ಮೈಸೂರು: ಅರಣ್ಯ ಆಧಾರಿತ ೧೨ ಬುಡಕಟ್ಟು ಸಮುದಾಯಗಳಿಗೆ ಹಿಂದೆ ಇದ್ದ ಶೇ.೩ರಷ್ಟು ಮೀಸಲಾತಿ ಮತ್ತು ಆದಿವಾಸಿಗಳ ವಾಸ ಸ್ಥಳಗಳನ್ನು ಬಿಟ್ಟುಕೊಡಬೇಕು ಎಂದು ರಾಜ್ಯ ಮೂಲ ಆದಿವಾಸಿ ವೇದಿಕೆ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಖಜಾಂಚಿ ಕೃಷ್ಣಮೂರ್ತಿ ಮಾತನಾಡಿ, ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ನ್ಯಾ.ನಾಗಮೋಹನ್ ದಾಸ್ ಸಮಿತಿ ಶಿಫಾರಸ್ಸಿನಂತೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿರುವುದು ಸ್ವಾಗತಾರ್ಹ. ಆದರೆ, ಈ ಹಿಂದೆ ಅರಣ್ಯ ಆಧಾರಿತ ಆದಿವಾಸಿಗಳಿಗೆ ನೀಡಿದ್ದ ಶೇ.೩ರಷ್ಟು ಮೀಸಲಾತಿ ನಿಜವಾದ ಆದಿವಾಸಿಗಳಿಗೆ ದಕ್ಕುತ್ತಿಲ್ಲ ಎಂದು ಬೇಸರಿಸಿದರು.
ಪರಿಶಿಷ್ಟ ಪಂಗಡದ ಕೆಲ ಸಮುದಾಯಗಳು ಮೀಸಲಾತಿಯ ಲಾಭ ಪಡೆದು ಮೂಲ ಆದಿವಾಸಿಗಳಿಗೆ ಅನ್ಯಾಯ ಮಾಡಿವೆ. ಇದರಿಂದ ಸಮುದಾಯದಲ್ಲಿ ಹೆಚ್ಚಿನ ವಿದ್ಯಾರ್ಹತೆ ಹೊಂದಿದ್ದರೂ ಸರ್ಕಾರಿ ಕೆಲಸಗಳು ಕೈ ತಪ್ಪುತ್ತಿವೆ. ಪಿಎಚ್.ಡಿ. ಪಡೆದವರಿಗೂ ಕೆಲಸವಿಲ್ಲದಂತಾಗಿದೆ ಹೇಳಿದರು.
ಸಂವಿಧಾನ ಬದ್ಧ ೨೦೦೬ರ ಅರಣ್ಯ ಹಕ್ಕು ಕಾಯಿದೆಯಂತೆ ಸರ್ಕಾರ ಅರಣ್ಯ ವಾಸಿಗಳನ್ನು ಕಾಡಿಗೆ ಬಿಟ್ಟು ಸ್ವಾತಂತ್ರ್ಯವಾಗಿ ಜೀವನ ಮಾಡಲು ಅನುವು ಮಾಡಿಕೊಡಬೇಕು. ಹುಲಿ ಸಂರಕ್ಷಣಾ ಯೋಜನೆ ಹೆಸರಿನಲ್ಲಿ ಆದಿವಾಸಿಗಳಿಗೆ ಅನ್ಯಾಯ ಮಾಡಲು ಹೊರಟಿರುವುದು ಖಂಡನೀಯ. ಆದಿವಾಸಿ ಸಂರಕ್ಷಣಾ ಯೋಜನೆಯಡಿ ಆದಿವಾಸಿಗಳ ಮೂಲ ನೆಲೆಯನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.
ಸಂಯೋಜಕ ವಿಜಯಕುಮಾರ, ಲ್ಯಾಂಪ್ಸ್ ನಿರ್ದೇಶಕ ಶಿವರಾಜು ಅಂಕನಾಥಪುರ, ಸೋಲಿಗರ ಅಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎಂ.ಜಡೇಸ್ವಾಮಿಗೌಡ, ರಾಜ್ಯ ಜೇನುಕುರುಬ ಅಭಿವೃದ್ಧಿ ಅಧ್ಯಕ್ಷ ಜೆ.ಟಿ.ರಾಜಪ್ಪ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…