ಮೈಸೂರು : ಗಾಂಧಿ ಜಯಂತಿ ಹಿನ್ನೆಲೆ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆಯು ಮೂರನೇ ದಿನವಾದ ಇಂದು ನಂಜನಗೂಡಿನ ಬದನವಾಳು ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿದ್ದು ಅಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಗುತ್ತಿದೆ.
ರಾಹುಲ್ ಗಾಂಧಿಯವರು ಗಾಂಧಿ ಪ್ರತಿಮೆಗೆ ಮಾರ್ಲಾಪಣೆ ಮಾಡಿದರು. ಈ ಸಂದರ್ಭದಲ್ಲಿ ಸುರ್ಜೇವಾಲಾ, ವೇಣುಗೋಪಾಲ್ ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಎಚ್.ಮುನಿಯಪ್ಪ, ಡಿ.ಕೆ ಶಿವಕುಮಾರ್ ದೇರಿದಂತೆ ಹಲವು ಕೈ ನಾಯಕರು ಭಾಗಿಯಾಗಿದ್ದರು.
ಚರಕ ಮತ್ತು ಮಗ್ಗದಿಂದ ತಯಾರಗುವ ಉಪ್ಪನ್ನಗಳನ್ನ ವೀಕ್ಷಿಸಿದ ರಾಹುಲ್ ಗಾಂಧಿ ವೀಕ್ಷಣೆ ಮಾಡಿದರು.ಧಾರವನ್ನ ಹೇಗೆ ಹಾಕುವುದು, ಯಂತ್ರಗಳು ಹೇಗಿದೆ ಎಂಬುದರ ಬಗ್ಗೆ ಕೆಲಸ ಮಾಡುವ ಮಹಿಳೆಯರ ಜೊತೆ ಚೆರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಹಿಳೆ ಒಬ್ಬರು ರಾಹುಲ್ ಗಾಂಧಿಗೆ ಹತ್ತಿಯಿಂದ ಮಾಡಿದ ಹಾರವನ್ನು ಹಾಕಿ ರಾಹುಲ್ ಗಾಂಧಿಯವರ ಬಳಿ ಒಂದು ದಿನಕ್ಕೆ 125 ರೂಪಾಯಿ ಕೂಲಿ ಕೊಡ್ತಾರೆ. ಸಾಕಷ್ಟು ಕಷ್ಟ ಪಟ್ಟು ಕೆಲಸ ಮಾಡುತಿದ್ದೇವೆ ಆದ್ರೆ ಕಡಿಮೆ ಸಂಬಳ ಕೊಡ್ತಿದ್ದಾರೆ.ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಿಲ್ಲಾ. ಹತ್ತಿ ಕೂಡ ಸರ್ಕಾರ ಸಪ್ಲೈ ಮಾಡುತ್ತಿಲ್ಲಾ ಎಂದು ಹೇಳುವ ಮೂಲಕ ಸಂಬಳವನ್ನು ಹೆಚ್ಚು ಮಾಡುವಂತೆ ರಾಹುಲ್ ಗಾಂಧಿಯವರಿಗೆ ಮನವಿ ಸಲ್ಲಿಸಿದರು.
ಬಳಿಕ ರಾಹುಲ್ ಗಾಂಧಿಯವರು 20 ನಿಮಿಷಗಳ ಕಾಲ ಮಾತುಕತೆ ನಡೆಸಿ ಖಾದಿ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವವರ ಜೊತೆ ಫೋಟೋ ಶೆಷನ್ ನಡೆಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…