ಜಿಲ್ಲೆಗಳು

ರಸ್ತೆಗೆ ತೇಪೆ ಹಾಕಲು ಬಂದ ಅಧಿಕಾರಿಗಳಿಗೆ ಗೇಟ್ ಪಾಸ್

ಕಂದಾಯ ಸಚಿವರ ಭೇಟಿ ಹಿನ್ನೆಲೆಯಲ್ಲಿ ಅಧಿಕಾರಿಗಳ ನಡೆಗೆ ಸ್ಥಳೀಯರ ಆಕ್ರೋಶ

ಮಂಜು ಕೋಟೆ

ಎಚ್.ಡಿ.ಕೋಟೆ: ಕಂದಾಯ ಸಚಿವರ ಗ್ರಾಮ ವಾಸ್ತವ್ಯದಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ತರಾತುರಿುಂಲ್ಲಿ ನಡೆಸುತ್ತಿದ್ದ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗಳನ್ನು ತಡೆದ ಗ್ರಾಮಸ್ಥರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ತಾಲ್ಲೂಕಿನ ಗಡಿ ಭಾಗದ ಎನ್.ಬೇಗೂರು ಗ್ರಾಪಂ ವ್ಯಾಪ್ತಿಯ ಕೆಂಚನಹಳ್ಳಿ ಮತ್ತು ಹೊಸಹಳ್ಳಿ ರಸ್ತೆ ತೀವ್ರ ಹದಗೆಟ್ಟು, ಭಾರಿ ಗುಂಡಿಗಳಾಗಿ ನಿರ್ಮಾಣಗೊಂಡು ಕೆರೆಯ ರೀತಿ ನೀರು ಶೇಖರಣೆಯಾಗಿತ್ತು. ಇದರಿಂದ ಸಾರ್ವಜನಿಕರು, ರೈತಾಪಿ ವರ್ಗದವರು ಸಂಚರಿಸಲು ಸಾಧ್ಯವಾಗುತ್ತಿರಲಿಲ್ಲ. ಇತ್ತೀಚೆಗೆ ಹೊಸಹಳ್ಳಿ ಹಾಡಿ ಕರಿಯಪ್ಪ ಎಂಬವರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ಕೊಡಲು ರಸ್ತೆುಂಲ್ಲಿ ಸಂಚರಿಸಿದ್ದ ಅಂದಿನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಮಾಜಿ ಸಚಿವ ಎಂ.ಶಿವಣ್ಣ, ಶಾಸಕ ಅನಿಲ್ ಚಿಕ್ಕವಾದು, ಎಸ್‌ಪಿ ಚೇತನ್ ಮತ್ತಿತರರು ರಸ್ತೆಯಲ್ಲಿ ಸಂಚರಿಸಲು ಹರಸಾಹಸಪಟ್ಟಿದ್ದರು.

ಒಂದೂವರೆ ವರ್ಷದ ಹಿಂದೆ ಶಾಸಕ ಅನಿಲ್ ಚಿಕ್ಕಮಾದು ೬ ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ್ದರು. ಆದರೆ ಬಾಪೂಜಿ ಕಂಪೆನಿಯ ಗುತ್ತಿಗೆದಾರ ಸ್ವಲ್ಪ ಕಾಮಗಾರಿ ನಡೆಸಿ, ನಂತರ ಹಣ ಬಿಡುಗಡೆಯಾಗಿಲ್ಲ ಎಂದು ಸ್ಥಗಿತಗೊಳಿಸಿದ್ದರು. ಈಗ ಕಂದಾಯ ಸಚಿವ ಅಶೋಕ್ ಅವರು ಇದೇ ಭಾಗದಲ್ಲಿ ಶನಿವಾರ ಮತ್ತು ಭಾನುವಾರ ಗ್ರಾಮ ವಾಸ್ತವ್ಯ ಹೂಡಲಿದ್ದು, ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಹೀಗಾಗಿ ರಾಷ್ಟ್ರೀಯ ಹೆದ್ದಾರಿಯ ನಿಗಮದ ಅಧಿಕಾರಿ ರಾಜೇಂದ್ರ ಕುಮಾರ್‌ರವರು ಭಾರಿ ಗುಂಡಿಗಳನ್ನು ಮುಚ್ಚಲು ನೌಕರರು ಮತ್ತು ಗುತ್ತಿಗೆದಾರರ ಜತೆ ಮುಂದಾಗಿದ್ದನ್ನು ಗಮನಿಸಿದ ಗ್ರಾಮದ ನಿವಾಸಿಗಳು, ಮುಖಂಡರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ಹಲವು ವರ್ಷಗಳಿಂದ ಈ ರಸ್ತೆ ಹದಗೆಟ್ಟಿದ್ದರೂ ಸರಿಪಡಿಸದ ನೀವು ಈಗ ಸಚಿವರು ಆಗಮಿಸುತ್ತಿದ್ದಾರೆ ಎಂಬ ಕಾರಣಕ್ಕೆ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದೀರಿ. ನಾವು ನಿತ್ಯ ನರಕಯಾತನೆ ಅನುಭವಿಸುವಂತೆಯೇ ಸಚಿವರೂ ಈ ರಸ್ತೆಯಲ್ಲಿ ಸಂಚರಿಸಿ ಜನರ ಸಮಸ್ಯೆ ಅರಿಯಬೇಕು. ಆದ್ದರಿಂದ ಈ ಕಾಮಗಾರಿ ನಡೆಸಲು ಬಿಡುವುದಿಲ್ಲ. ಸಚಿವರು ಇಲ್ಲಿಂದ ತೆರಳಿದ ನಂತರ ಕಾಮಗಾರಿ ನಡೆಸಿ ಎಂದು ಅಧಿಕಾರಿಗಳನ್ನು ವಾಪಸ್ ಕಳಿಸಿದ್ದಾರೆ

