ಜಿಲ್ಲೆಗಳು

ಸರ್ಕಾರಿ ಸವಲತ್ತು ತಲುಪಿಸಲು ವಿಪ್ರ ನಿಯೋಗ ರಚನೆಗಾಗಿ ಮನವಿ

ಮೈಸೂರು : ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಹೊಯ್ಸಳ ಕರ್ನಾಟಕ‌ ಸಮಾರಂಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಅಶೋಕ ಹಾರನಹಳ್ಳಿ ರವರಿಗೆ ಅಶೋಕಾಭಿನಂದನಾ‌ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸರ್ಕಾರದ ಸವಲತ್ತುಗಳು ಬ್ರಾಹ್ಮಣ  ಸಮುದಾಯಕ್ಕೆ ತಲುಪುವಂತೆ ಮಾಡಲು ಮೈಸೂರು ಬ್ರಾಹ್ಮಣ ಯುವ ವೇದಿಕೆಯ ಪದಾಧಿಕಾರಿಗಳು  ಜನಪ್ರತಿನಿಧಿಗಳು ವಿಪ್ರ ಮುಖಂಡರು ಮತ್ತು ಕಾನೂನು ತಜ್ಞರ ವಿಪ್ರ ನಿಯೋಗ ರಚಿಸಬೇಕೆಂದು ಮನವಿ‌ ಸಲ್ಲಿಸಿದರು.
ಬ್ರಾಹ್ಮಣ‌ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ  ಅವರು ಮಾತನಾಡಿ ಕೇಂದ್ರ ಸರ್ಕಾರದ ಯೋಜನೆ ಮೇಲ್ವರ್ಗದ ಬಡವರಿಗೆ 10% ಮೀಸಲಾತಿ ಇನ್ನೂ ಕರ್ನಾಟಕದಲ್ಲಿ ಜಾರಿಗೆ ಬಂದಿಲ್ಲ, ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರವೇ ಸಿಗುತ್ತಿಲ್ಲ, ಆರ್ಥಿಕವಾಗಿ ಹಿಂದುಳಿದವರು ಎಂದು‌ ಪ್ರಮಾಣಪತ್ರ ನೀಡಲಾಗುತ್ತಿದ್ದರೂ ಕೂಡ ಅದು ಕರ್ನಾಟಕ ಬ್ರಾಹ್ಮಣ ಮಂಡಳಿ ಯೋಜನೆಗೆ ಮಾತ್ರ ಸೀಮಿತವಾಗಿದೆ ಸಮುದಾಯದ ಬಡವರಿಗೆ ಬ್ರಾಹ್ಮಣ ಮಂಡಳಿ ಯೋಜನೆಯೂ ಸಹ ತಲುಪುತ್ತಿಲ್ಲ ಕಾರಣ ಕೆಲವು ಅವೈಜ್ಞಾನಿಕ ಕಾನೂನಾತ್ಮಕ ತೊಡಕಿದೆ ಜಾತಿ ಪ್ರಮಾಣ ಪತ್ರ ಪಡೆಯಲು ಶಾಲಾ ವ್ಯಾಸಾಂಗದ ವರ್ಗಾವಣೆ ಪತ್ರ ಕಡ್ಡಾಯವಾಗಿದೆ, 50ವರ್ಷ ಮೇಲ್ಪಟ್ಟವರಿಗೆ ಯಾವುದೇ ವೈದ್ಯಕೀಯ ಸಂಭಂಧ ಯೋಜನೆಗಳಿಲ್ಲ, EWS certificate ವಾಯಿದೆ ಕೇವಲ ಒಂದು ವರ್ಷ ಮಾತ್ರವಿದೆ ಅದನ್ನ ಪಡೆಯಲು ವಾಸವಿರುವ ಸ್ವಂತ ಮನೆ ಸಾವಿರ ಚದರ ದೊಳಗಿರಬೇಕು ಎನ್ನುವ ಅವೈಜ್ಞಾನಿಕತೆ ಎಷ್ಟರ ಮಟ್ಟಿಗೆ ಸರಿ  ಎಂದು ಪ್ರಶ್ನಿಸಿದರು. ಇದರಿಂದ  ಮಧ್ಯಮ ವರ್ಗದ ಸಮುದಾಯದವರು ವಂಚಿತರಾಗುತ್ತಾರೆ, ಬ್ರಾಹ್ಮಣ ಸಮುದಾಯಕ್ಕೆ ಜೀವಿತಾವಧಿ ಜಾತಿಪ್ರಮಾಣ ಪತ್ರ ನೀಡಲು ಸರ್ಕಾರ ಮುಂದಾಗಬೇಕಿದೆ ಇದರಿಂದ ಶಿಕ್ಷಣ ಆರೋಗ್ಯ ಉದ್ಯೋಗ ವಿಚಾರವಾಗಿ ಬ್ರಾಹ್ಮಣರಿಗೆ ಉಪಯುಕ್ತವಾಗುತ್ತದೆ ಹಾಗಾಗಿ ವಿಪ್ರ ಸಮುದಾಯದ ಜನಪ್ರತಿನಿಧಿಗಳು ಕಾನೂನು ತಜ್ಞರು ಸಮುದಾಯದ ಮುಖಂಡರು ಒಳಗೊಂಡ ವಿಪ್ರನಿಯೋಗ ರಚಿಸಿ ಸರ್ಕಾರದ ಗಮನ ಸೆಳೆದು ಸಮುದಾಯಕ್ಕೆ ಸವಲತ್ತು ತಲುಪಿಸಲು ಶ್ರಮಿಸಬೇಕಿದೆ ಎಂದು ಮನವಿ ಸಲ್ಲಿಸಿದರು.

ಸಂಸದರಾದ ಪ್ರತಾಪ್ ಸಿಂಹ, ಮೂಡ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್, ಹೊಯ್ಸಳ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ಕೆ.ಆರ್ ಸತ್ಯನಾರಾಯಣ್, ಬ್ರಾಹ್ಮಣ ಸಂಘದ ಅಧ್ಯಕ್ಷ ಡಿಟಿ. ಪ್ರಕಾಶ್, ನಗರಪಾಲಿಕೆ ಸದಸ್ಯ ಮಾವಿ. ರಾಂಪ್ರಸಾದ್, ಮೈಸೂರು ಬ್ರಾಹ್ಮಣ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಜಯಸಿಂಹ ಶ್ರೀಧರ್, ರಂಗನಾಥ್, ವಿಜಯ್ ಕುಮಾರ್, ಜಗದೀಶ್, ಪ್ರಶಾಂತ್, ಸುಚೀಂದ್ರ ಚಕ್ರಪಾಣಿ ಮುಂತಾದವರು ಇದ್ದರು .

andolanait

Recent Posts

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…

30 mins ago

ಓದುಗರ ಪತ್ರ: ಅದಲು-ಬದಲು…!

ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…

32 mins ago

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

1 hour ago

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

1 hour ago

ಓದುಗರ ಪತ್ರ: ಅನಗತ್ಯ ಸಿಸೇರಿಯನ್: ಆಸ್ಪತ್ರೆಗಳ ವಿರುದ್ಧ ಕ್ರಮ ಸ್ವಾಗತಾರ್ಹ

ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…

1 hour ago

ಪಂಜು ಗಂಗೊಳ್ಳಿ ವಾರದ ಅಂಕಣ: ವಿಕಲಾಂಗರ ಬದುಕಿಗೆ ಚಲನೆ ನೀಡುವ ಸಂದೀಪ್ ತಲ್ವಾರ್

ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…

2 hours ago