ಮಂಡ್ಯ: ಹೃದಯಘಾತದಿಂದ ಕುಸಿದುಬಿದ್ದು ಬಾಲಕಿ ಮೃತಪಟ್ಟ ಘಟನೆ ತಾಲ್ಲೂಕಿನ ಬಿ.ಹೊಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದಿದೆ.
ತಾಲ್ಲೂಕಿನ ಹಂಪಾಪುರ ಗ್ರಾಮದ ಮನುಜ ಎಂಬ ಬಾಲಕಿಯು ಬಿ.ಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೬ನೇ ತರಗತಿ ಓದುತ್ತಿದ್ದು, ಮಂಗಳವಾರ ಎಂದಿನAತೆ ಶಾಲೆಗೆ ಆಗಮಿಸಿದ್ದಾಳೆ. ಮಧ್ಯಾಹ್ನದ ವರೆಗೂ ಆರೋಗ್ಯವಾಗಿಯೇ ಇದ್ದ ಬಾಲಕಿಯು ಮಧ್ಯಾಹ್ನ ೩.೩೦ ಗಂಟೆ ಸಮಯದಲ್ಲಿ ಕ್ರೀಡಾ ಚಟುವಟಿಕೆಗೆಂದು ಬಿಟ್ಟಾಗ, ಷೂ ಕಳಚಿ ಸ್ವಲ್ಪ ಹೆಜ್ಜೆ ಹಾಕಿದ ಸಮಯದಲ್ಲಿ ಸುಸ್ತಾಗಿ ಕುಸಿದು ಬಿದ್ದಿದ್ದಾಳೆ.
ನಂತರ ಶಿಕ್ಷಕರು ಅಲ್ಲೇ ಪಕ್ಕದಲ್ಲಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆಂದು ಬಾಲಕಿಯನ್ನು ಕರೆದುಕೊಂಡು ಹೋದರೂ ಸಹ ಅಷ್ಟರೊಳಗೆ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ, ನಂತರ ಬಾಲಕಿಯ ಮೃತದೇಹವನ್ನು ಹಂಪಾಪುರ ಗ್ರಾಮಕ್ಕೆ ಪೋಷಕರು ತೆಗೆದುಕೊಂಡು ಹೋಗಿ ಅಂತ್ಯಸAಸ್ಕಾರ ಮುಗಿಸಿದ್ದಾರೆ.
ಬಾಲಕಿಯ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆಯನ್ನು ನೀಡಿರುವ ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಸೌಭಾಗ್ಯ ಅವರು ಶಿಕ್ಷಕರು ಹಾಗೂ ದಾನಿಗಳಿಂದಲೂ ಪರಿಹಾರ ಒದಗಿಸುವುದಕ್ಕೆ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…