ಜಿಲ್ಲೆಗಳು

ಉತ್ತಮ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ: ವಿಶ್ವನಾಥ್

ಮೈಸೂರು: ಉತ್ತಮ ಆರೋಗ್ಯ, ಉತ್ಸಾಹ ಹಾಗೂ ಉಲ್ಲಾಸಭರಿ ಜೀವನಕ್ಕಾಗಿ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ್ ಹೇಳಿದರು.
ಬುಧವಾರ ನಗರದ ಬೇಡನ್‌ಪೂವೆಲ್ ಪಬ್ಲಿಕ್ ಶಾಲೆಯ ಕ್ರೀಡಾ ಮೈದಾನದಲ್ಲಿ ವಿದ್ಯಾವರ್ಧಕ ಪದವಿಪೂರ್ವ ಕಾಲೇಜು ವತಿಯಿಂದ ದಿ.ಹೆಚ್.ಕೆಂಪೇಗೌಡ, ದಿ.ಆರ್.ನಂಜಯ್ಯ ಮತ್ತು ದಿ.ಹೆಚ್.ಬಿ,.ನರಸಯ್ಯ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಥ್ರೋಬಾಲ್, ಕಬ್ಬಡ್ಡಿ ಮತ್ತು ವಾಲೀಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇವಲ ಪಠ್ಯ ಚಟುವಟಿಕೆಗಳಲ್ಲಿ ತೊಡಗಿದರೆ ಆರೋಗ್ಯದಂತಹ ವಿಷಯಗಳ ಮೇಲೆ ಗಮನ ಹರಿಸಲು ಸಾಧ್ಯವಾಗುವುದಿಲ್ಲ, ಅಂತಹ ಸಂದರ್ಭಗಳಲ್ಲಿ ಈ ರೀತಿಯ ಕ್ರೀಡಾಕೂಟಗಳು ವಿದೈಆರ್ಥಿಗಳ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತವೆ ಎಂದರು.
ಕ್ರೀಡಾಕೂಟಗಳಲ್ಲಿ ಭಾಗವಹಿಸುವುದೇ ಸಂತಸದ ವಿಚಾರ ಎಂದು ನೀವು ತಿಳಿದುಕೊಳ್ಳಬೇಕು. ಕ್ರೀಡೆಗಳಲ್ಲಿಯೂ ಭಾಗವಹಿಸಿ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಇದರಿಂದ ನಿಮ್ಮ ಮುಂದಿನ ಭವಿಷ್ಯ ಉತ್ತಮವಾಗಿರುತ್ತದೆ ಹಾಗೂ ಹಲವೆ ಸಾಧನೆಗಳನ್ನು ಮಾಡಲು ಸಹಕಾರಿಯಾಗುತ್ತದೆ ಎಂದರು.
ಕ್ರೀಡಾಕೂಟದಲ್ಲಿ ವಿದ್ಯಾವರ್ಧಕ, ಸದ್ವಿದ್ಯ, ಮರಿಮಲ್ಲಪ್ಪ, ಸಂತ ಫಿಲೋಮಿನಾ, ವಿಜಯವಿಠ್ಠಲ ಸೇರಿದಂತೆ ಹಲವು ಕಾಲೇಜಿನ ೩೧ ತಂಡಗಳು ಭಾಗವಹಿಸಿದ್ದವು. ೧೧ ತಂಡ ಕಬ್ಬಡ್ಡಿಗೆ. ೧೧ ತಂಡ ವಾಲೀಬಾಲ್ ಪಂದ್ಯಕ್ಕೆ ಹಾಗೂ ೯ ತಂಡಗಳು ಥ್ರೋಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.
ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯ ಹೆಚ್.ಕೆ.ರಮೇಶ್, ಗೌರವ ಕೋಶಾಧ್ಯಕ್ಷ ಶೈಲಾರಾಮಣ್ಣವರ್, ಪ್ರಾಂಶುಪಾಲ ಸಿದ್ದಯ್ಯ ಮುಂತಾದವರು ಭಾಗವಹಿಸಿದ್ದರು. ಸಂಜೆ ಸಮಾರೋಪ ಸಮಾರಂಭ ನಡೆಯಿತು.

andolanait

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

7 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

20 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

20 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

20 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

20 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

20 hours ago