ಜಿಲ್ಲೆಗಳು

ವೇತನ ಆದೇಶ ಮರು ಜಾರಿಗೆ ಅತಿಥಿ ಉಪನ್ಯಾಸಕರ ಧರಣಿ

ಜನಪ್ರತಿನಿಧಿಗಳ ಪ್ರವೇಶದಿಂದ ಅಹೋರಾತ್ರಿ ಧರಣಿ ವಾಪಸ್: ಇಂದು ಸಂಸದ ಪ್ರತಾಪ್‌ಸಿಂಹ ಸಭೆ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಹೆಚ್ಚಿಸಿದ್ದ ವೇತನವನ್ನು ಒಂದು ತಿಂಗಳು ನೀಡಿ ಏಕಾಏಕಿ ವಾಪಸ್ ಪಡೆದಿರುವ ಜತೆಗೆ ಕುಲಪತಿಗಳು ಸರಿಯಾಗಿ ಉತ್ತರಿಸಿದ್ದರಿಂದ ಆಕ್ರೋಶಗೊಂಡು ಅತಿಥಿ ಉಪನ್ಯಾಸಕರು ಶುಕ್ರವಾರ ಅಹೋರಾತ್ರಿ ಧರಣಿ ಆರಂಭಿಸಿ ಜನಪ್ರತಿನಿಧಿಗಳ ಮಧ್ಯೆಪ್ರವೇಶದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಕೈ ಬಿಟ್ಟಿದ್ದಾರೆ.

ಸಂಸದ ಪ್ರತಾಪ್‌ಸಿಂಹ, ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ ಹಾಗೂ ಸಿಂಡಿಕೇಟ್ ಸದಸ್ಯೆ ಚೈತ್ರ ನಾರಾಯಣ್ ಅವರ ಮಧ್ಯಪ್ರವೇಶಿಸಿದ ಹಿನ್ನೆಲೆಯಲ್ಲಿ ಸೋಮವಾರ ಹಣಕಾಸು ಅಧಿಕಾರಿಯೊಂದಿಗೆ ಚರ್ಚಿಸಿ ತೀರ್ಮಾನ ತಿಳಿಸುವುದಾಗಿ ಹಂಗಾಮಿ ಕುಲಪತಿ ಪ್ರೊ.ಎಚ್.ರಾಜಶೇಖರ್ ತಿಳಿಸಿದ್ದರಿಂದ ಧರಣಿ ಹಿಂಪಡೆಯಲಾಗಿದೆ.

ಮೈಸೂರು ವಿವಿ ವ್ಯಾಪ್ತಿಯಲ್ಲಿ ೯೭೦ ಅತಿಥಿ ಉಪನ್ಯಾಸಕರು ಗಂಗೋತ್ರಿ, ವಿವಿ ಕಾಲೇಜುಗಳ ವ್ಯಾಪ್ತಿಯಲ್ಲಿ ಕಾರ‌್ಯನಿರ್ವಹಿಸುತ್ತಿದ್ದಾರೆ. ಅವರಲ್ಲಿ ೧೮ ಸಾವಿರ ರೂ. ವೇತನ ಇದ್ದವರಿಗೆ ೨೪ ಸಾವಿರ ರೂ., ೨೩ ಸಾವಿರ ರೂ. ಇದ್ದವರಿಗೆ ೩೭ ಸಾವಿರ ರೂ.ಗೆ ಏರಿಸಿ ಹಿಂದಿನ ಕುಲಪತಿ ಪ್ರೊ.ಹೇಮಂತ್‌ಕುಮಾರ್ ಅವರ ಕಾಲದಲ್ಲಿ ಆದೇಶ ಹೊರಡಿಸಲಾಗಿತ್ತು. ಅದರಂತೆ ಅಕ್ಟೋಬರ್ ತಿಂಗಳ ವೇತನ ಹೊಸ ಆದೇಶದಂತೆ ಜಾರಿಯಾಗಿತ್ತು. ಆದರೆ ನವೆಂಬರ್ ತಿಂಗಳ ವೇತನ ಶುಕ್ರವಾರ ಬಿಡುಗಡೆಯಾಗಿದ್ದು. ಹಿಂದಿನಂತೆಯೇ ನೀಡಲಾಗಿತ್ತು. ಈ ಕುರಿತು ಮಾಹಿತಿ ಕೇಳಲು ಹೋದಾಗ ಅಧಿಕಾರಿಗಳಿಂದ ಸಮರ್ಪಕ ಉತ್ತರ ಬರಲಿಲ್ಲ. ಇದರಿಂದ ಬೇಸರಗೊಂಡ ೨೫೦ಕ್ಕೂ ಹೆಚ್ಚು ಉಪನ್ಯಾಸಕರು ಕ್ರಾಫರ್ಡ್ ಹಾಲ್ ಎದುರು ಮಧ್ಯಾಹ್ನ ೩.೩೦ಕ್ಕೆ ಪ್ರತಿಭಟನೆ ಆರಂಭಿಸಿದರು. ಇದಾದ ಕೆಲ ಹೊತ್ತಿನಲ್ಲೇ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಡಾ.ಹನುಮಂತೇಶ್, ಸಂಚಾಲಕ ಡಾ.ಕೃಷ್ಣಕುಮಾರ್, ಡಾ.ಮನು, ಡಾ.ರಾಘವೇಂದ್ರ, ಡಾ.ಸ್ವಾಮಿ, ಡಾ.ಅರುಣ್, ಡಾ.ಚೈತ್ರ, ಡಾ.ರವೀಂದ್ರ, ಡಾ.ಮಹದೇವಪ್ರಸಾದ್, ಡಾ.ಅಭಿಲಾಷ್, ಡಾ.ರಮೇಶ್ ಮತ್ತಿತರರು ಕುಲಪತಿಗಳನ್ನು ಭೇಟಿ ಮಾಡಲು ಹೋದರು.

