ಜಿಲ್ಲೆಗಳು

ಕಸ ವಿಂಗಡಣೆ ಪ್ರತಿಜ್ಞೆ : ಸಹಿ ಸಂಗ್ರಹ ಅಭಿಯಾನ

ಚಾಮರಾಜನಗರ: ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳ ವ್ಯಾಪ್ತಿಯ ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಹಸಿ ಹಾಗೂ ಒಣ ಕಸವನ್ನಾಗಿ ವಿಂಗಡಿಸುವ ಕುರಿತ ಪ್ರತಿಜ್ಞೆ ಬಗ್ಗೆ ಹಮ್ಮಿಕೊಳ್ಳಲಾಗಿರುವ ಸಹಿ ಸಂಗ್ರಹ ಅಭಿಯಾನವು ಇಂದು(ಗುರುವಾರ) ಆರಂಭಗೊಂಡಿತು.

ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಿಲ್ಲಾ ನಗರಾಭಿವೃದ್ದಿ ಕೋಶದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಫೋಟೊ ಬೂತ್ ಪಕ್ಕದಲ್ಲಿ ಸಹಿ ಹಾಕಿ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಅತಿ ಹೆಚ್ಚು ತ್ಯಾಜ್ಯ ಉತ್ಪಾದನೆ ಆಗುವಂತಹ ಸ್ಥಳಗಳಾದ ಹೋಟೆಲ್, ಕಲ್ಯಾಣ ಮಂಟಪಗಳು, ವಾಣಿಜ್ಯ ಚಟುವಟಿಕೆ ಪ್ರದೇಶಗಳಲ್ಲಿ ಹಸಿಕಸ ಹಾಗೂ ಒಣಕಸವನ್ನಾಗಿ ವಿಂಗಡಿಸುವ ಜವಾಬ್ದಾರಿ ಹೆಚ್ಚಿದೆ. ಅಂತಹ ಕಡೆಯೂ ಸ್ಥಳೀಯ ಸಂಸ್ಥೆಗಳೊಡನೆ ಕೈ ಜೋಡಿಸಿ ವೈಜ್ಞಾನಿಕ ಕಸ ವಿಂಗಡಣೆಗೆ ಸಹಕರಿಸಬೇಕು ಎಂದರು.

ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು ಮಾತನಾಡಿ, ಸ್ವಚ್ಛ ಭಾರತ್ ಮಿಷನ್ ಯೋಜನೆ ಯಶಸ್ವಿಗೆ ಜನರ ಸಹಕಾರ ಅಗತ್ಯ, ಸ್ವಚ್ಛತಾ ಆಪ್ ಡೌನ್‌ಲೋಡ್ ಮಾಡಿ ಅದರಲ್ಲಿ ಸ್ವಚ್ಛತೆಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಿದಲ್ಲಿ ೪೮ ಗಂಟೆಗಳಲ್ಲಿ ಬಗೆಹರಿಸಲಾಗುವುದು ಎಂದರು.

ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ಪಿ.ಸುಧಾ, ಪರಿಸರ ಇಂಜಿನಿುಂರ್ ಗಿರಿಜಾ, ಆರೋಗ್ಯ ನಿರೀಕ್ಷಕರಾದ ಸುಷ್ಮಾ, ಮಂಜುನಾಥ, ಗ್ರೀನ್ ಸಂಸ್ಥೆಯ ಕಾರ್ಯದರ್ಶಿ ಮಹದೇವಸ್ವಾಮಿ ಉಪಸ್ಥಿತರಿದ್ದರು.

andolana

Recent Posts

ಓದುಗರ ಪತ್ರ: ಗೀತೆ ರಚನಾಕಾರರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ

ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…

17 seconds ago

ಓದುಗರ ಪತ್ರ: ಪರೀಕ್ಷೆ ವೇಳೆ ವಿದ್ಯುತ್ ಕಡಿತ ಮಾಡದಿರಿ

ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…

3 mins ago

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಇಲ್ಲ

ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟು ಸಂಗ್ರಹ ವಿದ್ದು, ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ…

7 mins ago

ತುಳುನಾಡಿನ ಯುಗಾದಿ ‘ಬಿಸು’ವಿಗಾಗಿ ಇನ್ನೂ ಇಪ್ಪತ್ತೆಂಟು ದಿನ

ಅಕ್ಷತಾರಾಜ್ ಪೆರ್ಲ, ಕನ್ನಡ, ತುಳು ಉಭಯ ಭಾಷಾ ಲೇಖಕಿ  ಯುಗಾದಿ ಹಬ್ಬದ ಆಚರಣೆ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ ಇದ್ದು,…

13 mins ago

ಕೊಂಕಣಿ ಬಂಧುಗಳ ಉಗಾದಿ ಎಂದರೆ ಪೂರಣ್ ಪೋಳಿ, ದಾಳಿತೋಯ್, ಉಬ್ಬಟಿ ಮತ್ತು ಕಡ್ಲೆಬೇಳೆ ಪಾಯಸ

ಸುಮತಿ ಶೆಣೈ, ಲೇಖಕಿ ಮತ್ತು ಅನುವಾದಕಿ ಪ್ರತಿ ಹಬ್ಬದ ಆಚರಣೆಯನ್ನೂ ಅಂದು ತಯಾರಿಸುವ ಗೌಡ ಸಾರಸ್ವತ ಬ್ರಾಹ್ಮಣ- ಸಮುದಾಯಕ್ಕೇ ಸೀಮಿತವಾದ…

18 mins ago

ಯುಗಾದಿ ವಿಶೇಷ | ಧಾರವಾಡದ ಮಣ್ಣಿನಲ್ಲಿ ಹಸಿರು ಚಿಗುರಿದ ಕಂಪನ

ಭಾಗ್ಯಜ್ಯೋತಿ ಹಿರೇಮಠ, ಗುಡಗೇರಿ, ಕಥೆಗಾರ್ತಿ ಮತ್ತು ಕವಯಿತ್ರಿ ಉತ್ತರ ಕರ್ನಾಟಕದ ಬಯಲು ಸೀಮೆಯಲ್ಲಿ ಚೈತ್ರದ ಬಿಸಿಲು ಅಪ್ಪಳಿಸುತ್ತಿದ್ದಂತೆಯೇ ಗಾಳಿಯಲ್ಲಿ ಒಣಗಿದ…

1 hour ago