ಜಿಲ್ಲೆಗಳು

ಗೋಣಿಕೊಪ್ಪ ದಸರಾ ಜನೋತ್ಸವ : ಕಣ್ಮನ ಸೆಳೆದ ಸ್ತಬ್ಧಚಿತ್ರ, ಜಾನಪದ ಕಲಾತಂಡ

ಗೋಣಿಕೊಪ್ಪ : ಸಂಸ್ಕೃತಿ ,ನಾಡು -ನುಡಿ, ಆರೋಗ್ಯ, ಪರಿಸರದ ಕಾಳಜಿಯೊಂದಿಗೆ ೪೪ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವ ಸ್ತಬ್ಧಚಿತ್ರಗಳು ಜಾನಪದ ಕಲಾತಂಡಗಳ ಮೆರವಣಿಗೆಯೊಂದಿಗೆ ಕಣ್ಮನ ಸೆಳೆಯಿತು.

ನಾಡ ಹಬ್ಬ ದಸರಾ ಸಮಿತಿ ಆಯೋಜಿಸಿದ ಸ್ತಬ್ಧ ಚಿತ್ರ ಮೆರವಣಿಯಲ್ಲಿ ಸಾಮಾಜಿಕ ಕಳಕಳಿ ಪರಿಸರ ಪ್ರೇಮ ಆರೋಗ್ಯ ಶಿಕ್ಷಣ ದೇಶಭಕ್ತಿ ಬಿಂಬಿಸುವ ಜವಾಬ್ದಾರಿಗಳನ್ನು ಸಂಘಟನೆಗಳು ಹೊತ್ತಿದ್ದವು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ಶಾಸಕ ಕೆ ಜಿ ಬೋಪಯ್ಯ ,ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷ ಡಾ ಮಹೇಶ್ ಜೋಶಿ ಡೋಲು ಬಾರಿಸುವ ಮೂಲಕ ಸ್ತಬ್ದ ಚಿತ್ರ ಮೆರವಣಿಗೆಗೆ ಚಾಲನೆ ನೀಡಿದ ಬಳಿಕ ಸರ್ಕಾರಿ ಇಲಾಖೆಯ ಹಾಗೂ ವಿವಿಧ ಸಂಘ-ಸಂಸ್ಥೆಗಳು ನಿರ್ಮಿಸಿದ ಸ್ತಬ್ದಚಿತ್ರಗಳ ಮೆರವಣಿಗೆ ಹೊರಟಿತು.

ಸರ್ವಂ ದಸರಾ ಸಮಿತಿ ನಿರ್ಮಿಸಿದ ಕಾಡಿನಿಂದ ನಾಡಿನಡೆಗೆ ನಾಡಿನಿಂದ ರಾಷ್ಟ್ರಪತಿ ಭವನದವರೆಗೆ ಎಂಬ ಬುಡಕಟ್ಟು ಸಮುದಾಯದ ಸಾಧಕಿ ರಾಷ್ಟ್ರಪತಿ ದ್ರೌಪದಿ ಮರ್ಮೋ ಅವರ ಸಾಧನೆಯನ್ನ ಬಿಂಬಿಸಿರುವುದು ಗಮನರ್ಹ ವಿಚಾರವಾಗಿತ್ತು.

ತಿತಿಮತಿ ರಾಮ ಮಂದಿರ ಸಮಿತಿ ನಿರ್ಮಿಸಿದ ವೀರ ಸಾವರ್ಕರ ಅವರ ಅಂಡಮಾನ್ ಕಾರಾಗೃಹ ಶಿಕ್ಷೆಯನ್ನು ತೋರಿಸುವ ಚಿತ್ರ ಸಾರ್ವಜನಿಕರಿಗೆ ಇತಿಹಾಸದ ಸಂದೇಶವಾಗಿತ್ತು.

ಅರುವತೊಕ್ಲು ಸಂಜೀವಿನಿ ಕಟ್ಟಡ ಕಾರ್ಮಿಕರ ಸಂಘ ಮತ್ತು ಶಾರದಾಂಭ ದಸರಾ ಸಮಿತಿ ನಮ್ಮ ಮಕ್ಕಳು ನಮ್ಮ ಆಸ್ತಿ ಎಂಬ ತಲೆಬರಹದಡಿ ಮಾದಕ ವ್ಯಸನದಿಂದ ಮಕ್ಕಳನ್ನ ಹೊರಗೆ ತನ್ನಿ ಮಕ್ಕಳನ್ನು ದೇಶದ ಆಸ್ತಿಯಾಗಿ ಮಾಡಿ ಎಂಬ ಸಂದೇಶ ಗಮನಹರವಾಗಿತ್ತು.

