ಜಿಲ್ಲೆಗಳು

ಗಿರಿಜನರಿಗೆ ಶೇ.3ರಷ್ಟು ಮೀಸಲಾತಿ ಬಿಟ್ಟುಕೊಡ ಆಗ್ರಹ

ಮೈಸೂರು: ಅರಣ್ಯ ಆಧಾರಿತ ೧೨ ಬುಡಕಟ್ಟು ಸಮುದಾಯಗಳಿಗೆ ಹಿಂದೆ ಇದ್ದ ಶೇ.೩ರಷ್ಟು ಮೀಸಲಾತಿ ಮತ್ತು ಆದಿವಾಸಿಗಳ ವಾಸ ಸ್ಥಳಗಳನ್ನು ಬಿಟ್ಟುಕೊಡಬೇಕು ಎಂದು ರಾಜ್ಯ ಮೂಲ ಆದಿವಾಸಿ ವೇದಿಕೆ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಖಜಾಂಚಿ ಕೃಷ್ಣಮೂರ್ತಿ ಮಾತನಾಡಿ, ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ನ್ಯಾ.ನಾಗಮೋಹನ್ ದಾಸ್ ಸಮಿತಿ ಶಿಫಾರಸ್ಸಿನಂತೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿರುವುದು ಸ್ವಾಗತಾರ್ಹ. ಆದರೆ, ಈ ಹಿಂದೆ ಅರಣ್ಯ ಆಧಾರಿತ ಆದಿವಾಸಿಗಳಿಗೆ ನೀಡಿದ್ದ ಶೇ.೩ರಷ್ಟು ಮೀಸಲಾತಿ ನಿಜವಾದ ಆದಿವಾಸಿಗಳಿಗೆ ದಕ್ಕುತ್ತಿಲ್ಲ ಎಂದು ಬೇಸರಿಸಿದರು.
ಪರಿಶಿಷ್ಟ ಪಂಗಡದ ಕೆಲ ಸಮುದಾಯಗಳು ಮೀಸಲಾತಿಯ ಲಾಭ ಪಡೆದು ಮೂಲ ಆದಿವಾಸಿಗಳಿಗೆ ಅನ್ಯಾಯ ಮಾಡಿವೆ. ಇದರಿಂದ ಸಮುದಾಯದಲ್ಲಿ ಹೆಚ್ಚಿನ ವಿದ್ಯಾರ್ಹತೆ ಹೊಂದಿದ್ದರೂ ಸರ್ಕಾರಿ ಕೆಲಸಗಳು ಕೈ ತಪ್ಪುತ್ತಿವೆ. ಪಿಎಚ್.ಡಿ. ಪಡೆದವರಿಗೂ ಕೆಲಸವಿಲ್ಲದಂತಾಗಿದೆ ಹೇಳಿದರು.
ಸಂವಿಧಾನ ಬದ್ಧ ೨೦೦೬ರ ಅರಣ್ಯ ಹಕ್ಕು ಕಾಯಿದೆಯಂತೆ ಸರ್ಕಾರ ಅರಣ್ಯ ವಾಸಿಗಳನ್ನು ಕಾಡಿಗೆ ಬಿಟ್ಟು ಸ್ವಾತಂತ್ರ್ಯವಾಗಿ ಜೀವನ ಮಾಡಲು ಅನುವು ಮಾಡಿಕೊಡಬೇಕು. ಹುಲಿ ಸಂರಕ್ಷಣಾ ಯೋಜನೆ ಹೆಸರಿನಲ್ಲಿ ಆದಿವಾಸಿಗಳಿಗೆ ಅನ್ಯಾಯ ಮಾಡಲು ಹೊರಟಿರುವುದು ಖಂಡನೀಯ. ಆದಿವಾಸಿ ಸಂರಕ್ಷಣಾ ಯೋಜನೆಯಡಿ ಆದಿವಾಸಿಗಳ ಮೂಲ ನೆಲೆಯನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.
ಸಂಯೋಜಕ ವಿಜಯಕುಮಾರ, ಲ್ಯಾಂಪ್ಸ್ ನಿರ್ದೇಶಕ ಶಿವರಾಜು ಅಂಕನಾಥಪುರ, ಸೋಲಿಗರ ಅಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎಂ.ಜಡೇಸ್ವಾಮಿಗೌಡ, ರಾಜ್ಯ ಜೇನುಕುರುಬ ಅಭಿವೃದ್ಧಿ ಅಧ್ಯಕ್ಷ ಜೆ.ಟಿ.ರಾಜಪ್ಪ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಎದೆಗೆ ಗನ್‌ ಇಟ್ಟು ತಾವೇ ಶೂಟ್‌ ಮಾಡಿಕೊಂಡ ಸಿ.ಜೆ.ರಾಯ್:‌ ಮರಣೋತ್ತರ ಪರೀಕ್ಷೆಯಲ್ಲಿ ದೃಢ

ಬೆಂಗಳೂರು: ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…

6 mins ago

ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…

7 mins ago

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…

30 mins ago

ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್: ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…

1 hour ago

ತಗಡೂರು ಖಾದಿ ಕೇಂದ್ರ ಪುನಶ್ಚೇತನಕ್ಕೆ ಪಣ

ಹಿರಿಯ ರಂಗಕರ್ಮಿ ಹೆಗ್ಗೂಡು ಪ್ರಸನ್ನ ನೇತೃತ್ವದಲ್ಲಿ ನಡೆದ ಸಭೆ; ಸುರೇಂದ್ರ ಕೌಲಗಿ ಮತ್ತಿತರರು ಭಾಗಿ ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ…

1 hour ago

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್‌…

2 hours ago