‘ವಿಶ್ವವಿದ್ಯಾನಿಲಯ ಆರ್ಥಿಕ ನಷ್ಟದಲ್ಲಿದೆ. ಎಲ್ಲರಿಗೂ ಸಂಬಳ ಕೊಡಲು ಆಗುತ್ತಿಲ್ಲ. ಇದರಿಂದ ಈ ಹಿಂದೆ ಅತಿಥಿ ಉಪನ್ಯಾಸಕರಿಗೆ ನೀಡಿದ ವೇತನ ಮುಂದುವರಿಸಲು ಆಗೋಲ್ಲ. ಇದನ್ನು ಹಣಕಾಸು ಸಮಿತಿಯಲ್ಲಿ ತೀರ್ಮಾನಿಸಿ ಜಾರಿಗೊಳಿಸಲಾಗಿದೆ’ ಎಂದು ಕುಲಪತಿ ಪ್ರೊ.ರಾಜಶೇಖರ್ ಹೇಳಿದರೂ ನಮ್ಮನ್ನು ಸರಿಯಾಗಿ ನಡಸಿಕೊಳ್ಳಲಿಲ್ಲ. ಏಕವಚನದಲ್ಲಿ ಮಾತನಾಡಿದರು ಎಂದು ಆಕ್ರೋಶಗೊಂಡು ಅಹೋರಾತ್ರಿ ಧರಣಿ ಆರಂಭಿಸಿ. ಆರು ಗಂಟೆ ಕಾಲ ಧರಣಿ ನಡೆಸಿದರು.

‘ನಾವು ನೆಟ್/ ಸ್ಲೆಟ್, ಪಿಎಚ್.ಡಿ. ಮುಗಿಸಿ ಹಲವು ವರ್ಷದಿಂದ ಕೆಲಸ ಮಾಡುತ್ತಿದ್ದೇವೆ. ಕಡಿಮೆ ವೇತನದಲ್ಲಿ ಹೇಗೆ ಬದುಕು ನಡೆಸಲು ಸಾಧ್ಯ. ವಿವಿಯ ಸಿಂಡಿಕೇಟ್ ಜಾರಿಗೊಳಿಸಿ ಅನುಷ್ಠಾನಕ್ಕೆ ತಂದಿದ್ದ ಆದೇಶಕ್ಕೆ ಬೆಲೆ ಇಲ್ಲವೇ? ಮರು ಆದೇಶ ಜಾರಿಗೊಳಿಸುವವರೆಗೂ ನಮ್ಮ ಹೋರಾಟ ನಿಲ್ಲೋಲ್ಲ’ ಎಂದು ವಿಕಲಚೇತನರಾದ ಉಪನ್ಯಾಸಕ ಡಾ.ಶಿವಕುಮಾರ್ ಹೇಳಿದರು.

ವಿಷಯ ತಿಳಿದು ಸಿಂಡಿಕೇಟ್ ಸದಸ್ಯೆ ಚೈತ್ರ ನಾರಾಯಣ್ ಕುಲಪತಿಗಳ ಜತೆಗೆ ಮಾತನಾಡಿದರು. ಸಂಸದ ಪ್ರತಾಪ್‌ಸಿಂಹ, ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಮಧು ಮಾದೇಗೌಡ ದೂರವಾಣಿ ಮೂಲಕ ಕುಲಪತಿ ಜತೆಗೆ ಮಾತನಾಡಿದರು. ಅಲ್ಲದೇ ಪ್ರತಾಪ್‌ಸಿಂಹ ಶನಿವಾರವೇ ಖುದ್ದು ವಿವಿಗೆ ಭೇಟಿ ನೀಡಿ ಕುಲಪತಿ ಜತೆ ಮಾತನಾಡುವೆ ಎನ್ನುವ ಭರವಸೆ ನೀಡಿದರು.

ಸೋಮವಾರ ಗೊಂದಲ ಬಗೆಹರಿಸುವ ಭರವಸೆಯನ್ನು ಕುಲಪತಿ ನೀಡಿದ್ದರಿಂದ ರಾತ್ರಿ ೯.೩೦ಕ್ಕೆ ಧರಣಿ ಹಿಂಪಡೆಯಲಾಗಿದೆ.


ವಿವಿ ಜಾರಿಗೊಳಿಸಿದ ಆದೇಶ ಹಿಂಪಡೆದಿರುವ ಜತೆಗೆ ಮಾಹಿತಿ ಕೇಳಲು ಹೋದ ಉಪನ್ಯಾಸಕರ ಜತೆಗೆ ಕುಲಪತಿಗಳು ನಡೆದುಕೊಂಡ ರೀತಿ ಸರಿಯಲ್ಲ. ಇದನ್ನು ವಿರೋಧಿಸಿಯೇ ನಾವು ಅಹೋರಾತ್ರಿ ಧರಣಿ ಆರಂಭಿಸಿದ್ದೆವು. ಹಿಂದಿನ ಆದೇಶ ಜಾರಿಯಾಗದೇ ಇದ್ದರೆ ಸೋಮವಾರದಿಂದ ಮತ್ತೆ ಧರಣಿ ಆರಂಭಿಸುತ್ತೇವೆ.

-ಅತಿಥಿ ಉಪನ್ಯಾಸಕರು, ಮೈಸೂರು ವಿವಿ

andolanait

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

6 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

9 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

10 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

10 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

10 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

10 hours ago