ಜಿಲ್ಲೆಗಳು

‘ಸರ್ಕಾರದ ಸೌಲಭ್ಯಗಳು ಮನೆಯ ಬಾಗಿಲಿಗೆ’

ಕೇಂದ್ರ ಸರ್ಕಾರದ ಯೋಜನೆ ಅನುಷ್ಠಾನಕ್ಕೆ ಎನ್‌ಎಸ್‌ಎಸ್ ಬಳಕೆ: ತಹಸಿಲ್ದಾರ್ ರೂಪಾ

ಕೆ.ಆರ್.ಪೇಟೆ: ಸರ್ಕಾರಗಳ ಕಾರ್ಯ ನಿರ್ವಹಣೆಯ ಶೈಲಿಯು ಬದಲಾಗಿದ್ದು, ಜನರ ಮನೆಯ ಬಾಗಿಲಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ವ್ಯವಸ್ಥೆ ರೂಪಿಸಲಾಗಿದೆ. ಇಂತಹ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಸೇವಾ ಯೋಜನಾ ಶಿಬಿರಗಳನ್ನು ಬಳಸಿಕೊಳ್ಳುತ್ತಿದೆ ಎಂದು ತಹಸಿಲ್ದಾರ್ ಎಂ.ವಿ.ರೂಪಾ ಹೇಳಿದರು.

ತಾಲ್ಲೂಕಿನ ಸಂತೆಬಾಚಹಳ್ಳಿ ಹೋಬಳಿಯ ಹಳೆಅತ್ತಿಗುಪ್ಪೆ ಗ್ರಾಮದಲ್ಲಿ ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಆೋಂಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮುದಾಯವು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗದಿದ್ದರೆ ಅಭಿವೃದ್ಧಿಯನ್ನು ಹೇಗೆ ತಾನೇ ಸಾಧಿಸಲು ಸಾಧ್ಯ ಎಂಬುದನ್ನು ಅರಿತ ಕೇಂದ್ರ ಸರ್ಕಾರವು, ಭಾರತವು ತನ್ನ ಸ್ವಾತಂತ್ರ್ತ್ಯ ಅಮೃತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ನೆನಪಿಗಾಗಿ ಅಮೃತ ಸಮುದಾಯ ಯೋಜನೆಯನ್ನು ರೂಪಿಸಿದೆ. ಸರ್ಕಾರಿ ಇಲಾಖೆಗಳು ಎಷ್ಟೇ ಪ್ರಾವಾಣಿಕವಾಗಿ ಕಾರ್ಯಕ್ರಮಗಳ ಅನುಷ್ಠಾನವನ್ನು ಮಾಡಿದರೂ ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಸೌಲಭ್ಯಗಳು ತಲುಪಿರುವುದಿಲ್ಲ. ಅಂತಹ ಕುಟುಂಬಗಳನ್ನು ಸಂಪರ್ಕಿಸಿ ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ತಲುಪಿಸಲು ಶಿಬಿರಾರ್ಥಿಗಳು ಗ್ರಾಮದ ಮನೆ ಮನೆಗಳ ಬಾಗಿಲಿಗೆ ಬರುತ್ತಿದ್ದು, ಇದರ ಪ್ರಯೋಜನವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕು ಎಂದು ರೂಪಾ ಮನವಿ ಮಾಡಿದರು.

ಕಂದಾಯ ಇಲಾಖೆಯು ಪ್ರತಿಯೊಂದು ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನದ ಜವಾಬ್ದಾರಿಯನ್ನು ಹೊತ್ತಿದೆ. ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲು ಆಧಾರ್ ಹೇಗೆ ಬೇಕಾಗುತ್ತದೋ ಹಾಗೆೆಯೇ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಯಾಗಲು ಆರ್‌ಟಿಸಿ ಕಡ್ಡಾಯವಾಗಿದೆ. ತಾಲ್ಲೂಕಿನಲ್ಲಿ ಬಹುತೇಕ ಪೌತಿ ಖಾತೆಗಳದ್ದೇ ಸಮಸ್ಯೆಯಾಗಿದೆ. ಕಂದಾಯ ಇಲಾಖೆಯ ಸಮಸ್ಯೆಗಳನ್ನು ಪರಿಹರಿಸಲು ಬದ್ಧವಾಗಿದೆ. ಈ ನಿಟ್ಟಿನಲ್ಲಿ ಈ ಶಿಬಿರವು ಮುಗಿಯುವುದರೊಳಗೆ ಇಲಾಖೆಯ ಉಪ ತಹಸಿಲ್ದಾರ್, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಇಲ್ಲಿಯೇ ಮೊಕ್ಕಾಂ ಹೂಡಲಿದ್ದಾರೆ. ಎಲ್ಲರೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸತೀಶ್ ಮಹಾತ್ಮ ಗಾಂಧಿ ಮತ್ತು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಪ್ರಾಂಶುಪಾಲ ಡಾ. ಟಿ.ಎಂ.ದೇವರಾಜ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಶಿವಕುಮಾರ್, ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಬಿ.ಎ.ಮಂಜುನಾಥ್, ಅಘಲಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಕಾತಿ, ಸಂತೆಬಾಚಹಳ್ಳಿ ಹೋಬಳಿ ಉಪ ತಹಸಿಲ್ದಾರ್ ಗೌರಮ್ಮ, ರಾಜಸ್ವ ನಿರೀಕ್ಷಕ ರಮೇಶ್, ಕಿಕ್ಕೇರಿ ಹೋಬಳಿ ಉಪ ತಹಸಿಲ್ದಾರ್ ಲಕ್ಷ್ಮೀಕಾಂತ್, ಗ್ರಾಮದ ಮುಖಂಡರು ಭಾಗವಹಿಸಿದ್ದರು.

 

 

 

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago