ಹನೂರು: ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಯನ್ನು ಹೆಚ್ಚಳ ಮಾಡಬೇಕೆಂದು ಪ್ರಸನ್ನಾನಂದ ಪುರಿ ಸ್ವಾಮೀಜಿಗಳು ನಿರಂತರ 260 ಕ್ಕೂ ಹೆಚ್ಚು ದಿನಗಳ ಅನಿರ್ದಿಷ್ಟ ಧರಣಿ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸದೆ ಇರುವುದು ಖಂಡನೀಯ ಎಂದು ಸಮುದಾಯದ ಮುಖಂಡ ಪಾಳ್ಯ ಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ಏರ್ಪಡಿಸಲಾಗಿದ್ದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಬಳಿಕ ಸುದ್ದಿಗಾರರೊಡನೆ ಮಾತನಾಡಿದರು.
ವಾಲ್ಮೀಕಿ ಸಮುದಾಯದ ಜನತೆಯ ಅನುಕೂಲಕ್ಕೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಜಾರಿ ಮಾಡುವಂತೆ ಫ್ರೀಡಂ ಪಾರ್ಕ್ ನಲ್ಲಿ ಶ್ರೀಗಳು ಸಮುದಾಯದ ಪರವಾಗಿ ಹೋರಾಟ ಮಾಡುತ್ತಿದ್ದಾರೆ. ಆದರೆ ಸರ್ಕಾರ ಇದಕ್ಕೆ ಸ್ಪಂದಿಸುತ್ತಿಲ್ಲ. ಹೀಗಾಗಿ ನಾವು ಸರ್ಕಾರದಿಂದ ಆಚರಿಸಲಾಗುವ ವಾಲ್ಮೀಕಿ ಜಯಂತಿ ಆಚರಣೆಯನ್ನು ಪಕ್ಷಾತೀತವಾಗಿ ಬಹಿಷ್ಕರಿಸುತ್ತೇವೆ. ಇದೇ ತಿಂಗಳ 9ರಂದು ಸ್ವಾಮೀಜಿಗಳು ಕರೆಕೊಟ್ಟಿರುವ ಹಿನ್ನಲೆಯಲ್ಲಿ ಮಹಿಳೆಯರು, ಮಕ್ಕಳ ಹಾದಿಯಾಗಿ ಸಮುದಾಯದ ಎಲ್ಲ ಜನತೆ ಬೆಂಗಳೂರು ಚಲೋ ಕಾರ್ಯಕ್ರಮವನ್ನು ಕೈಗೊಂಡಿದ್ದೇವೆ. ಸರ್ಕಾರದಿಂದ ಆಚರಿಸಲಾಗುವ ಕಾರ್ಯಕ್ರಮವನ್ನು ಬಹಿಷ್ಕರಿಸುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಸಮುದಾಯದ ಮುಖಂಡರುಗಳಾದ ಜಗದೀಶ್ ನಾಯಕ, ಚಂಗವಾಡಿ ರಾಚಪ್ಪ, ಅನಿಲ್, ಶಿವರಾಮು, ವೆಂಕಟಾಚಲ, ಮಂಜು, ಉದ್ದನೂರು ಸಿದ್ದರಾಜು ಸೇರಿದಂತೆ ಇನ್ನಿತರೆ ಮುಖಂಡರುಗಳು ಉಪಸ್ಥಿತರಿದ್ದರು.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…