ಜಿಲ್ಲೆಗಳು

ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ : ಮಹಾತ್ಮನಿಗೆ ನಮನ ಸಲ್ಲಿಸಿದ ರಾಹುಲ್

ಮೈಸೂರು : ಗಾಂಧಿ ಜಯಂತಿ ಹಿನ್ನೆಲೆ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆಯು ಮೂರನೇ ದಿನವಾದ ಇಂದು   ನಂಜನಗೂಡಿನ ಬದನವಾಳು  ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿದ್ದು ಅಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಗುತ್ತಿದೆ.

ರಾಹುಲ್ ಗಾಂಧಿಯವರು ಗಾಂಧಿ ಪ್ರತಿಮೆಗೆ ಮಾರ್ಲಾಪಣೆ ಮಾಡಿದರು. ಈ ಸಂದರ್ಭದಲ್ಲಿ ಸುರ್ಜೇವಾಲಾ, ವೇಣುಗೋಪಾಲ್ ಮಾಜಿ‌ ಸಿಎಂ ಸಿದ್ದರಾಮಯ್ಯ, ಕೆ.ಎಚ್.ಮುನಿಯಪ್ಪ, ಡಿ.ಕೆ ಶಿವಕುಮಾರ್ ದೇರಿದಂತೆ ಹಲವು ಕೈ ನಾಯಕರು ಭಾಗಿಯಾಗಿದ್ದರು. 

ಚರಕ ಮತ್ತು ಮಗ್ಗದಿಂದ ತಯಾರಗುವ ಉಪ್ಪನ್ನಗಳನ್ನ ವೀಕ್ಷಿಸಿದ ರಾಹುಲ್ ಗಾಂಧಿ ವೀಕ್ಷಣೆ ಮಾಡಿದರು.ಧಾರವನ್ನ ಹೇಗೆ ಹಾಕುವುದು, ಯಂತ್ರಗಳು ಹೇಗಿದೆ ಎಂಬುದರ ಬಗ್ಗೆ ಕೆಲಸ ಮಾಡುವ ಮಹಿಳೆಯರ ಜೊತೆ ಚೆರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಹಿಳೆ ಒಬ್ಬರು ರಾಹುಲ್ ಗಾಂಧಿಗೆ ಹತ್ತಿಯಿಂದ ಮಾಡಿದ ಹಾರವನ್ನು ಹಾಕಿ ರಾಹುಲ್ ಗಾಂಧಿಯವರ ಬಳಿ ಒಂದು ದಿನಕ್ಕೆ 125 ರೂಪಾಯಿ ಕೂಲಿ ಕೊಡ್ತಾರೆ. ಸಾಕಷ್ಟು ಕಷ್ಟ ಪಟ್ಟು ಕೆಲಸ ಮಾಡುತಿದ್ದೇವೆ ಆದ್ರೆ ಕಡಿಮೆ ಸಂಬಳ ಕೊಡ್ತಿದ್ದಾರೆ.ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಿಲ್ಲಾ. ಹತ್ತಿ ಕೂಡ ಸರ್ಕಾರ ಸಪ್ಲೈ ಮಾಡುತ್ತಿಲ್ಲಾ ಎಂದು ಹೇಳುವ ಮೂಲಕ ಸಂಬಳವನ್ನು ಹೆಚ್ಚು ಮಾಡುವಂತೆ ರಾಹುಲ್ ಗಾಂಧಿಯವರಿಗೆ ಮನವಿ ಸಲ್ಲಿಸಿದರು.

ಬಳಿಕ ರಾಹುಲ್ ಗಾಂಧಿಯವರು 20 ನಿಮಿಷಗಳ ಕಾಲ ಮಾತುಕತೆ ನಡೆಸಿ ಖಾದಿ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವವರ ಜೊತೆ ಫೋಟೋ ಶೆಷನ್ ನಡೆಸಿದರು.

 

andolanait

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

22 mins ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

3 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

6 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

6 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

6 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

6 hours ago