ಹುಡುಗಿ ಚುಡಾಯಿಸಿದ ಹಳೆ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಶೀಟರ್ ತನ್ನ ಸಹೋದರ ಮತ್ತು ಸಂಬಂಧಿಕನ ಜತೆ ಸೇರಿ ಆಟೊ ಡ್ರೈವರ್ನನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಮಂಡಕಳ್ಳಿಯಲ್ಲಿ ನಡೆದಿದೆ.
ರೌಡಿ ಶೀಟರ್ ಸುನಿಲ್ ರಾಜ್ ಹಾಗೂ ಆತನ ತಮ್ಮ ನಿಖಿಲ್ ರಾಜ್ ಮತ್ತು ಚಿಕ್ಕಪ್ಪ ನಾರಾಯಣ ಕೊಲೆ ಆರೋಪಿಗಳಾಗಿದ್ದು, ಗೂಡ್ಸ್ ಆಟೊ ಡ್ರೈವರ್ ರವಿಚಂದ್ರ ( 33 ) ಮೃತ ದುರ್ದೈವಿ. ರವಿಚಂದ್ರನ ಸಹೋದರ ಶಿವರಾಜ್ ಗಾರೆ ಕೆಲಸ ಮಾಡಿಕೊಂಡಿದ್ದು ಆತನ ಸ್ನೇಹಿತನೊಬ್ಬ ರೌಡಿ ಶೀಟರ್ ಸುನಿಲ್ ರಾಜ್ಗೆ ಪರಿಚಯವಿದ್ದ ಹುಡುಗಿಯೊಬ್ಬಳನ್ನು ಚುಡಾಯಿಸಿದ್ದ.
ಈ ಸಂಬಂಧ ಗಲಾಟೆಯಾದಾಗ ಶಿವರಾಜ್ ಮಧ್ಯ ಪ್ರವೇಶಿಸಿ ಗಲಾಟೆ ಬಿಡಿಸಿದ್ದು, ಇದರ ದ್ವೇಷ ಇಟ್ಟುಕೊಂಡಿದ್ದ ಸುನಿಲ್ ರಾಜ್ ನಿನ್ನೆ ( ಜನವರಿ 26 ) ರಾತ್ರಿ ತನ್ನ ಸಹೋದರ ಹಾಗೂ ಚಿಕ್ಕಪ್ಪನ ಜತೆಗೂಡಿ ರವಿಚಂದ್ರ ಮನೆ ಬಳಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು ಸುನಿಲ್ ರಾಜ್ ಡ್ರಾಗನ್ನಿಂದ ರವಿಚಂದ್ರನ ಹೊಟ್ಟೆ ಭಾಗಕ್ಕೆ ಇರಿದಿದ್ದಾನೆ. ಅಲ್ಲದೇ ಶಿವರಾಜ್ ಹಾಗೂ ರವಿಚಂದ್ರನ ಮಾವ ಮಹೇಶ್ಗೂ ಗಾಯಗಳಾಗಿವೆ. ರವಿಚಂದ್ರನನ್ನು ಆಸ್ಪತ್ರೆಗೆ ದಾಖಲಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಆರೋಪಿಗಳ ವಿರುದ್ಧ ಮೈಸೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…