ಸೋರಿಕೆಯಾಗಿದ್ದ ಸಿಲಿಂಡರ್ ವಾಪಸ್
ತಿ.ನರಸೀಪುರ: ಪಟ್ಟಣದ ನೀರು ಶುದ್ಧೀಕರಣ ಘಟಕದಲ್ಲಿ ಅಲ್ಪ ಪ್ರಮಾಣದಲ್ಲಿ ಕ್ಲೋರಿನ್ ಸೋರಿಕೆಯಾಗಿದ್ದ ಸಿಲಿಂಡರ್ ಅನ್ನು ಕಂಪೆನಿಗೆ ಹಿಂತಿರುಗಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಬಸವರಾಜು ‘ಆಂದೋಲನ’ಕ್ಕೆ ತಿಳಿಸಿದ್ದಾರೆ.
ನಂತರ ಮಾತನಾಡಿದ ಅವರು, ಸಿಲಿಂಡರ್ನಲ್ಲಿ ನೀರು ಕಡಿಮೆ ಆಗಿದ್ದರಿಂದ ಅತ್ಯಂತ ಸಣ್ಣ ಮಟ್ಟದಲ್ಲಿ ಸೋರಿಕೆಯಾಗಿದೆ. ಯಾವುದೇ ಅನಾಹುತ ಆಗಿಲ್ಲ. ಮುನ್ನೆಚ್ಚರಿಕೆಯ ಕ್ರಮವಾಗಿ ಶುದ್ಧೀಕರಣ ಘಟಕದ ಸಮೀಪವಿರುವ ೧೫ ಮನೆಗಳ ಕುಟುಂಬದವರನ್ನು ಸ್ಥಳಾಂತರಿಸಲಾಗಿತ್ತು. ಅವರೆಲ್ಲರನ್ನೂ ಈಗ ಮತ್ತೆ ಮನೆಗೆ ಕಳುಹಿಸಲಾಗಿದೆ. ಎಲ್ಲವೂ ಸರಿಯಾಗಿದೆ. ಸೋರಿಕೆಯಾಗಿದ್ದು ಹೆಚ್ಚುವರಿ ಸಿಲಿಂಡರ್. ಇದನ್ನು ಕಂಪೆನಿಗೆ ಹಿಂತಿರುಗಿಸಲಾಗಿದ್ದು, ಹೊಸ ಸಿಲಿಂಡರನ್ನು ನೀಡಲಿದ್ದಾರೆ ಎಂದರು.
ಕ್ಲೋರಿನ್ ಸೋರಿಕೆಯಿಂದ ಯಾವುದೇ ಅನಾಹುತಗಳು ಆಗುವುದಿಲ್ಲ. ಸೋರಿಕೆಯಿಂದ ಕಣ್ಣು ಉರಿ, ಮೈ ಕೆರೆತ, ಅಲರ್ಜಿ, ಕೆಮ್ಮು ಮುಂತಾದ ಸಣ್ಣಪುಟ್ಟ ಸಮಸ್ಯೆಗಳಾಗುತ್ತವೆ. ಕಳೆದ ವರ್ಷ ಸೋರಿಕೆಯಾಗಿದ್ದಂತೆ ಶುಕ್ರವಾರ ಸೋರಿಕೆ ಆಗಿಲ್ಲ. ಆದ್ದರಿಂದ ಯಾವುದೇ ಆತಂಕ ಬೇಡ.
-ಡಾ.ರವಿಕುಮಾರ್, ತಾಲ್ಲೂಕು ಆರೋಗ್ಯ ಅಧಿಕಾರಿ, ತಿ.ನರಸೀಪುರ.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕ್ಲೋರಿನ್ ಸೋರಿಕೆಯಾಗಿದೆ. ಕಳೆದ ವರ್ಷವೇ ಸೋರಿಕೆಯಾಗಿದ್ದಾಗ ಎಚ್ಚೆತ್ತುಕೊಂಡು ಗಮನಹರಿಸಿದ್ದರೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ. ಈಗಲಾದರೂ ಸಿಲಿಂಡರ್ ಗಳನ್ನು ಅಳವಡಿಸುವಾಗ ಸಂಪೂರ್ಣವಾಗಿ ಪರಿಶೀಲಿಸಿ ಅಳವಡಿಸಬೇಕು. ಮತ್ತೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ಪ್ಲಾಂಟ್ಅನ್ನು ಇಲ್ಲಿಂದ ಸ್ಥಳಾಂತರಿಸಬೇಕೆಂದು ಆಗ್ರಹಿಸಿದರಲ್ಲದೆ,ಆಗ ಮಾತ್ರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ.
-ಗುರುಮೂರ್ತಿ, ತಿ. ನರಸೀಪುರ.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…