ಜಿಲ್ಲೆಗಳು

‘ಗೋಪಾಲಸ್ವಾಮಿ ನಮ್ಮ ಕುಟುಂಬ ಸದಸ್ಯನಂತಿತ್ತು’ : ಕಾವಾಡಿ ಮಂಜು

ಮೃತಪಟ್ಟ ಮೆಚ್ಚಿನ ಆನೆಯ ನೆನೆದು ಕಣ್ಣೀರಾದ ಕಾವಾಡಿ ಮಂಜು

 


ದಾ.ರಾ.ಮಹೇಶ್ 

ವೀರನಹೊಸಹಳ್ಳಿ: ‘ಗೋಪಾಲಸ್ವಾಮಿ ಒಂದು ಆನೆ ಮಾತ್ರವಲ್ಲ, ಆಟದ ಸಂಗಾತಿ, ನಮ್ಮ ಮನೆಯ ಸದಸ್ಯನಂತೆ ಕೂಡ ಇತ್ತು. ಅದನ್ನು ಕಳೆದುಕೊಂಡಿರುವುದರಿಂದ ನಮ್ಮ ಕುಟುಂಬ ಸದಸ್ಯರೊಬ್ಬರನ್ನೇ ಕಳೆದುಕೊಂಡಂತಹ ನೋವು ಉಂಟಾಗಿದೆ’.

ಈಚೆಗೆ ಕಾಡಾನೆ ಜತೆ ಕಾದಾಟದಲ್ಲಿ ಮೃತಪಟ್ಟ ಗೋಪಾಲಸ್ವಾಮಿ ಆನೆಯ ಕಾವಾಡಿ ಮಂಜು ಅವರು ತಮ್ಮ ಮತ್ತು ಗೋಪಾಲಸ್ವಾಮಿ ನಡುವೆ ಇದ್ದ ಆತ್ಮೀಯತೆಯನ್ನು ವರ್ಣಿಸಿದ್ದು ಹೀಗೆ.
ಅಗಲಿದ ಗಜರಾಜನ ನೆನೆದು ಪತ್ರಿಕೆಯೊಡನೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡ ಕಾವಾಡಿ ಮಂಜು, ಬೃಹತ್ ಕಾಯ್ದೆ ಆನೆಯಿರಲಿ, ಪುಟ್ಟ ಗಾತ್ರದ ಅಳಿಲೇ ಇರಲಿ, ಮನುಷ್ಯ ಕೊಂಚ ಅಕ್ಕರೆ ತೋರಿದರೂ ಸಾಕು, ಬದಲಿಗೆ ಆತನಿಗೆ ನಿಷ್ಕಲ್ಮಶ ಪ್ರೀತಿಯ ಖಜಾನೆಯನ್ನೇ ಮರಳಿಸುತ್ತವೆ. ಪ್ರಾಣಿ ಮತ್ತು ಮನುಷ್ಯನ ಗಾಢ ಸ್ನೇಹ ಎಂತಹ ಕಟುಕರ ಮನಸ್ಸನ್ನೂ ಭಾವುಕವಾಗಿಸಬಲ್ಲದು. ಅಂತಹ ಅಪರೂಪದ ನಡುವಿನ ಸ್ನೇಹ ನಮ್ಮದು ಎಂದು ತಮ್ಮ ಅಚ್ಚುಮೆಚ್ಚಿನ ಆನೆಯ ಬಗ್ಗೆ ಹೇಳುತ್ತಾ ಭಾವುಕರಾದರು.

ಹಲವು ವರ್ಷಗಳ ಕಾಲ ಅಕ್ಕರೆಯಿಂದ ನೋಡಿಕೊಂಡ ಗಜರಾಜನಿಗೆ ವಿದಾಯ ಹೇಳುವ ಸಮಯ ಬಂದಾಗ, ನನ್ನ ಕಣ್ಣಾಲಿಗಳು ತುಂಬಿ ಬಂದವು ಎಂದು ಸುಮಾರು ಹತ್ತು ವರ್ಷ ಕಾಲ ಆನೆಗಳನ್ನು ನೋಡಿಕೊಳ್ಳುತ್ತಿದ್ದ ಮಂಜು ಹೇಳಿದರು.

ಅದು ಎಷ್ಟು ವಿಧೇಯ ಆನೆೆಯೇ ಆಗಿತ್ತು ಎಂದರೆ, ಅದಕ್ಕೆ ಯಾವತ್ತೂ ಏಟು ಹೊಡೆದಿಲ್ಲ. ಗದರಿದ ಪ್ರಸಂಗವು ಕೂಡ ಇಲ್ಲ. ರಾಜ್ಯದಲ್ಲೇ ಅಲ್ಲದೆ ಅಂತರ ರಾಜ್ಯದಲ್ಲೂ ಆನೆ ಮತ್ತು ಹುಲಿ ಹಿಡಿಯುವ ಕಾರ್ಯಾಚರಣೆಯಲ್ಲಿ ನನ್ನ ಆನೆ ಎಂದಿಗೂ ಮುಂದೆ ಇತ್ತು ಎಂದು ತಿಳಿಸಿದರು.

ನಾವು ಹೇಳುವ ಭಾಷೆಯನ್ನು ಬರೀ ಸನ್ನೆಯ ಮೂಲಕ ಅರ್ಥ ಮಾಡಿಕೊಂಡು ಇತರೆ ಆನೆಗಳನ್ನು ಜೊತೆಯಲ್ಲಿ ಕರೆದುಕೊಂಡು ಕ್ಯಾಪ್ಟನ್ ಶಿಪ್ ವಹಿಸುತ್ತಿತ್ತು. ಅಲ್ಲದೆ ೨೦೨೧ ಸಾಲಿನಲ್ಲಿ ಶ್ರೀರಂಗಪಟ್ಟಣದಲ್ಲಿ ನಡೆದ ದಸರಾ ಮಹೋತ್ಸವದಲ್ಲಿ ಅಲ್ಲಿನ ದೇವರ ವಿಗ್ರಹವನ್ನು ಹೊತ್ತು ಸಾಗಿತ್ತು. ಅದನ್ನು ಕಳೆದುಕೊಂಡ ನೋವು ಸದಾ ಇರುತ್ತದೆ ಎಂದು ದುಃಖ ತೋಡಿಕೊಂಡರು.

ಬೆಳಿಗ್ಗೆ ಮುದ್ದಾಡಿಸಿದ ಆನೆ ರಾತ್ರಿ ಸಾವಿಗೀಡಾಗಿದ್ದನ್ನು ನಂಬಲಾಗುತ್ತಿಲ್ಲ. ಅದು ನಮ್ಮ ಜತೆ ಆಡಿದ್ದ ಕಣ್ಣಾಮುಚ್ಚಾಲೆ ಆಟ, ವಾಲಿಬಾಲ್, ಮಕ್ಕಳೊಂದಿಗೆ ನಡೆಸಿದ ತುಂಟಾಟವನ್ನು ಎಂದಿಗೂ ಮರೆಯುವುದಿಲ್ಲ.

andolanait

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

5 hours ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

7 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

8 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

8 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

8 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

9 hours ago