ಜಿಲ್ಲೆಗಳು

ವೇತನ ಆದೇಶ ಮರು ಜಾರಿಗೆ ಅತಿಥಿ ಉಪನ್ಯಾಸಕರ ಧರಣಿ

ಜನಪ್ರತಿನಿಧಿಗಳ ಪ್ರವೇಶದಿಂದ ಅಹೋರಾತ್ರಿ ಧರಣಿ ವಾಪಸ್: ಇಂದು ಸಂಸದ ಪ್ರತಾಪ್‌ಸಿಂಹ ಸಭೆ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಹೆಚ್ಚಿಸಿದ್ದ ವೇತನವನ್ನು ಒಂದು ತಿಂಗಳು ನೀಡಿ ಏಕಾಏಕಿ ವಾಪಸ್ ಪಡೆದಿರುವ ಜತೆಗೆ ಕುಲಪತಿಗಳು ಸರಿಯಾಗಿ ಉತ್ತರಿಸಿದ್ದರಿಂದ ಆಕ್ರೋಶಗೊಂಡು ಅತಿಥಿ ಉಪನ್ಯಾಸಕರು ಶುಕ್ರವಾರ ಅಹೋರಾತ್ರಿ ಧರಣಿ ಆರಂಭಿಸಿ ಜನಪ್ರತಿನಿಧಿಗಳ ಮಧ್ಯೆಪ್ರವೇಶದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಕೈ ಬಿಟ್ಟಿದ್ದಾರೆ.

ಸಂಸದ ಪ್ರತಾಪ್‌ಸಿಂಹ, ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ ಹಾಗೂ ಸಿಂಡಿಕೇಟ್ ಸದಸ್ಯೆ ಚೈತ್ರ ನಾರಾಯಣ್ ಅವರ ಮಧ್ಯಪ್ರವೇಶಿಸಿದ ಹಿನ್ನೆಲೆಯಲ್ಲಿ ಸೋಮವಾರ ಹಣಕಾಸು ಅಧಿಕಾರಿಯೊಂದಿಗೆ ಚರ್ಚಿಸಿ ತೀರ್ಮಾನ ತಿಳಿಸುವುದಾಗಿ ಹಂಗಾಮಿ ಕುಲಪತಿ ಪ್ರೊ.ಎಚ್.ರಾಜಶೇಖರ್ ತಿಳಿಸಿದ್ದರಿಂದ ಧರಣಿ ಹಿಂಪಡೆಯಲಾಗಿದೆ.

ಮೈಸೂರು ವಿವಿ ವ್ಯಾಪ್ತಿಯಲ್ಲಿ ೯೭೦ ಅತಿಥಿ ಉಪನ್ಯಾಸಕರು ಗಂಗೋತ್ರಿ, ವಿವಿ ಕಾಲೇಜುಗಳ ವ್ಯಾಪ್ತಿಯಲ್ಲಿ ಕಾರ‌್ಯನಿರ್ವಹಿಸುತ್ತಿದ್ದಾರೆ. ಅವರಲ್ಲಿ ೧೮ ಸಾವಿರ ರೂ. ವೇತನ ಇದ್ದವರಿಗೆ ೨೪ ಸಾವಿರ ರೂ., ೨೩ ಸಾವಿರ ರೂ. ಇದ್ದವರಿಗೆ ೩೭ ಸಾವಿರ ರೂ.ಗೆ ಏರಿಸಿ ಹಿಂದಿನ ಕುಲಪತಿ ಪ್ರೊ.ಹೇಮಂತ್‌ಕುಮಾರ್ ಅವರ ಕಾಲದಲ್ಲಿ ಆದೇಶ ಹೊರಡಿಸಲಾಗಿತ್ತು. ಅದರಂತೆ ಅಕ್ಟೋಬರ್ ತಿಂಗಳ ವೇತನ ಹೊಸ ಆದೇಶದಂತೆ ಜಾರಿಯಾಗಿತ್ತು. ಆದರೆ ನವೆಂಬರ್ ತಿಂಗಳ ವೇತನ ಶುಕ್ರವಾರ ಬಿಡುಗಡೆಯಾಗಿದ್ದು. ಹಿಂದಿನಂತೆಯೇ ನೀಡಲಾಗಿತ್ತು. ಈ ಕುರಿತು ಮಾಹಿತಿ ಕೇಳಲು ಹೋದಾಗ ಅಧಿಕಾರಿಗಳಿಂದ ಸಮರ್ಪಕ ಉತ್ತರ ಬರಲಿಲ್ಲ. ಇದರಿಂದ ಬೇಸರಗೊಂಡ ೨೫೦ಕ್ಕೂ ಹೆಚ್ಚು ಉಪನ್ಯಾಸಕರು ಕ್ರಾಫರ್ಡ್ ಹಾಲ್ ಎದುರು ಮಧ್ಯಾಹ್ನ ೩.೩೦ಕ್ಕೆ ಪ್ರತಿಭಟನೆ ಆರಂಭಿಸಿದರು. ಇದಾದ ಕೆಲ ಹೊತ್ತಿನಲ್ಲೇ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಡಾ.ಹನುಮಂತೇಶ್, ಸಂಚಾಲಕ ಡಾ.ಕೃಷ್ಣಕುಮಾರ್, ಡಾ.ಮನು, ಡಾ.ರಾಘವೇಂದ್ರ, ಡಾ.ಸ್ವಾಮಿ, ಡಾ.ಅರುಣ್, ಡಾ.ಚೈತ್ರ, ಡಾ.ರವೀಂದ್ರ, ಡಾ.ಮಹದೇವಪ್ರಸಾದ್, ಡಾ.ಅಭಿಲಾಷ್, ಡಾ.ರಮೇಶ್ ಮತ್ತಿತರರು ಕುಲಪತಿಗಳನ್ನು ಭೇಟಿ ಮಾಡಲು ಹೋದರು.

