ಮೈಸೂರು: ವೈದ್ಯಕೀಯ ಸೀಟು ಕೊಡಿಸುವ ಅಧಿಕಾರ ಯಾರಿಗೂ ಇಲ್ಲ. ಇದು ನನ್ನ ಮೇಲೆ ಆಗುತ್ತಿರುವ ಅಪಪ್ರಚಾರ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ.ಎಂ.ಬಿ.ಮಂಜೇಗೌಡ ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳ ಪೈಕಿ ಒಂದಾದ ಕಿಮ್ಸ್ನಲ್ಲಿ (ಕೆಂಪೇಗೌಡ ವೈದ್ಯಕೀಯ ಶಾಲೇಜು) ವೈದ್ಯಕೀಯ ಪದವಿ ವ್ಯಾಸಂಗಕ್ಕೆ ಪ್ರವೇಶ ಕುರಿತಂತೆ ಸೀಟು ಕೊಡಿಸುವ ಅಧಿಕಾರ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದಿಯಾಗಿ ಯಾವುದೇ ನಿರ್ದೇಶಕರಿಗೆ ಇಲ್ಲ. ಕಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ಮೋಸ ಮಾಡಲಾಗುತ್ತಿದೆ ಎಂಬ ವಿಚಾರ ವ್ಯಾಪಕವಾಗಿ ಹರಡಿದ್ದು, ಯಾವುದೇ ಸಂಘದ ನಿರ್ದೇಶಕರಿಗೆ, ಅಧ್ಯಕ್ಷರಿಗೆ, ಕಾರ್ಯದರ್ಶಿಗಳಿಗೆ ಆ ರೀತಿಯ ಯಾವುದೇ ಅಧಿಕಾರ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕಿಮ್ಸ್ನಲ್ಲಿ ವೈದ್ಯಕೀಯ ಸೀಟು ಕೊಡಿಸುತ್ತೇವೆಂಬುದು ಸತ್ಯಕ್ಕೆ ದೂರವಾದ ಸಂಗತಿ. ಕೆಲವರ ಈ ರೀತಿಯ ವ್ಯವಹಾರಕ್ಕೂ ರಾಜ್ಯ ಒಕ್ಕಲಿಗರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಕಿಮ್ಸ್ ಕಾಲೇಜಿಗೂ ಯಾವುದೇ ಸಂಬಂಧ ಇಲ್ಲ, ಆ ರೀತಿಯ ಅಧಿಕಾರವನ್ನು ಸಂಘ ಯಾವುದೇ ವ್ಯಕ್ತಿಗೂ ನೀಡಿಲ್ಲ ಮತ್ತು ಆ ವ್ಯವಸ್ಥೆ ಸಂಘದಲ್ಲಿ ಇಲ್ಲ, ನನ್ನ ಮೇಲೆ ಸುಳ್ಳು ಆರೋಪ ಮತ್ತು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಎಂ.ಬಿ.ಮಂಜೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…