ಜಿಲ್ಲೆಗಳು

ಅನಿಲ ಸೋರಿಕೆ ಪ್ರಕರಣ : ಪ್ಲಾಂಟ್‌ ಸ್ಥಳಾಂತರಕ್ಕೆ ಆಗ್ರಹ

ಸೋರಿಕೆಯಾಗಿದ್ದ ಸಿಲಿಂಡರ್ ವಾಪಸ್

ತಿ.ನರಸೀಪುರ: ಪಟ್ಟಣದ ನೀರು ಶುದ್ಧೀಕರಣ ಘಟಕದಲ್ಲಿ ಅಲ್ಪ ಪ್ರಮಾಣದಲ್ಲಿ ಕ್ಲೋರಿನ್ ಸೋರಿಕೆಯಾಗಿದ್ದ ಸಿಲಿಂಡರ್ ಅನ್ನು ಕಂಪೆನಿಗೆ ಹಿಂತಿರುಗಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಬಸವರಾಜು ‘ಆಂದೋಲನ’ಕ್ಕೆ ತಿಳಿಸಿದ್ದಾರೆ.
ನಂತರ ಮಾತನಾಡಿದ ಅವರು, ಸಿಲಿಂಡರ್‌ನಲ್ಲಿ ನೀರು ಕಡಿಮೆ ಆಗಿದ್ದರಿಂದ ಅತ್ಯಂತ ಸಣ್ಣ ಮಟ್ಟದಲ್ಲಿ ಸೋರಿಕೆಯಾಗಿದೆ. ಯಾವುದೇ ಅನಾಹುತ ಆಗಿಲ್ಲ. ಮುನ್ನೆಚ್ಚರಿಕೆಯ ಕ್ರಮವಾಗಿ ಶುದ್ಧೀಕರಣ ಘಟಕದ ಸಮೀಪವಿರುವ ೧೫ ಮನೆಗಳ ಕುಟುಂಬದವರನ್ನು ಸ್ಥಳಾಂತರಿಸಲಾಗಿತ್ತು. ಅವರೆಲ್ಲರನ್ನೂ ಈಗ ಮತ್ತೆ ಮನೆಗೆ ಕಳುಹಿಸಲಾಗಿದೆ. ಎಲ್ಲವೂ ಸರಿಯಾಗಿದೆ. ಸೋರಿಕೆಯಾಗಿದ್ದು ಹೆಚ್ಚುವರಿ ಸಿಲಿಂಡರ್. ಇದನ್ನು ಕಂಪೆನಿಗೆ ಹಿಂತಿರುಗಿಸಲಾಗಿದ್ದು, ಹೊಸ ಸಿಲಿಂಡರನ್ನು ನೀಡಲಿದ್ದಾರೆ ಎಂದರು.

ಕ್ಲೋರಿನ್ ಸೋರಿಕೆಯಿಂದ ಯಾವುದೇ ಅನಾಹುತಗಳು ಆಗುವುದಿಲ್ಲ. ಸೋರಿಕೆಯಿಂದ ಕಣ್ಣು ಉರಿ, ಮೈ ಕೆರೆತ, ಅಲರ್ಜಿ, ಕೆಮ್ಮು ಮುಂತಾದ ಸಣ್ಣಪುಟ್ಟ ಸಮಸ್ಯೆಗಳಾಗುತ್ತವೆ. ಕಳೆದ ವರ್ಷ ಸೋರಿಕೆಯಾಗಿದ್ದಂತೆ ಶುಕ್ರವಾರ ಸೋರಿಕೆ ಆಗಿಲ್ಲ. ಆದ್ದರಿಂದ ಯಾವುದೇ ಆತಂಕ ಬೇಡ.
-ಡಾ.ರವಿಕುಮಾರ್, ತಾಲ್ಲೂಕು ಆರೋಗ್ಯ ಅಧಿಕಾರಿ, ತಿ.ನರಸೀಪುರ.


ಅಧಿಕಾರಿಗಳ ನಿರ್ಲಕ್ಷ್ಯದಿಂದ ಕ್ಲೋರಿನ್ ಸೋರಿಕೆಯಾಗಿದೆ. ಕಳೆದ ವರ್ಷವೇ ಸೋರಿಕೆಯಾಗಿದ್ದಾಗ ಎಚ್ಚೆತ್ತುಕೊಂಡು ಗಮನಹರಿಸಿದ್ದರೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ. ಈಗಲಾದರೂ ಸಿಲಿಂಡರ್ ಗಳನ್ನು ಅಳವಡಿಸುವಾಗ ಸಂಪೂರ್ಣವಾಗಿ ಪರಿಶೀಲಿಸಿ ಅಳವಡಿಸಬೇಕು. ಮತ್ತೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ಪ್ಲಾಂಟ್‌ಅನ್ನು ಇಲ್ಲಿಂದ ಸ್ಥಳಾಂತರಿಸಬೇಕೆಂದು ಆಗ್ರಹಿಸಿದರಲ್ಲದೆ,ಆಗ ಮಾತ್ರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ.
-ಗುರುಮೂರ್ತಿ, ತಿ. ನರಸೀಪುರ.

 

andolanait

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

52 mins ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

54 mins ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

56 mins ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

57 mins ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

1 hour ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

1 hour ago