ಕೆ.ಆರ್.ಪೇಟೆ ತಾಲ್ಲೂಕಿನ ಸಂತೆಬಾಚಹಳ್ಳಿ ಹಳೆಅತ್ತಿಗುಪ್ಪೆ ಗ್ರಾಮದಲ್ಲಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರವನ್ನು ಗಣ್ಯರು ಉದ್ಘಾಟಿಸಿದರು.
ಕೇಂದ್ರ ಸರ್ಕಾರದ ಯೋಜನೆ ಅನುಷ್ಠಾನಕ್ಕೆ ಎನ್ಎಸ್ಎಸ್ ಬಳಕೆ: ತಹಸಿಲ್ದಾರ್ ರೂಪಾ
ಕೆ.ಆರ್.ಪೇಟೆ: ಸರ್ಕಾರಗಳ ಕಾರ್ಯ ನಿರ್ವಹಣೆಯ ಶೈಲಿಯು ಬದಲಾಗಿದ್ದು, ಜನರ ಮನೆಯ ಬಾಗಿಲಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ವ್ಯವಸ್ಥೆ ರೂಪಿಸಲಾಗಿದೆ. ಇಂತಹ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಸೇವಾ ಯೋಜನಾ ಶಿಬಿರಗಳನ್ನು ಬಳಸಿಕೊಳ್ಳುತ್ತಿದೆ ಎಂದು ತಹಸಿಲ್ದಾರ್ ಎಂ.ವಿ.ರೂಪಾ ಹೇಳಿದರು.
ತಾಲ್ಲೂಕಿನ ಸಂತೆಬಾಚಹಳ್ಳಿ ಹೋಬಳಿಯ ಹಳೆಅತ್ತಿಗುಪ್ಪೆ ಗ್ರಾಮದಲ್ಲಿ ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಆೋಂಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮುದಾಯವು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗದಿದ್ದರೆ ಅಭಿವೃದ್ಧಿಯನ್ನು ಹೇಗೆ ತಾನೇ ಸಾಧಿಸಲು ಸಾಧ್ಯ ಎಂಬುದನ್ನು ಅರಿತ ಕೇಂದ್ರ ಸರ್ಕಾರವು, ಭಾರತವು ತನ್ನ ಸ್ವಾತಂತ್ರ್ತ್ಯ ಅಮೃತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ನೆನಪಿಗಾಗಿ ಅಮೃತ ಸಮುದಾಯ ಯೋಜನೆಯನ್ನು ರೂಪಿಸಿದೆ. ಸರ್ಕಾರಿ ಇಲಾಖೆಗಳು ಎಷ್ಟೇ ಪ್ರಾವಾಣಿಕವಾಗಿ ಕಾರ್ಯಕ್ರಮಗಳ ಅನುಷ್ಠಾನವನ್ನು ಮಾಡಿದರೂ ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಸೌಲಭ್ಯಗಳು ತಲುಪಿರುವುದಿಲ್ಲ. ಅಂತಹ ಕುಟುಂಬಗಳನ್ನು ಸಂಪರ್ಕಿಸಿ ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ತಲುಪಿಸಲು ಶಿಬಿರಾರ್ಥಿಗಳು ಗ್ರಾಮದ ಮನೆ ಮನೆಗಳ ಬಾಗಿಲಿಗೆ ಬರುತ್ತಿದ್ದು, ಇದರ ಪ್ರಯೋಜನವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕು ಎಂದು ರೂಪಾ ಮನವಿ ಮಾಡಿದರು.
ಕಂದಾಯ ಇಲಾಖೆಯು ಪ್ರತಿಯೊಂದು ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನದ ಜವಾಬ್ದಾರಿಯನ್ನು ಹೊತ್ತಿದೆ. ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲು ಆಧಾರ್ ಹೇಗೆ ಬೇಕಾಗುತ್ತದೋ ಹಾಗೆೆಯೇ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಯಾಗಲು ಆರ್ಟಿಸಿ ಕಡ್ಡಾಯವಾಗಿದೆ. ತಾಲ್ಲೂಕಿನಲ್ಲಿ ಬಹುತೇಕ ಪೌತಿ ಖಾತೆಗಳದ್ದೇ ಸಮಸ್ಯೆಯಾಗಿದೆ. ಕಂದಾಯ ಇಲಾಖೆಯ ಸಮಸ್ಯೆಗಳನ್ನು ಪರಿಹರಿಸಲು ಬದ್ಧವಾಗಿದೆ. ಈ ನಿಟ್ಟಿನಲ್ಲಿ ಈ ಶಿಬಿರವು ಮುಗಿಯುವುದರೊಳಗೆ ಇಲಾಖೆಯ ಉಪ ತಹಸಿಲ್ದಾರ್, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಇಲ್ಲಿಯೇ ಮೊಕ್ಕಾಂ ಹೂಡಲಿದ್ದಾರೆ. ಎಲ್ಲರೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸತೀಶ್ ಮಹಾತ್ಮ ಗಾಂಧಿ ಮತ್ತು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಪ್ರಾಂಶುಪಾಲ ಡಾ. ಟಿ.ಎಂ.ದೇವರಾಜ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಶಿವಕುಮಾರ್, ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಬಿ.ಎ.ಮಂಜುನಾಥ್, ಅಘಲಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಕಾತಿ, ಸಂತೆಬಾಚಹಳ್ಳಿ ಹೋಬಳಿ ಉಪ ತಹಸಿಲ್ದಾರ್ ಗೌರಮ್ಮ, ರಾಜಸ್ವ ನಿರೀಕ್ಷಕ ರಮೇಶ್, ಕಿಕ್ಕೇರಿ ಹೋಬಳಿ ಉಪ ತಹಸಿಲ್ದಾರ್ ಲಕ್ಷ್ಮೀಕಾಂತ್, ಗ್ರಾಮದ ಮುಖಂಡರು ಭಾಗವಹಿಸಿದ್ದರು.
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್ ಬ್ಯಾಂಡ್ನ ಸದ್ದಿನೊಂದಿಗೆ…
ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…
ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…
ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…