ಪೊನ್ನಂಪೇಟೆ ಜಿಬಿ ಪುರುಷರ ಸ್ವ ಸಹಾಯ ಸಂಘದ ಸ್ತಬ್ಧ ಚಿತ್ರದಲ್ಲಿ ಕಾಡು ಬೆಳಸಿ ಉಸಿರುಗಳಿಸಿ ಮರ ಕಡಿಯದಿರಿ ನಾಡು ತೊರೆಯಿದಿರಿ ಎಂಬ ಸಂದೇಶ ಇತ್ತು.

ಗೋಣಿಕೊಪ್ಪ ಭಗತ್ ಸಿಂಗ್ ಯುವಕ ಸಂಘದ ವಿಶ್ವವನ್ನೇ ನುಂಗಿದ ಮಾನವ ಕೃತಕ ಬಾಂಬ್ ಕೊರೋನಾ ಮತ್ತು ದೇವತೆಗಳು ಸಮುದ್ರಮಂತನ ಮಾಡುತ್ತಿರುವ ಬಗ್ಗೆ ಕಟ್ಟಿಕೊಟ್ಟ ಚಿತ್ರಣ ಜನರ ನೇರ ದೃಷ್ಟಿ ನೆಟಿತು.

ಕೈಕೇರಿ ಪರಿಸರ ಪ್ರೇಮಿ ಸಂಘದ ಸ್ವಚ್ಛ ಭಾರತ್ ಅಭಿಯಾನದ ಮೂಲಕ ಆರೋಗ್ಯ ಕಾಳಜಿಯನ್ನು ತೋರಿಸಿದರು.

ಅರ್ವತೋಕ್ಲು ಕಡ್ಲಯ್ಯಪ್ಪ ದಸರಾ ಸಮಿತಿ ರಚನೆಯ ಮೂಕ ಸಂದೇಶದಲ್ಲಿ ಹಾಲು ಮತ್ತು ಆಲ್ಕೋಹಾಲಿನ ಸೇವನೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಸಂದೇಶ ಸಾರಿತು.

ದೇವರಪುರ ಭಗತ್ ಸಿಂಗ್ ಯುವಕ ಸಂಘದ ರಾಮ ಮಂದಿರ ನಿರ್ಮಾಣದ ಚಿತ್ರಣವನ್ನು ಕಟ್ಟಿಕೊಟ್ಟು ಹಿಂದುತ್ವದ ಪ್ರತೀಕವಾಗಿತ್ತು.

ಕೈಕೇರಿ ಹಿಂದುಸ್ತಾನ್ ಸಂಸ್ಥೆಯ ರೈತ ಮತ್ತು ಯೋಧ ಒಂದೇ ಮುಖದ ನಾಣ್ಯ ಹಾಗೂ ದೇಶದ ಮಾನ್ಯ ಸಂದೇಶದ ಚಿತ್ರ ಜನರ ಮನಸ್ಸಿನಾಳಕ್ಕೆ ಇಳಿಯಿತು.

ಸರ್ಕಾರಿ ಇಲಾಖೆಗಳ ಸ್ತಬ್ಧಚಿತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ಮಿಸಿದ ಚಿತ್ರ ಭೇಷ್ ಎನಿಸಿಕೊಂಡರೆ ಶಿಕ್ಷಣ ಇಲಾಖೆಯ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಿ ದೇಶದ ಆಸ್ತಿಯನ್ನಾಗಿ ನೋಡಿ ಎಂಬ ಸಂದೇಶ ಸಾರಿತು.

ಆರೋಗ್ಯ ಇಲಾಖೆಯ ಯೋಜನೆಳಗಳ ಬಗ್ಗೆ ಗಮನಹರ ಸಂದೇಶವನ್ನು ಕೇಂದ್ರೀಕರಿಸಿತು.

ತಾಲೂಕು ಪಂಚಾಯತ್, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಒಳಗೊಂಡ ಚಿತ್ರಣವನ್ನು ಸರೋಜನಿಕರಿಗೆ ಪ್ರದರ್ಶನ ಮಾಡಲಾಯಿತು.

andolana

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

25 mins ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

5 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

5 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

5 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

6 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

6 hours ago