ಜಿಲ್ಲೆಗಳು

ಜಿ- 20 ಅಧ್ಯಕ್ಷತೆಗೆ ಏಕಿಷ್ಟು ಮಹತ್ವ ?

ಮೈಸೂರು: ಜಾಗತಿಕ ಸಂಘಟನೆಗಳಲ್ಲಿ ಅತಿ ಬಲಿಷ್ಠ ಸಂಘಟನೆ ಯಾವುದು ಎಂದು ಕೇಳಿದರೆ ಅದು ನಿಸ್ಸಂಶಯವಾಗಿ ಜಿ. 20 ಒಕ್ಕೂಟ. ವಿಶ್ವ ಆರ್ಥಿಕತೆಯ ಶೇ. 85 ರಷ್ಟು ಪಾಲು ಹೊಂದಿರುವ ಕಾರಣಕ್ಕಾಗಿ ಈ ಸಂಘಟನೆಗೆ ತನ್ನದೇ ಆದ ಮಹತ್ವವಿದೆ. ಈ ಒಕ್ಕೂಟದ ರಾಷ್ಟ್ರಗಳು ಜಗತ್ತಿನ ಜಿಡಿಪಿಯ ಶೇ 80ರಷ್ಟು, ಅಂತರರಾಷ್ಟ್ರೀಯ ವ್ಯಾಪಾರದ ಶೇ 75ರಷ್ಟು ಹಾಗೂ ಒಟ್ಟಾರೆ ಜನಸಂಖ್ಯೆಯ ಮೂರನೇ ಎರಡರಷ್ಟು ಭಾಗವನ್ನು ಹೊಂದಿವೆ. ಭಾರತ ಈಗ ಈ ಪ್ರತಿಷ್ಠಿತ ಒಕ್ಕೂಟದ ಅಧ್ಯಕ್ಷ. ಮುಂದಿನ ಒಂದು ವರ್ಷಗಳ ಕಾಲ ಈ ಒಕ್ಕೂಟಕ್ಕೆ ಸಂಬಂಧಿಸಿದ 200ಕ್ಕೂ ಹೆಚ್ಚು ಸಭೆಗಳನ್ನು ಆಯೋಜಿಸಲು ಭಾರತ ಸಿದ್ಧವಾಗಿದೆ. ಮುಂದಿನ ವರ್ಷ ಏಪ್ರಿಲ್‌ 20 ರಂದು ಜಿ – 20 ಶೃಂಗಸಭೆ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ನಡೆಯಲಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸೇರಿ ಅಂತಾರಾಷ್ಟ್ರೀಯ ಒಕ್ಕೂಟಗಳ ಅಧ್ಯಕ್ಷತೆಯನ್ನು ಇಂಗ್ಲೀಷ್‌ ವರ್ಣಮಾಲೆಯ ಪ್ರಕಾರ ನೀಡುವುದು ಪದ್ಧತಿ. ಇದೇ ರೀತಿ, ಇಂಡೋನೇಷ್ಯಾದ ಬಳಿಕ ಜಿ – 20 ಶೃಂಗಸಭೆಯ ಅಧ್ಯಕ್ಷತೆ ಭಾರತಕ್ಕೆ ಒಲಿದು ಬಂದಿದೆ.

ಜಿ-೨೦ ಒಕ್ಕೂಟದ ಅಧ್ಯಕ್ಷತೆ ದೇಶದ ಆರ್ಥಿಕ ಬೆಳವಣಿಗೆಗೆ ಮತ್ತಷ್ಟು ವೇಗ ನೀಡಲಿದೆ ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿಶ್ವಾಸ. ಚುನಾವಣಾ ವರ್ಷದಲ್ಲಿ ಇಂತಹ ಮಹತ್ವದ ವೇದಿಕೆಯ ಅಧ್ಯಕ್ಷತೆ ಸಿಕ್ಕಿರುವುದು ಪ್ರಧಾನಿ ಮೋದಿ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಆದರೆ ಪ್ರತಿಪಕ್ಷಗಳ ಪಾಲಿಗೆ ಈ ಬೆಳವಣಿಗೆ ಖುಷಿಕೊಟ್ಟಿಲ್ಲ.


ರಾಜಕೀಯವನ್ನು ಹೊರತುಪಡಿಸಿ ನೋಡಿದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ತನ್ನ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಜಿ.20 ಶೃಂಗ ಅತ್ಯುತ್ತಮ ವೇದಿಕೆಯಾಗಲಿದೆ. ಜಿ.20 ಅಧ್ಯಕ್ಷತೆಯ ನೆನಪಿಗಾಗಿ ಡಿಸೆಂಬರ್‌ ಒಂದರಂದು ಹಂಪಿ ಸೇರಿದಂತೆ ಪಾರಂಪರಿಕ ತಾಣಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿತ್ತು. ಜಿ 20 ಶೃಂಗದ ಸಭೆಗಳ ಜತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡುವುದು ಕೇಂದ್ರ ಸರಕಾರದ ಉದ್ದೇಶ.

ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಜಿ-೨೦ ಶೃಂಗ ಸಭೆಯ ೨೦೦ ಸಭೆಗಳನ್ನು ದೇಶಾದ್ಯಂತ ನಡೆಸಲು ಉದ್ದೇಶಿಸಲಾಗಿದೆ. ಕಾಶ್ಮೀರದಲ್ಲೂ ಜಿ-೨೦ ಸಭೆಗಳನ್ನು ಆಯೋಜಿಸಲು ಸರ್ಕಾರ ಪರಿಗಣಿಸುತ್ತಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ತಿಳಿಸಿದ್ದಾರೆ. ಮಾಹಿತಿ ತಂತ್ರಜ್ಞಾನ, ಸೆಮಿಕಂಡಕ್ಟರ್ , ೫ಜಿ, ಕೃತಕ ಬುದ್ಧಿಮತ್ತೆ, ವಾಣಿಜ್ಯ ಬಾಹ್ಯಾಕಾಶ ಉಡಾವಣೆಗಳು, ಉಪಗ್ರಹ ತಯಾರಿಕೆ ಸೇರಿದಂತೆ ನಾನಾ ವಿಷಯಗಳ ಕುರಿತು ಚರ್ಚೆಗೆ ಈ ಸಭೆ ನಡೆಯಲಿದೆ.

ಪ್ರವಾಸಿ ನಗರವಾಗಿ ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡಿರುವ ಮೈಸೂರಿನಲ್ಲೂ ಜಿ.20 ಶೃಂಗದ ಒಂದೆರಡು ಸಭೆಗಳನ್ನು ನಡೆಸುವ ಬಗ್ಗೆ ಪರಿಶೀಲನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇದು ಸಾಧ್ಯವಾದರೆ ಸಾಂಸ್ಕೃತಿಕ ನಗರದಲ್ಲಿ ಮತ್ತೊಮ್ಮೆ ದಸರಾ ಕಳೆ ಮೂಡಲಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago