ಮೈಸೂರು: ಅರಣ್ಯ ಆಧಾರಿತ ೧೨ ಬುಡಕಟ್ಟು ಸಮುದಾಯಗಳಿಗೆ ಹಿಂದೆ ಇದ್ದ ಶೇ.೩ರಷ್ಟು ಮೀಸಲಾತಿ ಮತ್ತು ಆದಿವಾಸಿಗಳ ವಾಸ ಸ್ಥಳಗಳನ್ನು ಬಿಟ್ಟುಕೊಡಬೇಕು ಎಂದು ರಾಜ್ಯ ಮೂಲ ಆದಿವಾಸಿ ವೇದಿಕೆ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಖಜಾಂಚಿ ಕೃಷ್ಣಮೂರ್ತಿ ಮಾತನಾಡಿ, ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ನ್ಯಾ.ನಾಗಮೋಹನ್ ದಾಸ್ ಸಮಿತಿ ಶಿಫಾರಸ್ಸಿನಂತೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿರುವುದು ಸ್ವಾಗತಾರ್ಹ. ಆದರೆ, ಈ ಹಿಂದೆ ಅರಣ್ಯ ಆಧಾರಿತ ಆದಿವಾಸಿಗಳಿಗೆ ನೀಡಿದ್ದ ಶೇ.೩ರಷ್ಟು ಮೀಸಲಾತಿ ನಿಜವಾದ ಆದಿವಾಸಿಗಳಿಗೆ ದಕ್ಕುತ್ತಿಲ್ಲ ಎಂದು ಬೇಸರಿಸಿದರು.
ಪರಿಶಿಷ್ಟ ಪಂಗಡದ ಕೆಲ ಸಮುದಾಯಗಳು ಮೀಸಲಾತಿಯ ಲಾಭ ಪಡೆದು ಮೂಲ ಆದಿವಾಸಿಗಳಿಗೆ ಅನ್ಯಾಯ ಮಾಡಿವೆ. ಇದರಿಂದ ಸಮುದಾಯದಲ್ಲಿ ಹೆಚ್ಚಿನ ವಿದ್ಯಾರ್ಹತೆ ಹೊಂದಿದ್ದರೂ ಸರ್ಕಾರಿ ಕೆಲಸಗಳು ಕೈ ತಪ್ಪುತ್ತಿವೆ. ಪಿಎಚ್.ಡಿ. ಪಡೆದವರಿಗೂ ಕೆಲಸವಿಲ್ಲದಂತಾಗಿದೆ ಹೇಳಿದರು.
ಸಂವಿಧಾನ ಬದ್ಧ ೨೦೦೬ರ ಅರಣ್ಯ ಹಕ್ಕು ಕಾಯಿದೆಯಂತೆ ಸರ್ಕಾರ ಅರಣ್ಯ ವಾಸಿಗಳನ್ನು ಕಾಡಿಗೆ ಬಿಟ್ಟು ಸ್ವಾತಂತ್ರ್ಯವಾಗಿ ಜೀವನ ಮಾಡಲು ಅನುವು ಮಾಡಿಕೊಡಬೇಕು. ಹುಲಿ ಸಂರಕ್ಷಣಾ ಯೋಜನೆ ಹೆಸರಿನಲ್ಲಿ ಆದಿವಾಸಿಗಳಿಗೆ ಅನ್ಯಾಯ ಮಾಡಲು ಹೊರಟಿರುವುದು ಖಂಡನೀಯ. ಆದಿವಾಸಿ ಸಂರಕ್ಷಣಾ ಯೋಜನೆಯಡಿ ಆದಿವಾಸಿಗಳ ಮೂಲ ನೆಲೆಯನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.
ಸಂಯೋಜಕ ವಿಜಯಕುಮಾರ, ಲ್ಯಾಂಪ್ಸ್ ನಿರ್ದೇಶಕ ಶಿವರಾಜು ಅಂಕನಾಥಪುರ, ಸೋಲಿಗರ ಅಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎಂ.ಜಡೇಸ್ವಾಮಿಗೌಡ, ರಾಜ್ಯ ಜೇನುಕುರುಬ ಅಭಿವೃದ್ಧಿ ಅಧ್ಯಕ್ಷ ಜೆ.ಟಿ.ರಾಜಪ್ಪ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…