ಜಿಲ್ಲೆಗಳು

ಮಂಡ್ಯ: ಕುಸಿದು ಬಿದ್ದು ಬಾಲಕಿ ಸಾವು

ಮಂಡ್ಯ: ಹೃದಯಘಾತದಿಂದ ಕುಸಿದುಬಿದ್ದು ಬಾಲಕಿ ಮೃತಪಟ್ಟ ಘಟನೆ ತಾಲ್ಲೂಕಿನ ಬಿ.ಹೊಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದಿದೆ.
ತಾಲ್ಲೂಕಿನ ಹಂಪಾಪುರ ಗ್ರಾಮದ ಮನುಜ ಎಂಬ ಬಾಲಕಿಯು ಬಿ.ಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೬ನೇ ತರಗತಿ ಓದುತ್ತಿದ್ದು, ಮಂಗಳವಾರ ಎಂದಿನAತೆ ಶಾಲೆಗೆ ಆಗಮಿಸಿದ್ದಾಳೆ. ಮಧ್ಯಾಹ್ನದ ವರೆಗೂ ಆರೋಗ್ಯವಾಗಿಯೇ ಇದ್ದ ಬಾಲಕಿಯು ಮಧ್ಯಾಹ್ನ ೩.೩೦ ಗಂಟೆ ಸಮಯದಲ್ಲಿ ಕ್ರೀಡಾ ಚಟುವಟಿಕೆಗೆಂದು ಬಿಟ್ಟಾಗ, ಷೂ ಕಳಚಿ ಸ್ವಲ್ಪ ಹೆಜ್ಜೆ ಹಾಕಿದ ಸಮಯದಲ್ಲಿ ಸುಸ್ತಾಗಿ ಕುಸಿದು ಬಿದ್ದಿದ್ದಾಳೆ.
ನಂತರ ಶಿಕ್ಷಕರು ಅಲ್ಲೇ ಪಕ್ಕದಲ್ಲಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆಂದು ಬಾಲಕಿಯನ್ನು ಕರೆದುಕೊಂಡು ಹೋದರೂ ಸಹ ಅಷ್ಟರೊಳಗೆ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ, ನಂತರ ಬಾಲಕಿಯ ಮೃತದೇಹವನ್ನು ಹಂಪಾಪುರ ಗ್ರಾಮಕ್ಕೆ ಪೋಷಕರು ತೆಗೆದುಕೊಂಡು ಹೋಗಿ ಅಂತ್ಯಸAಸ್ಕಾರ ಮುಗಿಸಿದ್ದಾರೆ.
ಬಾಲಕಿಯ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆಯನ್ನು ನೀಡಿರುವ ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಸೌಭಾಗ್ಯ ಅವರು ಶಿಕ್ಷಕರು ಹಾಗೂ ದಾನಿಗಳಿಂದಲೂ ಪರಿಹಾರ ಒದಗಿಸುವುದಕ್ಕೆ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

andolanait

Recent Posts

ಮಕ್ಕಳ ಸಂಕಷ್ಟಕ್ಕೆ ಎಣೆಯಿಲ್ಲ

ಚಿರಂಜೀವಿ ಸಿ. ಹುಲ್ಲಹಳ್ಳಿ  ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…

44 mins ago

ಬೀದಿ ನಾಯಿಗಳ ಹಾವಳಿ; ಬಸವಳಿದ ಜನತೆ

ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…

52 mins ago

ದರೋಡೆಗೆ ಪ್ರಶಸ್ತವಾಯಿತೇ ಬೈಪಾಸ್?

ಹೇಮಂತ್‌ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…

59 mins ago

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

13 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

14 hours ago