ಚಾಮರಾಜನಗರ: ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಹಿಂದುಳಿದ ಈ ಜಿಲ್ಲೆಗೆ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮಾಜಿ ಶಾಸಕ ವಾಟಾಳ್ ನಾಗರಾಜ್ ಒತ್ತಾಯಿಸಿದರು.
ನಗರದ ವಿವಿಧೆಡೆ ಸಂಚಾರ ಮಾಡಿ ಪ್ರತ್ಯೇಕವಾಗಿ ಸಮುದಾಯಗಳ ಮುಖಂಡರ ಭೇಟಿ ನಡೆಸಿದ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಲಿಸಲಿರುವ ಆಯವ್ಯಯದಲ್ಲಿ ಚಾಮರಾಜನಗರಕ್ಕೆ ಒಂದು ಹೊಸ ಯೋಜನೆ ಪ್ರಕಟಿಸಬೇಕು. ಕಾವೇರಿ 2ನೇ ಹಂತ ಕುಡಿಯುವ ನೀರಿನ ಯೋಜನೆಗೆ ಅನುದಾನ ನೀಡಬೇಕು ಎಂದು ಹೇಳಿದರು.
ಮೊದಲಿಗೆ ಉಪ್ಪಾರ ಬೀದಿಯಲ್ಲಿರುವ ಮಂಟೇಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಉಪ್ಪಾರ ಸಮುದಾಯದ ಮುಖಂಡರೊಂದಿಗೆ ಮಾತುಕತೆ ನಡೆಸಿದರು. ನಗರಸಭಾ ಮಾಜಿ ಅಧ್ಯಕ್ಷ ಶಿವನಂಜಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಚಾ.ರಂ.ಶ್ರೀನಿವಾಸಗೌಡ, ಸಾಗರ್ರಾವತ್, ಸಂಜಯ್, ಕುಮಾರ್, ಮಹೇಶ್, ತಾಂಡವಮೂರ್ತಿ, ವರದನಾಯಕ, ರಾಜುನಾಯಕ, ಮಹೇಶಗೌಡ, ಪಣ್ಯದಹುಂಡಿ ರಾಜು, ಅರುಣ್ಕುಮಾರ್ಗೌಡ, ಶಿವಲಿಂಗಮೂರ್ತಿ, ಇತರರು ಹಾಜರಿದ್ದರು.
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…