯವಿಲ್ಲ. ಇವುಗಳ ವೆಚ್ಚ ಕಳೆದು ೮.೨೧ ಲಕ್ಷ ರೂ. ಖರ್ಚಾಗಲಿದೆ. ಇದನ್ನು ನಾವು ಭರಿಸಿ ಕೆಲಸ ಮಾಡಲು ಸಿದ್ದರಿದ್ದೇವೆ ಎಂದರು.
ಈ ಬಗ್ಗೆ ಚಾ.ನಗರ ಜಿಲ್ಲಾಧಿಕಾರಿಗಳು ಕ್ರಮ ವಹಿಸುವಂತೆ ಮುಜರಾಯಿ ಇಲಾಖೆಗೆ ಪತ್ರ ಬರೆದಿದ್ದಾರೆ. ಆದರೆ, ಈ ಇಲಾಖೆಯಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗುತ್ತಿಲ್ಲ. ಸಂಬoಧಿಸಿದವರು ಅನುಮತಿ ನೀಡಬೇಕೆಂದು ಆಗ್ರಹಿಸಿದರು.

andolanait

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

2 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

3 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

3 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

8 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

9 hours ago