ಜಿಲ್ಲೆಗಳು

ಮಾನಸಗಂಗೋತ್ರಿಯಲ್ಲಿ ಜನಮನ ಗೆದ್ದ ಜಾರ್ಜಿಯ ತಂಡ!

ಮೈಸೂರು : ನಮ್ಮ ಕಲೆ ಸಂಸ್ಕೃತಿ ಯನ್ನು ಜಗತ್ತಿನಾದ್ಯಂತ ಸಾರುತ್ತಿರುವ ಜಾರ್ಜಿಯ ಎಂಬ ಎನ್ ಜಿ ಒ ತಂಡದವರು ಇಂದು ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಮೈಸೂರು ಫೆಸ್ಟ್ ಕಾರ್ಯಕ್ರಮದ ಪ್ರಯುಕ್ತ ಎರಡು ತಂಡಗಳಾಗಿ ಪ್ರದರ್ಶನ ನೀಡಿದವು.

 

ಮಿನಿ ಫಾಕ್ಸ್, ವತ್ಸಲ್ ಪರಾಶನ್, ಗಯೂಕಿ, ತೆದೋ, ಭಾರತದ ರಾಗಗಳು ಹಾಗೂ ಭಾರತೀಯ ಸಂಗೀತ ಉಪಕರಣಗಳನ್ನು ಬಳಸಿಕೊಂಡು ಸಂಗೀತ ಪ್ರದರ್ಶನ ನೀಡಿದ ಇವರು ತಮ್ಮ ಮೇಲುವಾದ ಕಂಠದಿಂದ ನೆರದಿದ್ದಂತಹ ಸಾರ್ವಜನಿಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡರು.

ತಂಡದ ನಾಯಕ ಮಾತನಾಡಿ, ಭಾರತದಲ್ಲಿ ನಾವು ಪ್ರದರ್ಶನ ನೀಡುತ್ತಿರುವುದು ನಮ್ಮೆಲರಿಗೂ ಹೆಮ್ಮೆಯ ವಿಷಯ ಇಲ್ಲಿ ನಮ್ಮ ಸಂಸ್ಕೃತಿಯನ್ನು ನಿಮ್ಮೆಲ್ಲರಿಗೂ ತಿಳಿಯುವಂತೆ ಮಾಡುವುದು ನಮಗೆ ಸಂತಸ ತಂದಿದೆ ಎಂದರು.

11 ಜನರಿಂದ ಕೂಡಿದ ನ್ಯೂ ಬಾನ ತಂಡದವರು ಮೊದಲಿಗೆ ಭಾರತದ ರಾಷ್ಟ್ರ ಗೀತೆಯನ್ನು ಹಾಡುವುದರ ಮೂಲಕ ಸಾರ್ವಜನಿಕರನ್ನು ಎದ್ದು ನಿಲ್ಲುವಂತೆ ಮಾಡಿದರು.

ನಂತರದಲ್ಲಿ ತಮ್ಮ ದೇಶದ ರಾಷ್ಟ್ರ ಗೀತೆಯನ್ನು ಮೈಸೂರು ಜನತೆಗೆ ಪರಿಚಯಿಸಿದರು. ಅದಾದ ನಂತರದಲ್ಲಿ ಮೂರು ಸಂಗೀತ ಪ್ರದರ್ಶನ ನೀಡಿ ಜನರ ಮನ ಸೆಳೆಯುವುದರ ಮೂಲಕ ಶಿಳ್ಳೆಯನ್ನು ತಮ್ಮದಾಗಿಸಿಕೊಂಡರು.

andolanait

Recent Posts

ಆರ್‌ಬಿಐ ರೆಪೊ ದರ ಯಥಾಸ್ಥಿತಿ : ಹಣಕಾಸು ಸಮಿತಿ ನಿರ್ಣಯ

ಹೊಸದಿಲ್ಲಿ : ಕಳೆದ ಡಿಸೆಂಬರ್‌ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…

14 mins ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್‌ಸಿ…

1 hour ago

ನಟ, ರಾಜಕಾರಣಿ ವಿಜಯ್‌ಗೆ 1.5ಕೋಟಿ ದಂಡ : ರಿಟ್‌ ಅರ್ಜಿ ವಜಾಗೊಳಿಸಿದ ಹೈ ಕೋರ್ಟ್‌

ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…

2 hours ago

ಡ್ರಗ್ಸ್‌ ಸಮೇತ ಸಿಕ್ಕಿಬಿದ್ದ ನಟಿ ಅಂಜುಕೃಷ್ಣ : 8 ಮಂದಿ ಬಂಧನ

ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…

2 hours ago

ಪರೀಕ್ಷಾ ಪೇ ಚರ್ಚಾ | ಇಂಟರ್‌ನೆಟ್‌ನಲ್ಲಿ ಸಮಯ ಕಳೆಯಬೇಡಿ : ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಸಲಹೆ

ಹೊಸದಿಲ್ಲಿ : ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್‍ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ…

2 hours ago

ರಾಜ್ಯದ ಜನತೆಗೆ ಮತ್ತೊಂದು ಶಾಕ್‌ : ವಿದ್ಯುತ್‌ ದರ ಏರಿಕೆ ಸಾಧ್ಯತೆ

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು,…

2 hours ago