ಮೈಸೂರು : ಗಾಂಧಿ ಜಯಂತಿ ಹಿನ್ನೆಲೆ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆಯು ಮೂರನೇ ದಿನವಾದ ಇಂದು ನಂಜನಗೂಡಿನ ಬದನವಾಳು ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿದ್ದು ಅಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಗುತ್ತಿದೆ.
ರಾಹುಲ್ ಗಾಂಧಿಯವರು ಗಾಂಧಿ ಪ್ರತಿಮೆಗೆ ಮಾರ್ಲಾಪಣೆ ಮಾಡಿದರು. ಈ ಸಂದರ್ಭದಲ್ಲಿ ಸುರ್ಜೇವಾಲಾ, ವೇಣುಗೋಪಾಲ್ ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಎಚ್.ಮುನಿಯಪ್ಪ, ಡಿ.ಕೆ ಶಿವಕುಮಾರ್ ದೇರಿದಂತೆ ಹಲವು ಕೈ ನಾಯಕರು ಭಾಗಿಯಾಗಿದ್ದರು.
ಚರಕ ಮತ್ತು ಮಗ್ಗದಿಂದ ತಯಾರಗುವ ಉಪ್ಪನ್ನಗಳನ್ನ ವೀಕ್ಷಿಸಿದ ರಾಹುಲ್ ಗಾಂಧಿ ವೀಕ್ಷಣೆ ಮಾಡಿದರು.ಧಾರವನ್ನ ಹೇಗೆ ಹಾಕುವುದು, ಯಂತ್ರಗಳು ಹೇಗಿದೆ ಎಂಬುದರ ಬಗ್ಗೆ ಕೆಲಸ ಮಾಡುವ ಮಹಿಳೆಯರ ಜೊತೆ ಚೆರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಹಿಳೆ ಒಬ್ಬರು ರಾಹುಲ್ ಗಾಂಧಿಗೆ ಹತ್ತಿಯಿಂದ ಮಾಡಿದ ಹಾರವನ್ನು ಹಾಕಿ ರಾಹುಲ್ ಗಾಂಧಿಯವರ ಬಳಿ ಒಂದು ದಿನಕ್ಕೆ 125 ರೂಪಾಯಿ ಕೂಲಿ ಕೊಡ್ತಾರೆ. ಸಾಕಷ್ಟು ಕಷ್ಟ ಪಟ್ಟು ಕೆಲಸ ಮಾಡುತಿದ್ದೇವೆ ಆದ್ರೆ ಕಡಿಮೆ ಸಂಬಳ ಕೊಡ್ತಿದ್ದಾರೆ.ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಿಲ್ಲಾ. ಹತ್ತಿ ಕೂಡ ಸರ್ಕಾರ ಸಪ್ಲೈ ಮಾಡುತ್ತಿಲ್ಲಾ ಎಂದು ಹೇಳುವ ಮೂಲಕ ಸಂಬಳವನ್ನು ಹೆಚ್ಚು ಮಾಡುವಂತೆ ರಾಹುಲ್ ಗಾಂಧಿಯವರಿಗೆ ಮನವಿ ಸಲ್ಲಿಸಿದರು.
ಬಳಿಕ ರಾಹುಲ್ ಗಾಂಧಿಯವರು 20 ನಿಮಿಷಗಳ ಕಾಲ ಮಾತುಕತೆ ನಡೆಸಿ ಖಾದಿ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವವರ ಜೊತೆ ಫೋಟೋ ಶೆಷನ್ ನಡೆಸಿದರು.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…