ಜಿಲ್ಲೆಗಳು

ಹುಬ್ಬಳ್ಳಿ-ಬೆಂಗಳೂರು ಪ್ರಯಾಣಿಕರಿಗೆ ಸಿಹಿ ಸುದ್ದಿ: ಇನ್ಮುಂದೆ ಅರಸೀಕೆರೆಯಲ್ಲೂ ಎಕ್ಸಪ್ರೆಸ್​ ರೈಲನ್ನು ಹತ್ತಬಹುದು

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಹುಬ್ಬಳ್ಳಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬೆಂಗಳೂರಿಗೆ ಸಂಪರ್ಕಿಸುವ (ರೈಲು ಸಂಖ್ಯೆ 07339/07340 ಮತ್ತು 07353/07354) ರೈಲು ಇನ್ಮುಂದೆ ಅರಸಿಕೇರೆ ನಿಲ್ದಾಣದಲ್ಲೂ ನಿಲ್ಲುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಪ್ರತಿದಿನ ಸಂಚರಿಸುವ ಎಸ್​ಎಸ್​ಎಸ್​ ಹುಬ್ಬಳ್ಳಿ -ಕೆಎಸ್​ಆರ್​ ಬೆಂಗಳೂರು -ಎಸ್​ಎಸ್​​ಎಸ್​ ಹುಬ್ಬಳ್ಳಿ ದೈನಂದಿನ ವಿಶೇಷ ಎಕ್ಸಪ್ರೆಸ್​ ರೈಲು (ರೈಲು ಸಂಖ್ಯೆ 07339/07340) ರೈಲನ್ನು ಇನ್ಮುಂದೆ ಎರಡು ಮಾರ್ಗದಲ್ಲೂ ಅರಸಿಕೇರೆ ನಿಲ್ದಾಣದಲ್ಲಿ ನಿಲ್ಲಿಸಲಾಗುತ್ತದೆ.

ರೈಲು ಸಂಖ್ಯೆ 07339 ರೈಲು ಇಂದು (ಮಾ.22) ಬೆಳಿಗ್ಗೆ 3:33ಕ್ಕೆ ಅರಸಿಕೇರೆ ತಲುಪಿದ್ದು, 3:36 ಬೆಳಗ್ಗೆ ಅಲ್ಲಿಂದ ಹೊರಟಿದೆ. ಅದೇ ರೀತಿ, ಹಿಂದಿರುಗುವ ಸಮಯದಲ್ಲಿ, ರೈಲು ಸಂಖ್ಯೆ 07340 ಕೆಎಸ್‌ಆರ್ ರಾತ್ರಿ 02:07 ಕ್ಕೆ ಅರಸೀಕೆರೆಗೆ ಆಗಮಿಸಲಿದ್ದು, ಅಲ್ಲಿಂದ 02:10 ಕ್ಕೆ ಹೊರಡಲಿದೆ.

ಮಾರ್ಚ್ 23, 2023 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 07353/07354 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೆಎಸ್‌ಆರ್ ಬೆಂಗಳೂರು ದೈನಂದಿನ ವಿಶೇಷ ಎಕ್ಸ್‌ಪ್ರೆಸ್ ಎರಡು ದಿಕ್ಕುಗಳಲ್ಲಿ ಯಶವಂತಪುರ, ತುಮಕೂರು ಮತ್ತು ಅರಸೀಕೆರೆ ನಿಲ್ದಾಣಗಳಲ್ಲಿ ಹೆಚ್ಚುವರಿ ನಿಲುಗಡೆಗಳನ್ನು ಹೊಂದಿರುತ್ತದೆ.

ಈ ರೈಲು (07353) ಯಶವಂತಪುರಕ್ಕೆ 07:39/07:41 ಕ್ಕೆ, ತುಮಕೂರು 08:28/08:30 ಕ್ಕೆ ಮತ್ತು ಅರಸೀಕೆರೆ 09:40 ಅಥವಾ 09:43 ಕ್ಕೆ ಆಗಮಿಸಲಿದೆ. ಅದೇ ರೀತಿ, ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ (07354) ಅರಸೀಕೆರೆಗೆ ಸಂಜೆ 07:17 ಅಥವಾ 07:20 ಕ್ಕೆ, ತುಮಕೂರು ರಾತ್ರಿ 08:48 ಅಥವಾ 08:50 ಕ್ಕೆ ಮತ್ತು ಯಶವಂತಪುರ ರಾತ್ರಿ 10:08/10:10 ಕ್ಕೆ ತಲುಪಲಿದೆ.

lokesh

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

2 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

2 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

2 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

3 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

4 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

4 hours ago