‘ವಿಶ್ವವಿದ್ಯಾನಿಲಯ ಆರ್ಥಿಕ ನಷ್ಟದಲ್ಲಿದೆ. ಎಲ್ಲರಿಗೂ ಸಂಬಳ ಕೊಡಲು ಆಗುತ್ತಿಲ್ಲ. ಇದರಿಂದ ಈ ಹಿಂದೆ ಅತಿಥಿ ಉಪನ್ಯಾಸಕರಿಗೆ ನೀಡಿದ ವೇತನ ಮುಂದುವರಿಸಲು ಆಗೋಲ್ಲ. ಇದನ್ನು ಹಣಕಾಸು ಸಮಿತಿಯಲ್ಲಿ ತೀರ್ಮಾನಿಸಿ ಜಾರಿಗೊಳಿಸಲಾಗಿದೆ’ ಎಂದು ಕುಲಪತಿ ಪ್ರೊ.ರಾಜಶೇಖರ್ ಹೇಳಿದರೂ ನಮ್ಮನ್ನು ಸರಿಯಾಗಿ ನಡಸಿಕೊಳ್ಳಲಿಲ್ಲ. ಏಕವಚನದಲ್ಲಿ ಮಾತನಾಡಿದರು ಎಂದು ಆಕ್ರೋಶಗೊಂಡು ಅಹೋರಾತ್ರಿ ಧರಣಿ ಆರಂಭಿಸಿ. ಆರು ಗಂಟೆ ಕಾಲ ಧರಣಿ ನಡೆಸಿದರು.

‘ನಾವು ನೆಟ್/ ಸ್ಲೆಟ್, ಪಿಎಚ್.ಡಿ. ಮುಗಿಸಿ ಹಲವು ವರ್ಷದಿಂದ ಕೆಲಸ ಮಾಡುತ್ತಿದ್ದೇವೆ. ಕಡಿಮೆ ವೇತನದಲ್ಲಿ ಹೇಗೆ ಬದುಕು ನಡೆಸಲು ಸಾಧ್ಯ. ವಿವಿಯ ಸಿಂಡಿಕೇಟ್ ಜಾರಿಗೊಳಿಸಿ ಅನುಷ್ಠಾನಕ್ಕೆ ತಂದಿದ್ದ ಆದೇಶಕ್ಕೆ ಬೆಲೆ ಇಲ್ಲವೇ? ಮರು ಆದೇಶ ಜಾರಿಗೊಳಿಸುವವರೆಗೂ ನಮ್ಮ ಹೋರಾಟ ನಿಲ್ಲೋಲ್ಲ’ ಎಂದು ವಿಕಲಚೇತನರಾದ ಉಪನ್ಯಾಸಕ ಡಾ.ಶಿವಕುಮಾರ್ ಹೇಳಿದರು.

ವಿಷಯ ತಿಳಿದು ಸಿಂಡಿಕೇಟ್ ಸದಸ್ಯೆ ಚೈತ್ರ ನಾರಾಯಣ್ ಕುಲಪತಿಗಳ ಜತೆಗೆ ಮಾತನಾಡಿದರು. ಸಂಸದ ಪ್ರತಾಪ್‌ಸಿಂಹ, ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಮಧು ಮಾದೇಗೌಡ ದೂರವಾಣಿ ಮೂಲಕ ಕುಲಪತಿ ಜತೆಗೆ ಮಾತನಾಡಿದರು. ಅಲ್ಲದೇ ಪ್ರತಾಪ್‌ಸಿಂಹ ಶನಿವಾರವೇ ಖುದ್ದು ವಿವಿಗೆ ಭೇಟಿ ನೀಡಿ ಕುಲಪತಿ ಜತೆ ಮಾತನಾಡುವೆ ಎನ್ನುವ ಭರವಸೆ ನೀಡಿದರು.

ಸೋಮವಾರ ಗೊಂದಲ ಬಗೆಹರಿಸುವ ಭರವಸೆಯನ್ನು ಕುಲಪತಿ ನೀಡಿದ್ದರಿಂದ ರಾತ್ರಿ ೯.೩೦ಕ್ಕೆ ಧರಣಿ ಹಿಂಪಡೆಯಲಾಗಿದೆ.


ವಿವಿ ಜಾರಿಗೊಳಿಸಿದ ಆದೇಶ ಹಿಂಪಡೆದಿರುವ ಜತೆಗೆ ಮಾಹಿತಿ ಕೇಳಲು ಹೋದ ಉಪನ್ಯಾಸಕರ ಜತೆಗೆ ಕುಲಪತಿಗಳು ನಡೆದುಕೊಂಡ ರೀತಿ ಸರಿಯಲ್ಲ. ಇದನ್ನು ವಿರೋಧಿಸಿಯೇ ನಾವು ಅಹೋರಾತ್ರಿ ಧರಣಿ ಆರಂಭಿಸಿದ್ದೆವು. ಹಿಂದಿನ ಆದೇಶ ಜಾರಿಯಾಗದೇ ಇದ್ದರೆ ಸೋಮವಾರದಿಂದ ಮತ್ತೆ ಧರಣಿ ಆರಂಭಿಸುತ್ತೇವೆ.

-ಅತಿಥಿ ಉಪನ್ಯಾಸಕರು, ಮೈಸೂರು ವಿವಿ

andolanait

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

4 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

7 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

9 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

9 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

10 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

13 hours ago