Mysore
24
clear sky

Social Media

ಶುಕ್ರವಾರ, 24 ಏಪ್ರಿಲ 2026
Light
Dark

ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ : ಮಹಾತ್ಮನಿಗೆ ನಮನ ಸಲ್ಲಿಸಿದ ರಾಹುಲ್

ಮೈಸೂರು : ಗಾಂಧಿ ಜಯಂತಿ ಹಿನ್ನೆಲೆ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆಯು ಮೂರನೇ ದಿನವಾದ ಇಂದು   ನಂಜನಗೂಡಿನ ಬದನವಾಳು  ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿದ್ದು ಅಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಗುತ್ತಿದೆ.

ರಾಹುಲ್ ಗಾಂಧಿಯವರು ಗಾಂಧಿ ಪ್ರತಿಮೆಗೆ ಮಾರ್ಲಾಪಣೆ ಮಾಡಿದರು. ಈ ಸಂದರ್ಭದಲ್ಲಿ ಸುರ್ಜೇವಾಲಾ, ವೇಣುಗೋಪಾಲ್ ಮಾಜಿ‌ ಸಿಎಂ ಸಿದ್ದರಾಮಯ್ಯ, ಕೆ.ಎಚ್.ಮುನಿಯಪ್ಪ, ಡಿ.ಕೆ ಶಿವಕುಮಾರ್ ದೇರಿದಂತೆ ಹಲವು ಕೈ ನಾಯಕರು ಭಾಗಿಯಾಗಿದ್ದರು. 

ಚರಕ ಮತ್ತು ಮಗ್ಗದಿಂದ ತಯಾರಗುವ ಉಪ್ಪನ್ನಗಳನ್ನ ವೀಕ್ಷಿಸಿದ ರಾಹುಲ್ ಗಾಂಧಿ ವೀಕ್ಷಣೆ ಮಾಡಿದರು.ಧಾರವನ್ನ ಹೇಗೆ ಹಾಕುವುದು, ಯಂತ್ರಗಳು ಹೇಗಿದೆ ಎಂಬುದರ ಬಗ್ಗೆ ಕೆಲಸ ಮಾಡುವ ಮಹಿಳೆಯರ ಜೊತೆ ಚೆರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಹಿಳೆ ಒಬ್ಬರು ರಾಹುಲ್ ಗಾಂಧಿಗೆ ಹತ್ತಿಯಿಂದ ಮಾಡಿದ ಹಾರವನ್ನು ಹಾಕಿ ರಾಹುಲ್ ಗಾಂಧಿಯವರ ಬಳಿ ಒಂದು ದಿನಕ್ಕೆ 125 ರೂಪಾಯಿ ಕೂಲಿ ಕೊಡ್ತಾರೆ. ಸಾಕಷ್ಟು ಕಷ್ಟ ಪಟ್ಟು ಕೆಲಸ ಮಾಡುತಿದ್ದೇವೆ ಆದ್ರೆ ಕಡಿಮೆ ಸಂಬಳ ಕೊಡ್ತಿದ್ದಾರೆ.ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಿಲ್ಲಾ. ಹತ್ತಿ ಕೂಡ ಸರ್ಕಾರ ಸಪ್ಲೈ ಮಾಡುತ್ತಿಲ್ಲಾ ಎಂದು ಹೇಳುವ ಮೂಲಕ ಸಂಬಳವನ್ನು ಹೆಚ್ಚು ಮಾಡುವಂತೆ ರಾಹುಲ್ ಗಾಂಧಿಯವರಿಗೆ ಮನವಿ ಸಲ್ಲಿಸಿದರು.

ಬಳಿಕ ರಾಹುಲ್ ಗಾಂಧಿಯವರು 20 ನಿಮಿಷಗಳ ಕಾಲ ಮಾತುಕತೆ ನಡೆಸಿ ಖಾದಿ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವವರ ಜೊತೆ ಫೋಟೋ ಶೆಷನ್ ನಡೆಸಿದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!