೩೨ ಮಂದಿ ಬಂಧಿಸಿ, ೧೭.೨೪ ಲಕ್ಷ ರೂ. ವಶಪಡಿಸಿಕೊಂಡ ಪೊಲೀಸರು
ಮೈಸೂರು: ನಗರದ ಪ್ರತಿಷ್ಠಿತ ಬಡಾವಣೆಯ ಗ್ಯಾರೇಜ್ವೊಂದರ ಹಿಂಭಾಗದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ವಿಜಯನಗರ ಠಾಣೆ ಮತ್ತು ಸಿಸಿಬಿ ಪೊಲೀಸರು, ಹಣ ಎಣಿಸುವ ಯಂತ್ರವನ್ನು ಪಕ್ಕದಲ್ಲೇ ಇಟ್ಟುಕೊಂಡು ಇಸ್ಪೀಟ್ ಆಡುತ್ತಿದ್ದ ೩೨ ಜನರನ್ನು ಬಂಧಿಸಿ, ೧೭.೨೪ ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.
ಹಿನಕಲ್ ಗ್ರಾಮದ ಯಶಸ್ವಿನಿ ಕಲ್ಯಾಣಮಂಟಪದ ಬಳಿಯ ಆದಿತ್ಯ ಬಡಾವಣೆಯ ಗ್ಯಾರೇಜ್ ಹಿಂಭಾಗದ ಕೊಠಡಿಯಲ್ಲಿ ಜೂಜಾಡುತ್ತಿರುವ ಬಗ್ಗೆ ವಿಜಯನಗರ ಠಾಣೆ ಪೊಲೀಸರಿಗೆ ಮಾಹಿತಿ ದೊರೆತಿದೆ. ವಿಜಯನಗರ ಠಾಣೆ ಪೊಲೀಸರು ಮತ್ತು ಸಿಸಿಬಿ ಪೊಲೀಸರು ರಾತ್ರಿ ಜೂಜು ಅಡ್ಡೆಯ ಮೇಲೆ ದಿಢೀರ್ ಜಂಟಿ ಕಾರ್ಯಾಚರಣೆ ನಡೆಸಿ ಜೂಜಾಡುತ್ತಿದ್ದ ೩೨ ಜನರನ್ನು ಬಂಧಿಸಿದರು. ಜೂಜಾಟಕ್ಕೆ ಪಣಕ್ಕಿಡಲಾಗಿದ್ದ ೧೭.೨೪ ಲಕ್ಷ ನಗದು, ಹಣವ ಎಣಿಸುವ ಯಂತ್ರವನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ಮಾರ್ಗದರ್ಶನದಲ್ಲಿ ನರಸಿಂಹರಾಜ ವಿಭಾಗದ ಎಸಿಪಿ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿಜಯನಗರ ಠಾಣೆ ಇನ್ಸ್ಪೆಕ್ಟರ್ ಬಿ.ಎಸ್.ರವಿಶಂಕರ್, ಸಿಸಿಬಿ ಘಟಕದ ಇನ್ಸ್ಪೆಕ್ಟರ್ ಜಿ.ಶೇಖರ್ ಸೇರಿದಂತೆ ಇನ್ನಿತರ ಸಿಬ್ಬಂದಿ ಪಾಲ್ಗೊಂಡಿದ್ದರು.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…
ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…