ಜಿಲ್ಲೆಗಳು

ಸರ್ಕಾರಿ ಸವಲತ್ತು ತಲುಪಿಸಲು ವಿಪ್ರ ನಿಯೋಗ ರಚನೆಗಾಗಿ ಮನವಿ

ಮೈಸೂರು : ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಹೊಯ್ಸಳ ಕರ್ನಾಟಕ‌ ಸಮಾರಂಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಅಶೋಕ ಹಾರನಹಳ್ಳಿ ರವರಿಗೆ ಅಶೋಕಾಭಿನಂದನಾ‌ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸರ್ಕಾರದ ಸವಲತ್ತುಗಳು ಬ್ರಾಹ್ಮಣ  ಸಮುದಾಯಕ್ಕೆ ತಲುಪುವಂತೆ ಮಾಡಲು ಮೈಸೂರು ಬ್ರಾಹ್ಮಣ ಯುವ ವೇದಿಕೆಯ ಪದಾಧಿಕಾರಿಗಳು  ಜನಪ್ರತಿನಿಧಿಗಳು ವಿಪ್ರ ಮುಖಂಡರು ಮತ್ತು ಕಾನೂನು ತಜ್ಞರ ವಿಪ್ರ ನಿಯೋಗ ರಚಿಸಬೇಕೆಂದು ಮನವಿ‌ ಸಲ್ಲಿಸಿದರು.
ಬ್ರಾಹ್ಮಣ‌ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ  ಅವರು ಮಾತನಾಡಿ ಕೇಂದ್ರ ಸರ್ಕಾರದ ಯೋಜನೆ ಮೇಲ್ವರ್ಗದ ಬಡವರಿಗೆ 10% ಮೀಸಲಾತಿ ಇನ್ನೂ ಕರ್ನಾಟಕದಲ್ಲಿ ಜಾರಿಗೆ ಬಂದಿಲ್ಲ, ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರವೇ ಸಿಗುತ್ತಿಲ್ಲ, ಆರ್ಥಿಕವಾಗಿ ಹಿಂದುಳಿದವರು ಎಂದು‌ ಪ್ರಮಾಣಪತ್ರ ನೀಡಲಾಗುತ್ತಿದ್ದರೂ ಕೂಡ ಅದು ಕರ್ನಾಟಕ ಬ್ರಾಹ್ಮಣ ಮಂಡಳಿ ಯೋಜನೆಗೆ ಮಾತ್ರ ಸೀಮಿತವಾಗಿದೆ ಸಮುದಾಯದ ಬಡವರಿಗೆ ಬ್ರಾಹ್ಮಣ ಮಂಡಳಿ ಯೋಜನೆಯೂ ಸಹ ತಲುಪುತ್ತಿಲ್ಲ ಕಾರಣ ಕೆಲವು ಅವೈಜ್ಞಾನಿಕ ಕಾನೂನಾತ್ಮಕ ತೊಡಕಿದೆ ಜಾತಿ ಪ್ರಮಾಣ ಪತ್ರ ಪಡೆಯಲು ಶಾಲಾ ವ್ಯಾಸಾಂಗದ ವರ್ಗಾವಣೆ ಪತ್ರ ಕಡ್ಡಾಯವಾಗಿದೆ, 50ವರ್ಷ ಮೇಲ್ಪಟ್ಟವರಿಗೆ ಯಾವುದೇ ವೈದ್ಯಕೀಯ ಸಂಭಂಧ ಯೋಜನೆಗಳಿಲ್ಲ, EWS certificate ವಾಯಿದೆ ಕೇವಲ ಒಂದು ವರ್ಷ ಮಾತ್ರವಿದೆ ಅದನ್ನ ಪಡೆಯಲು ವಾಸವಿರುವ ಸ್ವಂತ ಮನೆ ಸಾವಿರ ಚದರ ದೊಳಗಿರಬೇಕು ಎನ್ನುವ ಅವೈಜ್ಞಾನಿಕತೆ ಎಷ್ಟರ ಮಟ್ಟಿಗೆ ಸರಿ  ಎಂದು ಪ್ರಶ್ನಿಸಿದರು. ಇದರಿಂದ  ಮಧ್ಯಮ ವರ್ಗದ ಸಮುದಾಯದವರು ವಂಚಿತರಾಗುತ್ತಾರೆ, ಬ್ರಾಹ್ಮಣ ಸಮುದಾಯಕ್ಕೆ ಜೀವಿತಾವಧಿ ಜಾತಿಪ್ರಮಾಣ ಪತ್ರ ನೀಡಲು ಸರ್ಕಾರ ಮುಂದಾಗಬೇಕಿದೆ ಇದರಿಂದ ಶಿಕ್ಷಣ ಆರೋಗ್ಯ ಉದ್ಯೋಗ ವಿಚಾರವಾಗಿ ಬ್ರಾಹ್ಮಣರಿಗೆ ಉಪಯುಕ್ತವಾಗುತ್ತದೆ ಹಾಗಾಗಿ ವಿಪ್ರ ಸಮುದಾಯದ ಜನಪ್ರತಿನಿಧಿಗಳು ಕಾನೂನು ತಜ್ಞರು ಸಮುದಾಯದ ಮುಖಂಡರು ಒಳಗೊಂಡ ವಿಪ್ರನಿಯೋಗ ರಚಿಸಿ ಸರ್ಕಾರದ ಗಮನ ಸೆಳೆದು ಸಮುದಾಯಕ್ಕೆ ಸವಲತ್ತು ತಲುಪಿಸಲು ಶ್ರಮಿಸಬೇಕಿದೆ ಎಂದು ಮನವಿ ಸಲ್ಲಿಸಿದರು.

ಸಂಸದರಾದ ಪ್ರತಾಪ್ ಸಿಂಹ, ಮೂಡ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್, ಹೊಯ್ಸಳ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ಕೆ.ಆರ್ ಸತ್ಯನಾರಾಯಣ್, ಬ್ರಾಹ್ಮಣ ಸಂಘದ ಅಧ್ಯಕ್ಷ ಡಿಟಿ. ಪ್ರಕಾಶ್, ನಗರಪಾಲಿಕೆ ಸದಸ್ಯ ಮಾವಿ. ರಾಂಪ್ರಸಾದ್, ಮೈಸೂರು ಬ್ರಾಹ್ಮಣ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಜಯಸಿಂಹ ಶ್ರೀಧರ್, ರಂಗನಾಥ್, ವಿಜಯ್ ಕುಮಾರ್, ಜಗದೀಶ್, ಪ್ರಶಾಂತ್, ಸುಚೀಂದ್ರ ಚಕ್ರಪಾಣಿ ಮುಂತಾದವರು ಇದ್ದರು .

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

10 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

10 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

13 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago