ಜಿಲ್ಲೆಗಳು

‘ಗೋಪಾಲಸ್ವಾಮಿ ನಮ್ಮ ಕುಟುಂಬ ಸದಸ್ಯನಂತಿತ್ತು’ : ಕಾವಾಡಿ ಮಂಜು

ಮೃತಪಟ್ಟ ಮೆಚ್ಚಿನ ಆನೆಯ ನೆನೆದು ಕಣ್ಣೀರಾದ ಕಾವಾಡಿ ಮಂಜು

 


ದಾ.ರಾ.ಮಹೇಶ್ 

ವೀರನಹೊಸಹಳ್ಳಿ: ‘ಗೋಪಾಲಸ್ವಾಮಿ ಒಂದು ಆನೆ ಮಾತ್ರವಲ್ಲ, ಆಟದ ಸಂಗಾತಿ, ನಮ್ಮ ಮನೆಯ ಸದಸ್ಯನಂತೆ ಕೂಡ ಇತ್ತು. ಅದನ್ನು ಕಳೆದುಕೊಂಡಿರುವುದರಿಂದ ನಮ್ಮ ಕುಟುಂಬ ಸದಸ್ಯರೊಬ್ಬರನ್ನೇ ಕಳೆದುಕೊಂಡಂತಹ ನೋವು ಉಂಟಾಗಿದೆ’.

ಈಚೆಗೆ ಕಾಡಾನೆ ಜತೆ ಕಾದಾಟದಲ್ಲಿ ಮೃತಪಟ್ಟ ಗೋಪಾಲಸ್ವಾಮಿ ಆನೆಯ ಕಾವಾಡಿ ಮಂಜು ಅವರು ತಮ್ಮ ಮತ್ತು ಗೋಪಾಲಸ್ವಾಮಿ ನಡುವೆ ಇದ್ದ ಆತ್ಮೀಯತೆಯನ್ನು ವರ್ಣಿಸಿದ್ದು ಹೀಗೆ.
ಅಗಲಿದ ಗಜರಾಜನ ನೆನೆದು ಪತ್ರಿಕೆಯೊಡನೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡ ಕಾವಾಡಿ ಮಂಜು, ಬೃಹತ್ ಕಾಯ್ದೆ ಆನೆಯಿರಲಿ, ಪುಟ್ಟ ಗಾತ್ರದ ಅಳಿಲೇ ಇರಲಿ, ಮನುಷ್ಯ ಕೊಂಚ ಅಕ್ಕರೆ ತೋರಿದರೂ ಸಾಕು, ಬದಲಿಗೆ ಆತನಿಗೆ ನಿಷ್ಕಲ್ಮಶ ಪ್ರೀತಿಯ ಖಜಾನೆಯನ್ನೇ ಮರಳಿಸುತ್ತವೆ. ಪ್ರಾಣಿ ಮತ್ತು ಮನುಷ್ಯನ ಗಾಢ ಸ್ನೇಹ ಎಂತಹ ಕಟುಕರ ಮನಸ್ಸನ್ನೂ ಭಾವುಕವಾಗಿಸಬಲ್ಲದು. ಅಂತಹ ಅಪರೂಪದ ನಡುವಿನ ಸ್ನೇಹ ನಮ್ಮದು ಎಂದು ತಮ್ಮ ಅಚ್ಚುಮೆಚ್ಚಿನ ಆನೆಯ ಬಗ್ಗೆ ಹೇಳುತ್ತಾ ಭಾವುಕರಾದರು.

ಹಲವು ವರ್ಷಗಳ ಕಾಲ ಅಕ್ಕರೆಯಿಂದ ನೋಡಿಕೊಂಡ ಗಜರಾಜನಿಗೆ ವಿದಾಯ ಹೇಳುವ ಸಮಯ ಬಂದಾಗ, ನನ್ನ ಕಣ್ಣಾಲಿಗಳು ತುಂಬಿ ಬಂದವು ಎಂದು ಸುಮಾರು ಹತ್ತು ವರ್ಷ ಕಾಲ ಆನೆಗಳನ್ನು ನೋಡಿಕೊಳ್ಳುತ್ತಿದ್ದ ಮಂಜು ಹೇಳಿದರು.

ಅದು ಎಷ್ಟು ವಿಧೇಯ ಆನೆೆಯೇ ಆಗಿತ್ತು ಎಂದರೆ, ಅದಕ್ಕೆ ಯಾವತ್ತೂ ಏಟು ಹೊಡೆದಿಲ್ಲ. ಗದರಿದ ಪ್ರಸಂಗವು ಕೂಡ ಇಲ್ಲ. ರಾಜ್ಯದಲ್ಲೇ ಅಲ್ಲದೆ ಅಂತರ ರಾಜ್ಯದಲ್ಲೂ ಆನೆ ಮತ್ತು ಹುಲಿ ಹಿಡಿಯುವ ಕಾರ್ಯಾಚರಣೆಯಲ್ಲಿ ನನ್ನ ಆನೆ ಎಂದಿಗೂ ಮುಂದೆ ಇತ್ತು ಎಂದು ತಿಳಿಸಿದರು.

ನಾವು ಹೇಳುವ ಭಾಷೆಯನ್ನು ಬರೀ ಸನ್ನೆಯ ಮೂಲಕ ಅರ್ಥ ಮಾಡಿಕೊಂಡು ಇತರೆ ಆನೆಗಳನ್ನು ಜೊತೆಯಲ್ಲಿ ಕರೆದುಕೊಂಡು ಕ್ಯಾಪ್ಟನ್ ಶಿಪ್ ವಹಿಸುತ್ತಿತ್ತು. ಅಲ್ಲದೆ ೨೦೨೧ ಸಾಲಿನಲ್ಲಿ ಶ್ರೀರಂಗಪಟ್ಟಣದಲ್ಲಿ ನಡೆದ ದಸರಾ ಮಹೋತ್ಸವದಲ್ಲಿ ಅಲ್ಲಿನ ದೇವರ ವಿಗ್ರಹವನ್ನು ಹೊತ್ತು ಸಾಗಿತ್ತು. ಅದನ್ನು ಕಳೆದುಕೊಂಡ ನೋವು ಸದಾ ಇರುತ್ತದೆ ಎಂದು ದುಃಖ ತೋಡಿಕೊಂಡರು.

ಬೆಳಿಗ್ಗೆ ಮುದ್ದಾಡಿಸಿದ ಆನೆ ರಾತ್ರಿ ಸಾವಿಗೀಡಾಗಿದ್ದನ್ನು ನಂಬಲಾಗುತ್ತಿಲ್ಲ. ಅದು ನಮ್ಮ ಜತೆ ಆಡಿದ್ದ ಕಣ್ಣಾಮುಚ್ಚಾಲೆ ಆಟ, ವಾಲಿಬಾಲ್, ಮಕ್ಕಳೊಂದಿಗೆ ನಡೆಸಿದ ತುಂಟಾಟವನ್ನು ಎಂದಿಗೂ ಮರೆಯುವುದಿಲ್ಲ.

andolanait

Recent Posts

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

6 mins ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

10 mins ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

15 mins ago

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

3 hours ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

3 hours ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

3 hours ago