ಜಿಲ್ಲೆಗಳು

ಹುಬ್ಬಳ್ಳಿ-ಬೆಂಗಳೂರು ಪ್ರಯಾಣಿಕರಿಗೆ ಸಿಹಿ ಸುದ್ದಿ: ಇನ್ಮುಂದೆ ಅರಸೀಕೆರೆಯಲ್ಲೂ ಎಕ್ಸಪ್ರೆಸ್​ ರೈಲನ್ನು ಹತ್ತಬಹುದು

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಹುಬ್ಬಳ್ಳಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬೆಂಗಳೂರಿಗೆ ಸಂಪರ್ಕಿಸುವ (ರೈಲು ಸಂಖ್ಯೆ 07339/07340 ಮತ್ತು 07353/07354) ರೈಲು ಇನ್ಮುಂದೆ ಅರಸಿಕೇರೆ ನಿಲ್ದಾಣದಲ್ಲೂ ನಿಲ್ಲುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಪ್ರತಿದಿನ ಸಂಚರಿಸುವ ಎಸ್​ಎಸ್​ಎಸ್​ ಹುಬ್ಬಳ್ಳಿ -ಕೆಎಸ್​ಆರ್​ ಬೆಂಗಳೂರು -ಎಸ್​ಎಸ್​​ಎಸ್​ ಹುಬ್ಬಳ್ಳಿ ದೈನಂದಿನ ವಿಶೇಷ ಎಕ್ಸಪ್ರೆಸ್​ ರೈಲು (ರೈಲು ಸಂಖ್ಯೆ 07339/07340) ರೈಲನ್ನು ಇನ್ಮುಂದೆ ಎರಡು ಮಾರ್ಗದಲ್ಲೂ ಅರಸಿಕೇರೆ ನಿಲ್ದಾಣದಲ್ಲಿ ನಿಲ್ಲಿಸಲಾಗುತ್ತದೆ.

ರೈಲು ಸಂಖ್ಯೆ 07339 ರೈಲು ಇಂದು (ಮಾ.22) ಬೆಳಿಗ್ಗೆ 3:33ಕ್ಕೆ ಅರಸಿಕೇರೆ ತಲುಪಿದ್ದು, 3:36 ಬೆಳಗ್ಗೆ ಅಲ್ಲಿಂದ ಹೊರಟಿದೆ. ಅದೇ ರೀತಿ, ಹಿಂದಿರುಗುವ ಸಮಯದಲ್ಲಿ, ರೈಲು ಸಂಖ್ಯೆ 07340 ಕೆಎಸ್‌ಆರ್ ರಾತ್ರಿ 02:07 ಕ್ಕೆ ಅರಸೀಕೆರೆಗೆ ಆಗಮಿಸಲಿದ್ದು, ಅಲ್ಲಿಂದ 02:10 ಕ್ಕೆ ಹೊರಡಲಿದೆ.

ಮಾರ್ಚ್ 23, 2023 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 07353/07354 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೆಎಸ್‌ಆರ್ ಬೆಂಗಳೂರು ದೈನಂದಿನ ವಿಶೇಷ ಎಕ್ಸ್‌ಪ್ರೆಸ್ ಎರಡು ದಿಕ್ಕುಗಳಲ್ಲಿ ಯಶವಂತಪುರ, ತುಮಕೂರು ಮತ್ತು ಅರಸೀಕೆರೆ ನಿಲ್ದಾಣಗಳಲ್ಲಿ ಹೆಚ್ಚುವರಿ ನಿಲುಗಡೆಗಳನ್ನು ಹೊಂದಿರುತ್ತದೆ.

ಈ ರೈಲು (07353) ಯಶವಂತಪುರಕ್ಕೆ 07:39/07:41 ಕ್ಕೆ, ತುಮಕೂರು 08:28/08:30 ಕ್ಕೆ ಮತ್ತು ಅರಸೀಕೆರೆ 09:40 ಅಥವಾ 09:43 ಕ್ಕೆ ಆಗಮಿಸಲಿದೆ. ಅದೇ ರೀತಿ, ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ (07354) ಅರಸೀಕೆರೆಗೆ ಸಂಜೆ 07:17 ಅಥವಾ 07:20 ಕ್ಕೆ, ತುಮಕೂರು ರಾತ್ರಿ 08:48 ಅಥವಾ 08:50 ಕ್ಕೆ ಮತ್ತು ಯಶವಂತಪುರ ರಾತ್ರಿ 10:08/10:10 ಕ್ಕೆ ತಲುಪಲಿದೆ.

lokesh

Recent Posts

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

16 mins ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

1 hour ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

3 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

4 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

4 hours ago

ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…

5 hours ago