ಜಿಲ್ಲೆಗಳು

ಜಿ- 20 ಅಧ್ಯಕ್ಷತೆಗೆ ಏಕಿಷ್ಟು ಮಹತ್ವ ?

ಮೈಸೂರು: ಜಾಗತಿಕ ಸಂಘಟನೆಗಳಲ್ಲಿ ಅತಿ ಬಲಿಷ್ಠ ಸಂಘಟನೆ ಯಾವುದು ಎಂದು ಕೇಳಿದರೆ ಅದು ನಿಸ್ಸಂಶಯವಾಗಿ ಜಿ. 20 ಒಕ್ಕೂಟ. ವಿಶ್ವ ಆರ್ಥಿಕತೆಯ ಶೇ. 85 ರಷ್ಟು ಪಾಲು ಹೊಂದಿರುವ ಕಾರಣಕ್ಕಾಗಿ ಈ ಸಂಘಟನೆಗೆ ತನ್ನದೇ ಆದ ಮಹತ್ವವಿದೆ. ಈ ಒಕ್ಕೂಟದ ರಾಷ್ಟ್ರಗಳು ಜಗತ್ತಿನ ಜಿಡಿಪಿಯ ಶೇ 80ರಷ್ಟು, ಅಂತರರಾಷ್ಟ್ರೀಯ ವ್ಯಾಪಾರದ ಶೇ 75ರಷ್ಟು ಹಾಗೂ ಒಟ್ಟಾರೆ ಜನಸಂಖ್ಯೆಯ ಮೂರನೇ ಎರಡರಷ್ಟು ಭಾಗವನ್ನು ಹೊಂದಿವೆ. ಭಾರತ ಈಗ ಈ ಪ್ರತಿಷ್ಠಿತ ಒಕ್ಕೂಟದ ಅಧ್ಯಕ್ಷ. ಮುಂದಿನ ಒಂದು ವರ್ಷಗಳ ಕಾಲ ಈ ಒಕ್ಕೂಟಕ್ಕೆ ಸಂಬಂಧಿಸಿದ 200ಕ್ಕೂ ಹೆಚ್ಚು ಸಭೆಗಳನ್ನು ಆಯೋಜಿಸಲು ಭಾರತ ಸಿದ್ಧವಾಗಿದೆ. ಮುಂದಿನ ವರ್ಷ ಏಪ್ರಿಲ್‌ 20 ರಂದು ಜಿ – 20 ಶೃಂಗಸಭೆ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ನಡೆಯಲಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸೇರಿ ಅಂತಾರಾಷ್ಟ್ರೀಯ ಒಕ್ಕೂಟಗಳ ಅಧ್ಯಕ್ಷತೆಯನ್ನು ಇಂಗ್ಲೀಷ್‌ ವರ್ಣಮಾಲೆಯ ಪ್ರಕಾರ ನೀಡುವುದು ಪದ್ಧತಿ. ಇದೇ ರೀತಿ, ಇಂಡೋನೇಷ್ಯಾದ ಬಳಿಕ ಜಿ – 20 ಶೃಂಗಸಭೆಯ ಅಧ್ಯಕ್ಷತೆ ಭಾರತಕ್ಕೆ ಒಲಿದು ಬಂದಿದೆ.

ಜಿ-೨೦ ಒಕ್ಕೂಟದ ಅಧ್ಯಕ್ಷತೆ ದೇಶದ ಆರ್ಥಿಕ ಬೆಳವಣಿಗೆಗೆ ಮತ್ತಷ್ಟು ವೇಗ ನೀಡಲಿದೆ ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿಶ್ವಾಸ. ಚುನಾವಣಾ ವರ್ಷದಲ್ಲಿ ಇಂತಹ ಮಹತ್ವದ ವೇದಿಕೆಯ ಅಧ್ಯಕ್ಷತೆ ಸಿಕ್ಕಿರುವುದು ಪ್ರಧಾನಿ ಮೋದಿ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಆದರೆ ಪ್ರತಿಪಕ್ಷಗಳ ಪಾಲಿಗೆ ಈ ಬೆಳವಣಿಗೆ ಖುಷಿಕೊಟ್ಟಿಲ್ಲ.


ರಾಜಕೀಯವನ್ನು ಹೊರತುಪಡಿಸಿ ನೋಡಿದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ತನ್ನ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಜಿ.20 ಶೃಂಗ ಅತ್ಯುತ್ತಮ ವೇದಿಕೆಯಾಗಲಿದೆ. ಜಿ.20 ಅಧ್ಯಕ್ಷತೆಯ ನೆನಪಿಗಾಗಿ ಡಿಸೆಂಬರ್‌ ಒಂದರಂದು ಹಂಪಿ ಸೇರಿದಂತೆ ಪಾರಂಪರಿಕ ತಾಣಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿತ್ತು. ಜಿ 20 ಶೃಂಗದ ಸಭೆಗಳ ಜತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡುವುದು ಕೇಂದ್ರ ಸರಕಾರದ ಉದ್ದೇಶ.

ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಜಿ-೨೦ ಶೃಂಗ ಸಭೆಯ ೨೦೦ ಸಭೆಗಳನ್ನು ದೇಶಾದ್ಯಂತ ನಡೆಸಲು ಉದ್ದೇಶಿಸಲಾಗಿದೆ. ಕಾಶ್ಮೀರದಲ್ಲೂ ಜಿ-೨೦ ಸಭೆಗಳನ್ನು ಆಯೋಜಿಸಲು ಸರ್ಕಾರ ಪರಿಗಣಿಸುತ್ತಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ತಿಳಿಸಿದ್ದಾರೆ. ಮಾಹಿತಿ ತಂತ್ರಜ್ಞಾನ, ಸೆಮಿಕಂಡಕ್ಟರ್ , ೫ಜಿ, ಕೃತಕ ಬುದ್ಧಿಮತ್ತೆ, ವಾಣಿಜ್ಯ ಬಾಹ್ಯಾಕಾಶ ಉಡಾವಣೆಗಳು, ಉಪಗ್ರಹ ತಯಾರಿಕೆ ಸೇರಿದಂತೆ ನಾನಾ ವಿಷಯಗಳ ಕುರಿತು ಚರ್ಚೆಗೆ ಈ ಸಭೆ ನಡೆಯಲಿದೆ.

ಪ್ರವಾಸಿ ನಗರವಾಗಿ ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡಿರುವ ಮೈಸೂರಿನಲ್ಲೂ ಜಿ.20 ಶೃಂಗದ ಒಂದೆರಡು ಸಭೆಗಳನ್ನು ನಡೆಸುವ ಬಗ್ಗೆ ಪರಿಶೀಲನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇದು ಸಾಧ್ಯವಾದರೆ ಸಾಂಸ್ಕೃತಿಕ ನಗರದಲ್ಲಿ ಮತ್ತೊಮ್ಮೆ ದಸರಾ ಕಳೆ ಮೂಡಲಿದೆ.

andolanait

Recent Posts

ಕಾರು-ಖಾಸಗಿ ಬಸ್‌ ಡಿಕ್ಕಿ : 6 ಮಂದಿ ಸಜೀವ ದಹನ

ಯಾದಗಿರಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ…

55 mins ago

ಕುಡಿಯಲು ಶುದ್ಧ ನೀರಿಲ್ಲದೆ ಆಲಗೂಡು ಗ್ರಾಮಸ್ಥರ ಪರದಾಟ

ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ವಿಧಾನಸಭಾ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ವಿಎಫ್‌ಎಕ್ಸ್‌, ಗ್ರಾಫಿಕ್ಸ್‌ಗೆ ನೆರೆರಾಜ್ಯಗಳತ್ತ ಐಟಿ ನಗರದ ಸಿನಿಮಂದಿ

ವೈಡ್‌ ಆಂಗಲ್‌ ನಿರ್ದೇಶಕ ಚೈತನ್ಯ ಇಮ್ಮಡಿ ಪುಲಿಕೇಶಿಯ ಜೀವನ ಯಾನವನ್ನು ಮುಂಬೈ ಮೂಲದ ನಿರ್ಮಾಣ ಸಂಸ್ಥೆಗಾಗಿ ಬೆಳ್ಳಿತೆರೆಗೆ ನಿರ್ದೇಶಿಸಲಿದ್ದಾರೆ. ಅದರ…

2 hours ago

ಓದುಗರ ಪತ್ರ | ಅನಗತ್ಯ ದೂರವಾಣಿ ಕರೆ ಕಿರಿಕಿರಿ ತಪ್ಪಿಸಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಏ.೨೪ರಂದು ಪ್ರಕಟವಾಗಲಿದೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರು ಎಂಬ ನಾಣ್ಣುಡಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ…

2 hours ago

ಓದುಗರ ಪತ್ರ | ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಕಲ್ಪಿಸಿ

ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದು ಶಿಕ್ಷಣ ಇಲಾಖೆಯ ವ್ಯವಸ್ಥಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಅಂಕಿಅಂಶಗಳ ಪ್ರಕಾರ…

2 hours ago

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…

3 hours ago