೩೨ ಮಂದಿ ಬಂಧಿಸಿ, ೧೭.೨೪ ಲಕ್ಷ ರೂ. ವಶಪಡಿಸಿಕೊಂಡ ಪೊಲೀಸರು
ಮೈಸೂರು: ನಗರದ ಪ್ರತಿಷ್ಠಿತ ಬಡಾವಣೆಯ ಗ್ಯಾರೇಜ್ವೊಂದರ ಹಿಂಭಾಗದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ವಿಜಯನಗರ ಠಾಣೆ ಮತ್ತು ಸಿಸಿಬಿ ಪೊಲೀಸರು, ಹಣ ಎಣಿಸುವ ಯಂತ್ರವನ್ನು ಪಕ್ಕದಲ್ಲೇ ಇಟ್ಟುಕೊಂಡು ಇಸ್ಪೀಟ್ ಆಡುತ್ತಿದ್ದ ೩೨ ಜನರನ್ನು ಬಂಧಿಸಿ, ೧೭.೨೪ ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.
ಹಿನಕಲ್ ಗ್ರಾಮದ ಯಶಸ್ವಿನಿ ಕಲ್ಯಾಣಮಂಟಪದ ಬಳಿಯ ಆದಿತ್ಯ ಬಡಾವಣೆಯ ಗ್ಯಾರೇಜ್ ಹಿಂಭಾಗದ ಕೊಠಡಿಯಲ್ಲಿ ಜೂಜಾಡುತ್ತಿರುವ ಬಗ್ಗೆ ವಿಜಯನಗರ ಠಾಣೆ ಪೊಲೀಸರಿಗೆ ಮಾಹಿತಿ ದೊರೆತಿದೆ. ವಿಜಯನಗರ ಠಾಣೆ ಪೊಲೀಸರು ಮತ್ತು ಸಿಸಿಬಿ ಪೊಲೀಸರು ರಾತ್ರಿ ಜೂಜು ಅಡ್ಡೆಯ ಮೇಲೆ ದಿಢೀರ್ ಜಂಟಿ ಕಾರ್ಯಾಚರಣೆ ನಡೆಸಿ ಜೂಜಾಡುತ್ತಿದ್ದ ೩೨ ಜನರನ್ನು ಬಂಧಿಸಿದರು. ಜೂಜಾಟಕ್ಕೆ ಪಣಕ್ಕಿಡಲಾಗಿದ್ದ ೧೭.೨೪ ಲಕ್ಷ ನಗದು, ಹಣವ ಎಣಿಸುವ ಯಂತ್ರವನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ಮಾರ್ಗದರ್ಶನದಲ್ಲಿ ನರಸಿಂಹರಾಜ ವಿಭಾಗದ ಎಸಿಪಿ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿಜಯನಗರ ಠಾಣೆ ಇನ್ಸ್ಪೆಕ್ಟರ್ ಬಿ.ಎಸ್.ರವಿಶಂಕರ್, ಸಿಸಿಬಿ ಘಟಕದ ಇನ್ಸ್ಪೆಕ್ಟರ್ ಜಿ.ಶೇಖರ್ ಸೇರಿದಂತೆ ಇನ್ನಿತರ ಸಿಬ್ಬಂದಿ ಪಾಲ್ಗೊಂಡಿದ್ದರು.
ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು…
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…