ಜಿಲ್ಲೆಗಳು

ಗಣಪತಿ ಹಬ್ಬ ಸಾಮರಸ್ಯವನ್ನು ಮೂಡಿಸುತ್ತಿದೆ : ಬಿ. ವೆಂಕಟೇಶ್

ಹನೂರು: ಸ್ವಾತಂತ್ರ್ಯ ಹೋರಾಟಗಾರ ಬಾಲ ಗಂಗಾಧರ ತಿಲಕ್ ರವರ ಪ್ರೇರಣೆಯ ಹಾದಿಯಲ್ಲಿ ಗಣಪತಿ ಪ್ರತಿಷ್ಠಾಪಿಸುವ ಈ ಹಬ್ಬ ಪ್ರತಿಯೊಬ್ಬರಲ್ಲಿಯೂ ಸಾಮರಸ್ಯವನ್ನುಮಊಡಿಸುತ್ತಿದೆ.. ಮತ್ತು ಒಗ್ಗಟ್ಟನ್ನು ಮೂಡಿಸಲಾಗಿದೆ ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ಒಬಿಸಿ ಸಂಯೋಜಕ ಬಿ. ವೆಂಕಟೇಶ್ ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯಲ್ಲಿ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚದ ವತಿಯಿಂದ ಕೈಗೊಳ್ಳಲಾಗಿರುವ ಕಾರ್ಯಕ್ರಮಗಳ ಬಗ್ಗೆ ಸುದ್ದಿಗಾರರೊಡನೆ ಮಾತನಾಡಿದರು.

ಸ್ವತಂತ್ರ ಪೂರ್ವದಲ್ಲಿ ಜನರನ್ನು ಒಗ್ಗೂಡಿಸುವ ಸಲುವಾಗಿ ಬಾಲ ಗಂಗಾಧರ ತಿಲಕ್ ರವರು ಜಾರಿಗೆ ತಂದ ಗ್ರಾಮ ಗ್ರಾಮದಲ್ಲೂ ಬೀದಿ ಬೀದಿಯಲ್ಲಿ ಗಣಪತಿ ಷ್ಠಾಪನೆ ಜನರನ್ನು ಸಾಮರಸ್ಯದಿಂದ ಒಗ್ಗಟ್ಟಿನಿಂದ ಸಾಗುವಂತೆ ಮಾಡುತ್ತಿತ್ತು. ಕ್ಷೇತ್ರ ವ್ಯಾಪ್ತಿಯ 150ಕ್ಕೂ ಹೆಚ್ಚು ಗ್ರಾಮಗಳಲ್ಲಿ240ಕ್ಕೂ ಹೆಚ್ಚು ಗಣೇಶ ಪ್ರತಿಷ್ಠಾಪನೆ ಮಾಡುವ ದಿಸೆಯಲ್ಲಿ ಆರ್ಥಿಕ ಸಹಾಯ ಮಾಡಲಾಗಿದೆ. ಕಳೆದೆರಡು ವರ್ಷಗಳಿಂದ ದೇಶಾದ್ಯಂತ ಕರೋನಾ ವೈರಸ್ ವ್ಯಾಪಿಸಿದ್ದ ಹಿನ್ನೆಲೆ ಎಲ್ಲಾ ಹಬ್ಬಗಳನ್ನು ಸಂಪ್ರದಾಯದಂತೆ ಸರಳವಾಗಿ ಆಚರಿಸಲು ಸರ್ಕಾರ ಆದೇಶಿಸಿತ್ತು. ಈ ವರ್ಷ ಕರೋನಾ ವೈರಸ್ ಕಡಿಮೆ ಇರುವುದರಿಂದ, ಗೌರಿ ಗಣೇಶ ಹಬ್ಬವನ್ನು ಆಚರಣೆ ಮಾಡಲು ಸರ್ಕಾರ ಯಾವುದೇ ನಿರ್ಬಂಧ ಹೇರದೆ ಇರುವುದರಿಂದ ದೇಶಾದ್ಯಂತ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಗುತ್ತಿದೆ ಇದು ಸಂತಸದ ವಿಚಾರ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಒಬಿಸಿ ಸಂಚಾಲಕ ಬಿ ವೆಂಕಟೇಶ್ ರವರ ಕಚೇರಿ ಸಿಬ್ಬಂದಿಗಳಾದ ರಾಮ್ ಚರಣ್, ಲೋಕೇಶ್ ಜತ್ತಿ, ಅರವಿಂದ್, ಅಪ್ಪು ಇನ್ನಿತರರು ಹಾಜರಿದ್ದರು.

andolanait

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

5 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

5 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

8 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

9 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

10 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

10 hours ago