ಜಿಲ್ಲೆಗಳು

ಸರ್ಕಾರಿ ಸವಲತ್ತು ತಲುಪಿಸಲು ವಿಪ್ರ ನಿಯೋಗ ರಚನೆಗಾಗಿ ಮನವಿ

ಮೈಸೂರು : ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಹೊಯ್ಸಳ ಕರ್ನಾಟಕ‌ ಸಮಾರಂಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಅಶೋಕ ಹಾರನಹಳ್ಳಿ ರವರಿಗೆ ಅಶೋಕಾಭಿನಂದನಾ‌ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸರ್ಕಾರದ ಸವಲತ್ತುಗಳು ಬ್ರಾಹ್ಮಣ  ಸಮುದಾಯಕ್ಕೆ ತಲುಪುವಂತೆ ಮಾಡಲು ಮೈಸೂರು ಬ್ರಾಹ್ಮಣ ಯುವ ವೇದಿಕೆಯ ಪದಾಧಿಕಾರಿಗಳು  ಜನಪ್ರತಿನಿಧಿಗಳು ವಿಪ್ರ ಮುಖಂಡರು ಮತ್ತು ಕಾನೂನು ತಜ್ಞರ ವಿಪ್ರ ನಿಯೋಗ ರಚಿಸಬೇಕೆಂದು ಮನವಿ‌ ಸಲ್ಲಿಸಿದರು.
ಬ್ರಾಹ್ಮಣ‌ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ  ಅವರು ಮಾತನಾಡಿ ಕೇಂದ್ರ ಸರ್ಕಾರದ ಯೋಜನೆ ಮೇಲ್ವರ್ಗದ ಬಡವರಿಗೆ 10% ಮೀಸಲಾತಿ ಇನ್ನೂ ಕರ್ನಾಟಕದಲ್ಲಿ ಜಾರಿಗೆ ಬಂದಿಲ್ಲ, ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರವೇ ಸಿಗುತ್ತಿಲ್ಲ, ಆರ್ಥಿಕವಾಗಿ ಹಿಂದುಳಿದವರು ಎಂದು‌ ಪ್ರಮಾಣಪತ್ರ ನೀಡಲಾಗುತ್ತಿದ್ದರೂ ಕೂಡ ಅದು ಕರ್ನಾಟಕ ಬ್ರಾಹ್ಮಣ ಮಂಡಳಿ ಯೋಜನೆಗೆ ಮಾತ್ರ ಸೀಮಿತವಾಗಿದೆ ಸಮುದಾಯದ ಬಡವರಿಗೆ ಬ್ರಾಹ್ಮಣ ಮಂಡಳಿ ಯೋಜನೆಯೂ ಸಹ ತಲುಪುತ್ತಿಲ್ಲ ಕಾರಣ ಕೆಲವು ಅವೈಜ್ಞಾನಿಕ ಕಾನೂನಾತ್ಮಕ ತೊಡಕಿದೆ ಜಾತಿ ಪ್ರಮಾಣ ಪತ್ರ ಪಡೆಯಲು ಶಾಲಾ ವ್ಯಾಸಾಂಗದ ವರ್ಗಾವಣೆ ಪತ್ರ ಕಡ್ಡಾಯವಾಗಿದೆ, 50ವರ್ಷ ಮೇಲ್ಪಟ್ಟವರಿಗೆ ಯಾವುದೇ ವೈದ್ಯಕೀಯ ಸಂಭಂಧ ಯೋಜನೆಗಳಿಲ್ಲ, EWS certificate ವಾಯಿದೆ ಕೇವಲ ಒಂದು ವರ್ಷ ಮಾತ್ರವಿದೆ ಅದನ್ನ ಪಡೆಯಲು ವಾಸವಿರುವ ಸ್ವಂತ ಮನೆ ಸಾವಿರ ಚದರ ದೊಳಗಿರಬೇಕು ಎನ್ನುವ ಅವೈಜ್ಞಾನಿಕತೆ ಎಷ್ಟರ ಮಟ್ಟಿಗೆ ಸರಿ  ಎಂದು ಪ್ರಶ್ನಿಸಿದರು. ಇದರಿಂದ  ಮಧ್ಯಮ ವರ್ಗದ ಸಮುದಾಯದವರು ವಂಚಿತರಾಗುತ್ತಾರೆ, ಬ್ರಾಹ್ಮಣ ಸಮುದಾಯಕ್ಕೆ ಜೀವಿತಾವಧಿ ಜಾತಿಪ್ರಮಾಣ ಪತ್ರ ನೀಡಲು ಸರ್ಕಾರ ಮುಂದಾಗಬೇಕಿದೆ ಇದರಿಂದ ಶಿಕ್ಷಣ ಆರೋಗ್ಯ ಉದ್ಯೋಗ ವಿಚಾರವಾಗಿ ಬ್ರಾಹ್ಮಣರಿಗೆ ಉಪಯುಕ್ತವಾಗುತ್ತದೆ ಹಾಗಾಗಿ ವಿಪ್ರ ಸಮುದಾಯದ ಜನಪ್ರತಿನಿಧಿಗಳು ಕಾನೂನು ತಜ್ಞರು ಸಮುದಾಯದ ಮುಖಂಡರು ಒಳಗೊಂಡ ವಿಪ್ರನಿಯೋಗ ರಚಿಸಿ ಸರ್ಕಾರದ ಗಮನ ಸೆಳೆದು ಸಮುದಾಯಕ್ಕೆ ಸವಲತ್ತು ತಲುಪಿಸಲು ಶ್ರಮಿಸಬೇಕಿದೆ ಎಂದು ಮನವಿ ಸಲ್ಲಿಸಿದರು.

ಸಂಸದರಾದ ಪ್ರತಾಪ್ ಸಿಂಹ, ಮೂಡ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್, ಹೊಯ್ಸಳ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ಕೆ.ಆರ್ ಸತ್ಯನಾರಾಯಣ್, ಬ್ರಾಹ್ಮಣ ಸಂಘದ ಅಧ್ಯಕ್ಷ ಡಿಟಿ. ಪ್ರಕಾಶ್, ನಗರಪಾಲಿಕೆ ಸದಸ್ಯ ಮಾವಿ. ರಾಂಪ್ರಸಾದ್, ಮೈಸೂರು ಬ್ರಾಹ್ಮಣ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಜಯಸಿಂಹ ಶ್ರೀಧರ್, ರಂಗನಾಥ್, ವಿಜಯ್ ಕುಮಾರ್, ಜಗದೀಶ್, ಪ್ರಶಾಂತ್, ಸುಚೀಂದ್ರ ಚಕ್ರಪಾಣಿ ಮುಂತಾದವರು ಇದ್ದರು .

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

8 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

8 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

8 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

8 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

9 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago