ಜಿಲ್ಲೆಗಳು

ಕಸ ವಿಂಗಡಣೆ ಪ್ರತಿಜ್ಞೆ : ಸಹಿ ಸಂಗ್ರಹ ಅಭಿಯಾನ

ಚಾಮರಾಜನಗರ: ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳ ವ್ಯಾಪ್ತಿಯ ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಹಸಿ ಹಾಗೂ ಒಣ ಕಸವನ್ನಾಗಿ ವಿಂಗಡಿಸುವ ಕುರಿತ ಪ್ರತಿಜ್ಞೆ ಬಗ್ಗೆ ಹಮ್ಮಿಕೊಳ್ಳಲಾಗಿರುವ ಸಹಿ ಸಂಗ್ರಹ ಅಭಿಯಾನವು ಇಂದು(ಗುರುವಾರ) ಆರಂಭಗೊಂಡಿತು.

ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಿಲ್ಲಾ ನಗರಾಭಿವೃದ್ದಿ ಕೋಶದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಫೋಟೊ ಬೂತ್ ಪಕ್ಕದಲ್ಲಿ ಸಹಿ ಹಾಕಿ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಅತಿ ಹೆಚ್ಚು ತ್ಯಾಜ್ಯ ಉತ್ಪಾದನೆ ಆಗುವಂತಹ ಸ್ಥಳಗಳಾದ ಹೋಟೆಲ್, ಕಲ್ಯಾಣ ಮಂಟಪಗಳು, ವಾಣಿಜ್ಯ ಚಟುವಟಿಕೆ ಪ್ರದೇಶಗಳಲ್ಲಿ ಹಸಿಕಸ ಹಾಗೂ ಒಣಕಸವನ್ನಾಗಿ ವಿಂಗಡಿಸುವ ಜವಾಬ್ದಾರಿ ಹೆಚ್ಚಿದೆ. ಅಂತಹ ಕಡೆಯೂ ಸ್ಥಳೀಯ ಸಂಸ್ಥೆಗಳೊಡನೆ ಕೈ ಜೋಡಿಸಿ ವೈಜ್ಞಾನಿಕ ಕಸ ವಿಂಗಡಣೆಗೆ ಸಹಕರಿಸಬೇಕು ಎಂದರು.

ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು ಮಾತನಾಡಿ, ಸ್ವಚ್ಛ ಭಾರತ್ ಮಿಷನ್ ಯೋಜನೆ ಯಶಸ್ವಿಗೆ ಜನರ ಸಹಕಾರ ಅಗತ್ಯ, ಸ್ವಚ್ಛತಾ ಆಪ್ ಡೌನ್‌ಲೋಡ್ ಮಾಡಿ ಅದರಲ್ಲಿ ಸ್ವಚ್ಛತೆಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಿದಲ್ಲಿ ೪೮ ಗಂಟೆಗಳಲ್ಲಿ ಬಗೆಹರಿಸಲಾಗುವುದು ಎಂದರು.

ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ಪಿ.ಸುಧಾ, ಪರಿಸರ ಇಂಜಿನಿುಂರ್ ಗಿರಿಜಾ, ಆರೋಗ್ಯ ನಿರೀಕ್ಷಕರಾದ ಸುಷ್ಮಾ, ಮಂಜುನಾಥ, ಗ್ರೀನ್ ಸಂಸ್ಥೆಯ ಕಾರ್ಯದರ್ಶಿ ಮಹದೇವಸ್ವಾಮಿ ಉಪಸ್ಥಿತರಿದ್ದರು.

andolana

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

2 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

2 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

3 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

3 hours ago