ಜಿಲ್ಲೆಗಳು

ಹಣ ಎಣಿಸಲು ಯಂತ್ರ ಇಟ್ಟುಕೊಂಡಿದ್ದ ಜೂಜುಕೋರರು!

೩೨ ಮಂದಿ ಬಂಧಿಸಿ, ೧೭.೨೪ ಲಕ್ಷ ರೂ. ವಶಪಡಿಸಿಕೊಂಡ ಪೊಲೀಸರು

ಮೈಸೂರು: ನಗರದ ಪ್ರತಿಷ್ಠಿತ ಬಡಾವಣೆಯ ಗ್ಯಾರೇಜ್‌ವೊಂದರ ಹಿಂಭಾಗದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ವಿಜಯನಗರ ಠಾಣೆ ಮತ್ತು ಸಿಸಿಬಿ ಪೊಲೀಸರು, ಹಣ ಎಣಿಸುವ ಯಂತ್ರವನ್ನು ಪಕ್ಕದಲ್ಲೇ ಇಟ್ಟುಕೊಂಡು ಇಸ್ಪೀಟ್ ಆಡುತ್ತಿದ್ದ ೩೨ ಜನರನ್ನು ಬಂಧಿಸಿ, ೧೭.೨೪ ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ಹಿನಕಲ್ ಗ್ರಾಮದ ಯಶಸ್ವಿನಿ ಕಲ್ಯಾಣಮಂಟಪದ ಬಳಿಯ ಆದಿತ್ಯ ಬಡಾವಣೆಯ ಗ್ಯಾರೇಜ್ ಹಿಂಭಾಗದ ಕೊಠಡಿಯಲ್ಲಿ ಜೂಜಾಡುತ್ತಿರುವ ಬಗ್ಗೆ ವಿಜಯನಗರ ಠಾಣೆ ಪೊಲೀಸರಿಗೆ ಮಾಹಿತಿ ದೊರೆತಿದೆ. ವಿಜಯನಗರ ಠಾಣೆ ಪೊಲೀಸರು ಮತ್ತು ಸಿಸಿಬಿ ಪೊಲೀಸರು ರಾತ್ರಿ ಜೂಜು ಅಡ್ಡೆಯ ಮೇಲೆ ದಿಢೀರ್ ಜಂಟಿ ಕಾರ್ಯಾಚರಣೆ ನಡೆಸಿ ಜೂಜಾಡುತ್ತಿದ್ದ ೩೨ ಜನರನ್ನು ಬಂಧಿಸಿದರು. ಜೂಜಾಟಕ್ಕೆ ಪಣಕ್ಕಿಡಲಾಗಿದ್ದ ೧೭.೨೪ ಲಕ್ಷ ನಗದು, ಹಣವ ಎಣಿಸುವ ಯಂತ್ರವನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ಮಾರ್ಗದರ್ಶನದಲ್ಲಿ ನರಸಿಂಹರಾಜ ವಿಭಾಗದ ಎಸಿಪಿ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿಜಯನಗರ ಠಾಣೆ ಇನ್‌ಸ್ಪೆಕ್ಟರ್ ಬಿ.ಎಸ್.ರವಿಶಂಕರ್, ಸಿಸಿಬಿ ಘಟಕದ ಇನ್‌ಸ್ಪೆಕ್ಟರ್ ಜಿ.ಶೇಖರ್ ಸೇರಿದಂತೆ ಇನ್ನಿತರ ಸಿಬ್ಬಂದಿ ಪಾಲ್ಗೊಂಡಿದ್ದರು.

andolana

Recent Posts

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

1 hour ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

2 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

2 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

2 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

4 hours ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

4 hours ago