ಜಿಲ್ಲೆಗಳು

ಜಿ- 20 ಅಧ್ಯಕ್ಷತೆಗೆ ಏಕಿಷ್ಟು ಮಹತ್ವ ?

ಮೈಸೂರು: ಜಾಗತಿಕ ಸಂಘಟನೆಗಳಲ್ಲಿ ಅತಿ ಬಲಿಷ್ಠ ಸಂಘಟನೆ ಯಾವುದು ಎಂದು ಕೇಳಿದರೆ ಅದು ನಿಸ್ಸಂಶಯವಾಗಿ ಜಿ. 20 ಒಕ್ಕೂಟ. ವಿಶ್ವ ಆರ್ಥಿಕತೆಯ ಶೇ. 85 ರಷ್ಟು ಪಾಲು ಹೊಂದಿರುವ ಕಾರಣಕ್ಕಾಗಿ ಈ ಸಂಘಟನೆಗೆ ತನ್ನದೇ ಆದ ಮಹತ್ವವಿದೆ. ಈ ಒಕ್ಕೂಟದ ರಾಷ್ಟ್ರಗಳು ಜಗತ್ತಿನ ಜಿಡಿಪಿಯ ಶೇ 80ರಷ್ಟು, ಅಂತರರಾಷ್ಟ್ರೀಯ ವ್ಯಾಪಾರದ ಶೇ 75ರಷ್ಟು ಹಾಗೂ ಒಟ್ಟಾರೆ ಜನಸಂಖ್ಯೆಯ ಮೂರನೇ ಎರಡರಷ್ಟು ಭಾಗವನ್ನು ಹೊಂದಿವೆ. ಭಾರತ ಈಗ ಈ ಪ್ರತಿಷ್ಠಿತ ಒಕ್ಕೂಟದ ಅಧ್ಯಕ್ಷ. ಮುಂದಿನ ಒಂದು ವರ್ಷಗಳ ಕಾಲ ಈ ಒಕ್ಕೂಟಕ್ಕೆ ಸಂಬಂಧಿಸಿದ 200ಕ್ಕೂ ಹೆಚ್ಚು ಸಭೆಗಳನ್ನು ಆಯೋಜಿಸಲು ಭಾರತ ಸಿದ್ಧವಾಗಿದೆ. ಮುಂದಿನ ವರ್ಷ ಏಪ್ರಿಲ್‌ 20 ರಂದು ಜಿ – 20 ಶೃಂಗಸಭೆ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ನಡೆಯಲಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸೇರಿ ಅಂತಾರಾಷ್ಟ್ರೀಯ ಒಕ್ಕೂಟಗಳ ಅಧ್ಯಕ್ಷತೆಯನ್ನು ಇಂಗ್ಲೀಷ್‌ ವರ್ಣಮಾಲೆಯ ಪ್ರಕಾರ ನೀಡುವುದು ಪದ್ಧತಿ. ಇದೇ ರೀತಿ, ಇಂಡೋನೇಷ್ಯಾದ ಬಳಿಕ ಜಿ – 20 ಶೃಂಗಸಭೆಯ ಅಧ್ಯಕ್ಷತೆ ಭಾರತಕ್ಕೆ ಒಲಿದು ಬಂದಿದೆ.

ಜಿ-೨೦ ಒಕ್ಕೂಟದ ಅಧ್ಯಕ್ಷತೆ ದೇಶದ ಆರ್ಥಿಕ ಬೆಳವಣಿಗೆಗೆ ಮತ್ತಷ್ಟು ವೇಗ ನೀಡಲಿದೆ ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿಶ್ವಾಸ. ಚುನಾವಣಾ ವರ್ಷದಲ್ಲಿ ಇಂತಹ ಮಹತ್ವದ ವೇದಿಕೆಯ ಅಧ್ಯಕ್ಷತೆ ಸಿಕ್ಕಿರುವುದು ಪ್ರಧಾನಿ ಮೋದಿ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಆದರೆ ಪ್ರತಿಪಕ್ಷಗಳ ಪಾಲಿಗೆ ಈ ಬೆಳವಣಿಗೆ ಖುಷಿಕೊಟ್ಟಿಲ್ಲ.


ರಾಜಕೀಯವನ್ನು ಹೊರತುಪಡಿಸಿ ನೋಡಿದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ತನ್ನ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಜಿ.20 ಶೃಂಗ ಅತ್ಯುತ್ತಮ ವೇದಿಕೆಯಾಗಲಿದೆ. ಜಿ.20 ಅಧ್ಯಕ್ಷತೆಯ ನೆನಪಿಗಾಗಿ ಡಿಸೆಂಬರ್‌ ಒಂದರಂದು ಹಂಪಿ ಸೇರಿದಂತೆ ಪಾರಂಪರಿಕ ತಾಣಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿತ್ತು. ಜಿ 20 ಶೃಂಗದ ಸಭೆಗಳ ಜತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡುವುದು ಕೇಂದ್ರ ಸರಕಾರದ ಉದ್ದೇಶ.

ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಜಿ-೨೦ ಶೃಂಗ ಸಭೆಯ ೨೦೦ ಸಭೆಗಳನ್ನು ದೇಶಾದ್ಯಂತ ನಡೆಸಲು ಉದ್ದೇಶಿಸಲಾಗಿದೆ. ಕಾಶ್ಮೀರದಲ್ಲೂ ಜಿ-೨೦ ಸಭೆಗಳನ್ನು ಆಯೋಜಿಸಲು ಸರ್ಕಾರ ಪರಿಗಣಿಸುತ್ತಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ತಿಳಿಸಿದ್ದಾರೆ. ಮಾಹಿತಿ ತಂತ್ರಜ್ಞಾನ, ಸೆಮಿಕಂಡಕ್ಟರ್ , ೫ಜಿ, ಕೃತಕ ಬುದ್ಧಿಮತ್ತೆ, ವಾಣಿಜ್ಯ ಬಾಹ್ಯಾಕಾಶ ಉಡಾವಣೆಗಳು, ಉಪಗ್ರಹ ತಯಾರಿಕೆ ಸೇರಿದಂತೆ ನಾನಾ ವಿಷಯಗಳ ಕುರಿತು ಚರ್ಚೆಗೆ ಈ ಸಭೆ ನಡೆಯಲಿದೆ.

ಪ್ರವಾಸಿ ನಗರವಾಗಿ ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡಿರುವ ಮೈಸೂರಿನಲ್ಲೂ ಜಿ.20 ಶೃಂಗದ ಒಂದೆರಡು ಸಭೆಗಳನ್ನು ನಡೆಸುವ ಬಗ್ಗೆ ಪರಿಶೀಲನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇದು ಸಾಧ್ಯವಾದರೆ ಸಾಂಸ್ಕೃತಿಕ ನಗರದಲ್ಲಿ ಮತ್ತೊಮ್ಮೆ ದಸರಾ ಕಳೆ ಮೂಡಲಿದೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago