ಜಿಲ್ಲೆಗಳು

ಹುಬ್ಬಳ್ಳಿ-ಬೆಂಗಳೂರು ಪ್ರಯಾಣಿಕರಿಗೆ ಸಿಹಿ ಸುದ್ದಿ: ಇನ್ಮುಂದೆ ಅರಸೀಕೆರೆಯಲ್ಲೂ ಎಕ್ಸಪ್ರೆಸ್​ ರೈಲನ್ನು ಹತ್ತಬಹುದು

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಹುಬ್ಬಳ್ಳಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬೆಂಗಳೂರಿಗೆ ಸಂಪರ್ಕಿಸುವ (ರೈಲು ಸಂಖ್ಯೆ 07339/07340 ಮತ್ತು 07353/07354) ರೈಲು ಇನ್ಮುಂದೆ ಅರಸಿಕೇರೆ ನಿಲ್ದಾಣದಲ್ಲೂ ನಿಲ್ಲುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಪ್ರತಿದಿನ ಸಂಚರಿಸುವ ಎಸ್​ಎಸ್​ಎಸ್​ ಹುಬ್ಬಳ್ಳಿ -ಕೆಎಸ್​ಆರ್​ ಬೆಂಗಳೂರು -ಎಸ್​ಎಸ್​​ಎಸ್​ ಹುಬ್ಬಳ್ಳಿ ದೈನಂದಿನ ವಿಶೇಷ ಎಕ್ಸಪ್ರೆಸ್​ ರೈಲು (ರೈಲು ಸಂಖ್ಯೆ 07339/07340) ರೈಲನ್ನು ಇನ್ಮುಂದೆ ಎರಡು ಮಾರ್ಗದಲ್ಲೂ ಅರಸಿಕೇರೆ ನಿಲ್ದಾಣದಲ್ಲಿ ನಿಲ್ಲಿಸಲಾಗುತ್ತದೆ.

ರೈಲು ಸಂಖ್ಯೆ 07339 ರೈಲು ಇಂದು (ಮಾ.22) ಬೆಳಿಗ್ಗೆ 3:33ಕ್ಕೆ ಅರಸಿಕೇರೆ ತಲುಪಿದ್ದು, 3:36 ಬೆಳಗ್ಗೆ ಅಲ್ಲಿಂದ ಹೊರಟಿದೆ. ಅದೇ ರೀತಿ, ಹಿಂದಿರುಗುವ ಸಮಯದಲ್ಲಿ, ರೈಲು ಸಂಖ್ಯೆ 07340 ಕೆಎಸ್‌ಆರ್ ರಾತ್ರಿ 02:07 ಕ್ಕೆ ಅರಸೀಕೆರೆಗೆ ಆಗಮಿಸಲಿದ್ದು, ಅಲ್ಲಿಂದ 02:10 ಕ್ಕೆ ಹೊರಡಲಿದೆ.

ಮಾರ್ಚ್ 23, 2023 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 07353/07354 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೆಎಸ್‌ಆರ್ ಬೆಂಗಳೂರು ದೈನಂದಿನ ವಿಶೇಷ ಎಕ್ಸ್‌ಪ್ರೆಸ್ ಎರಡು ದಿಕ್ಕುಗಳಲ್ಲಿ ಯಶವಂತಪುರ, ತುಮಕೂರು ಮತ್ತು ಅರಸೀಕೆರೆ ನಿಲ್ದಾಣಗಳಲ್ಲಿ ಹೆಚ್ಚುವರಿ ನಿಲುಗಡೆಗಳನ್ನು ಹೊಂದಿರುತ್ತದೆ.

ಈ ರೈಲು (07353) ಯಶವಂತಪುರಕ್ಕೆ 07:39/07:41 ಕ್ಕೆ, ತುಮಕೂರು 08:28/08:30 ಕ್ಕೆ ಮತ್ತು ಅರಸೀಕೆರೆ 09:40 ಅಥವಾ 09:43 ಕ್ಕೆ ಆಗಮಿಸಲಿದೆ. ಅದೇ ರೀತಿ, ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ (07354) ಅರಸೀಕೆರೆಗೆ ಸಂಜೆ 07:17 ಅಥವಾ 07:20 ಕ್ಕೆ, ತುಮಕೂರು ರಾತ್ರಿ 08:48 ಅಥವಾ 08:50 ಕ್ಕೆ ಮತ್ತು ಯಶವಂತಪುರ ರಾತ್ರಿ 10:08/10:10 ಕ್ಕೆ ತಲುಪಲಿದೆ.

lokesh

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

3 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

3 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

3 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

3 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

3 hours ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

3 hours ago