ಜಿಲ್ಲೆಗಳು

ಹುಬ್ಬಳ್ಳಿ-ಬೆಂಗಳೂರು ಪ್ರಯಾಣಿಕರಿಗೆ ಸಿಹಿ ಸುದ್ದಿ: ಇನ್ಮುಂದೆ ಅರಸೀಕೆರೆಯಲ್ಲೂ ಎಕ್ಸಪ್ರೆಸ್​ ರೈಲನ್ನು ಹತ್ತಬಹುದು

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಹುಬ್ಬಳ್ಳಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬೆಂಗಳೂರಿಗೆ ಸಂಪರ್ಕಿಸುವ (ರೈಲು ಸಂಖ್ಯೆ 07339/07340 ಮತ್ತು 07353/07354) ರೈಲು ಇನ್ಮುಂದೆ ಅರಸಿಕೇರೆ ನಿಲ್ದಾಣದಲ್ಲೂ ನಿಲ್ಲುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಪ್ರತಿದಿನ ಸಂಚರಿಸುವ ಎಸ್​ಎಸ್​ಎಸ್​ ಹುಬ್ಬಳ್ಳಿ -ಕೆಎಸ್​ಆರ್​ ಬೆಂಗಳೂರು -ಎಸ್​ಎಸ್​​ಎಸ್​ ಹುಬ್ಬಳ್ಳಿ ದೈನಂದಿನ ವಿಶೇಷ ಎಕ್ಸಪ್ರೆಸ್​ ರೈಲು (ರೈಲು ಸಂಖ್ಯೆ 07339/07340) ರೈಲನ್ನು ಇನ್ಮುಂದೆ ಎರಡು ಮಾರ್ಗದಲ್ಲೂ ಅರಸಿಕೇರೆ ನಿಲ್ದಾಣದಲ್ಲಿ ನಿಲ್ಲಿಸಲಾಗುತ್ತದೆ.

ರೈಲು ಸಂಖ್ಯೆ 07339 ರೈಲು ಇಂದು (ಮಾ.22) ಬೆಳಿಗ್ಗೆ 3:33ಕ್ಕೆ ಅರಸಿಕೇರೆ ತಲುಪಿದ್ದು, 3:36 ಬೆಳಗ್ಗೆ ಅಲ್ಲಿಂದ ಹೊರಟಿದೆ. ಅದೇ ರೀತಿ, ಹಿಂದಿರುಗುವ ಸಮಯದಲ್ಲಿ, ರೈಲು ಸಂಖ್ಯೆ 07340 ಕೆಎಸ್‌ಆರ್ ರಾತ್ರಿ 02:07 ಕ್ಕೆ ಅರಸೀಕೆರೆಗೆ ಆಗಮಿಸಲಿದ್ದು, ಅಲ್ಲಿಂದ 02:10 ಕ್ಕೆ ಹೊರಡಲಿದೆ.

ಮಾರ್ಚ್ 23, 2023 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 07353/07354 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೆಎಸ್‌ಆರ್ ಬೆಂಗಳೂರು ದೈನಂದಿನ ವಿಶೇಷ ಎಕ್ಸ್‌ಪ್ರೆಸ್ ಎರಡು ದಿಕ್ಕುಗಳಲ್ಲಿ ಯಶವಂತಪುರ, ತುಮಕೂರು ಮತ್ತು ಅರಸೀಕೆರೆ ನಿಲ್ದಾಣಗಳಲ್ಲಿ ಹೆಚ್ಚುವರಿ ನಿಲುಗಡೆಗಳನ್ನು ಹೊಂದಿರುತ್ತದೆ.

ಈ ರೈಲು (07353) ಯಶವಂತಪುರಕ್ಕೆ 07:39/07:41 ಕ್ಕೆ, ತುಮಕೂರು 08:28/08:30 ಕ್ಕೆ ಮತ್ತು ಅರಸೀಕೆರೆ 09:40 ಅಥವಾ 09:43 ಕ್ಕೆ ಆಗಮಿಸಲಿದೆ. ಅದೇ ರೀತಿ, ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ (07354) ಅರಸೀಕೆರೆಗೆ ಸಂಜೆ 07:17 ಅಥವಾ 07:20 ಕ್ಕೆ, ತುಮಕೂರು ರಾತ್ರಿ 08:48 ಅಥವಾ 08:50 ಕ್ಕೆ ಮತ್ತು ಯಶವಂತಪುರ ರಾತ್ರಿ 10:08/10:10 ಕ್ಕೆ ತಲುಪಲಿದೆ.

lokesh

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

1 hour ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

2 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

3 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

3 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

8 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

8 hours ago