ರಸ್ತೆ ಅಭಿವೃದ್ಧಿಗೆ ಟೆಂಡರ್ ಆಗಿ ವರ್ಷಗಳೇ ಕಳೆದಿವೆ. ಗುತ್ತಿಗೆದಾರ ಕಾಮಗಾರಿ ಪ್ರಾರಂಭಿಸಿ ಅನೇಕ ಕಾರಣಗಳಿಂದ ಸ್ಥಗಿತಗೊಳಿಸಿದ್ದಾರೆ. ಮತ್ತೆ ಕಾಮಗಾರಿ ಪ್ರಾರಂಭಿಸಲು ಮುಂದಾದಾಗ ಗ್ರಾಮಸ್ಥರು ತಡೆದಿರುವುದರಿಂದ ಕೆಲಸ ಸ್ಥಗಿತಗೊಳಿಸಲಾಗಿದೆ. –ರಾಜೇಂದ್ರ ಕುಮಾರ್, ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿ

ಗಡಿ ಭಾಗದಲ್ಲಿರುವ ಜನಸಾಮಾನ್ಯರನ್ನು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಮನುಷ್ಯರೆಂದು ಭಾವಿಸಿದ್ದರೆ ಈ ರೀತಿ ಮೂಲಭೂತ ಸೌಕರ್ಯಗಳಿಂದ ವಂಚಿತವಾಗುತ್ತಿರಲಿಲ್ಲ. ಪ್ರಾಣಿಗಳು ಬದುಕುವ ರೀತಿಯಲ್ಲಿ ಜನರು ಜೀವನ ನಡೆಸುತ್ತಿದ್ದೇವೆ. ಸಚಿವರು ಬರುವಂತಹ ಸಂದರ್ಭದಲ್ಲಿ ಮಾತ್ರ ನಮ್ಮ ಬಗ್ಗೆ ಇವರಿಗೆ ನೆನಪಾಗುತ್ತದೆ. -ಜಯರಾಮ್, ಜಕ್ಕಳ್ಳಿ ಗ್ರಾಮದ ನಿವಾಸಿ.

andolana

Recent Posts

ರನ್ಯಾ ಕೇಸ್‌ನಲ್ಲಿ ಸಚಿವರ ಕೈವಾಡವಿದೆ ಎನ್ನುವುದು ಉಹಾಪೋಹ: ಜಮೀರ್‌ ಅಹ್ಮದ್‌

ಬೆಂಗಳೂರು: ನಟಿ ರನ್ಯಾ ರಾವ್‌ ಅವರ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರ ಕೈವಾಡವಿದೆ ಎನ್ನುವುದು ಬಿಜೆಪಿಯವರ ಉಹಾಪೋಹ ಎಂದು ಸಚಿವ…

28 mins ago

ರನ್ಯಾ ಕೇಸ್‌ನಲ್ಲಿ ಸರ್ಕಾರವೇ ಭಾಗಿಯಾಗಿದೆ: ಆರ್‌.ಅಶೋಕ್‌

ಬೆಂಗಳೂರು: ನಟಿ ರನ್ಯಾರವ್‌ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸರ್ಕಾರದ ಪಾತ್ರ ಕೂಡ ಇರಬಹುದು. ಪ್ರೋಟೋಕಾಲ್‌ ದುರ್ಬಳಕೆ ಬಗ್ಗೆ ತನಿಖೆಯಾಗಬೇಕು…

58 mins ago

ಕಟ್ಟಡ ಕಾರ್ಮಿಕರಿಗಾಗಿ ʼಸಂಚಾರಿ ಆರೋಗ್ಯ ಘಟಕʼ ಆಂಬುಲೆನ್ಸ್:‌ ಸಿಎಂ

ಬೆಂಗಳೂರು: ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ಕಟ್ಟಡ ಕಾರ್ಮಿಕರ ಆರೋಗ್ಯದ ದೃಷ್ಠಿಯಿಂದ ಸಂಚಾರಿ ಆಸ್ಪತ್ರೆ ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ…

2 hours ago

ತೀವ್ರ ಕೆಮ್ಮಿನಿಂದ ಬಳಲುತ್ತಿರುವ ಎಚ್.ಡಿ.ಕುಮಾರಸ್ವಾಮಿ: ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ

ಬೆಂಗಳೂರು: ತೀವ್ರ ಕಫಾ ಹಾಗೂ ಕೆಮ್ಮಿನಿಂದ ಬಳಲುತ್ತಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ…

2 hours ago

ಕುಶಾಲನಗರ| ಭೀಕರ ರಸ್ತೆ ಅಪಘಾತ: ಬೈಕ್‌ ಸವಾರ ಸಾವು

ಕೊಡಗು: ಕುಶಾಲನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಶಾಲನಗರದ ಕರಿಯಪ್ಪ ಬಡಾವಣೆಯ ನಿವಾಸಿ ಶಶಿ…

2 hours ago

ಮೈಸೂರು| ನಾಲೆಗಳಿಗೆ ನೀರು ಬಿಡುವಂತೆ ಆಗ್ರಹ: ಅನ್ನದಾತರಿಂದ ಕಾಡಾ ಕಚೇರಿಗೆ ಮುತ್ತಿಗೆಗೆ ಯತ್ನ

ಮೈಸೂರು: ನಾಲೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬಿನಿ ಅಚ್ಚುಕಟ್ಟು…

3 hours ago