ಜಿಲ್ಲೆಗಳು

ಸರ್ಕಾರಿ ಸವಲತ್ತು ತಲುಪಿಸಲು ವಿಪ್ರ ನಿಯೋಗ ರಚನೆಗಾಗಿ ಮನವಿ

ಮೈಸೂರು : ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಹೊಯ್ಸಳ ಕರ್ನಾಟಕ‌ ಸಮಾರಂಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಅಶೋಕ ಹಾರನಹಳ್ಳಿ ರವರಿಗೆ ಅಶೋಕಾಭಿನಂದನಾ‌ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸರ್ಕಾರದ ಸವಲತ್ತುಗಳು ಬ್ರಾಹ್ಮಣ  ಸಮುದಾಯಕ್ಕೆ ತಲುಪುವಂತೆ ಮಾಡಲು ಮೈಸೂರು ಬ್ರಾಹ್ಮಣ ಯುವ ವೇದಿಕೆಯ ಪದಾಧಿಕಾರಿಗಳು  ಜನಪ್ರತಿನಿಧಿಗಳು ವಿಪ್ರ ಮುಖಂಡರು ಮತ್ತು ಕಾನೂನು ತಜ್ಞರ ವಿಪ್ರ ನಿಯೋಗ ರಚಿಸಬೇಕೆಂದು ಮನವಿ‌ ಸಲ್ಲಿಸಿದರು.
ಬ್ರಾಹ್ಮಣ‌ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ  ಅವರು ಮಾತನಾಡಿ ಕೇಂದ್ರ ಸರ್ಕಾರದ ಯೋಜನೆ ಮೇಲ್ವರ್ಗದ ಬಡವರಿಗೆ 10% ಮೀಸಲಾತಿ ಇನ್ನೂ ಕರ್ನಾಟಕದಲ್ಲಿ ಜಾರಿಗೆ ಬಂದಿಲ್ಲ, ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರವೇ ಸಿಗುತ್ತಿಲ್ಲ, ಆರ್ಥಿಕವಾಗಿ ಹಿಂದುಳಿದವರು ಎಂದು‌ ಪ್ರಮಾಣಪತ್ರ ನೀಡಲಾಗುತ್ತಿದ್ದರೂ ಕೂಡ ಅದು ಕರ್ನಾಟಕ ಬ್ರಾಹ್ಮಣ ಮಂಡಳಿ ಯೋಜನೆಗೆ ಮಾತ್ರ ಸೀಮಿತವಾಗಿದೆ ಸಮುದಾಯದ ಬಡವರಿಗೆ ಬ್ರಾಹ್ಮಣ ಮಂಡಳಿ ಯೋಜನೆಯೂ ಸಹ ತಲುಪುತ್ತಿಲ್ಲ ಕಾರಣ ಕೆಲವು ಅವೈಜ್ಞಾನಿಕ ಕಾನೂನಾತ್ಮಕ ತೊಡಕಿದೆ ಜಾತಿ ಪ್ರಮಾಣ ಪತ್ರ ಪಡೆಯಲು ಶಾಲಾ ವ್ಯಾಸಾಂಗದ ವರ್ಗಾವಣೆ ಪತ್ರ ಕಡ್ಡಾಯವಾಗಿದೆ, 50ವರ್ಷ ಮೇಲ್ಪಟ್ಟವರಿಗೆ ಯಾವುದೇ ವೈದ್ಯಕೀಯ ಸಂಭಂಧ ಯೋಜನೆಗಳಿಲ್ಲ, EWS certificate ವಾಯಿದೆ ಕೇವಲ ಒಂದು ವರ್ಷ ಮಾತ್ರವಿದೆ ಅದನ್ನ ಪಡೆಯಲು ವಾಸವಿರುವ ಸ್ವಂತ ಮನೆ ಸಾವಿರ ಚದರ ದೊಳಗಿರಬೇಕು ಎನ್ನುವ ಅವೈಜ್ಞಾನಿಕತೆ ಎಷ್ಟರ ಮಟ್ಟಿಗೆ ಸರಿ  ಎಂದು ಪ್ರಶ್ನಿಸಿದರು. ಇದರಿಂದ  ಮಧ್ಯಮ ವರ್ಗದ ಸಮುದಾಯದವರು ವಂಚಿತರಾಗುತ್ತಾರೆ, ಬ್ರಾಹ್ಮಣ ಸಮುದಾಯಕ್ಕೆ ಜೀವಿತಾವಧಿ ಜಾತಿಪ್ರಮಾಣ ಪತ್ರ ನೀಡಲು ಸರ್ಕಾರ ಮುಂದಾಗಬೇಕಿದೆ ಇದರಿಂದ ಶಿಕ್ಷಣ ಆರೋಗ್ಯ ಉದ್ಯೋಗ ವಿಚಾರವಾಗಿ ಬ್ರಾಹ್ಮಣರಿಗೆ ಉಪಯುಕ್ತವಾಗುತ್ತದೆ ಹಾಗಾಗಿ ವಿಪ್ರ ಸಮುದಾಯದ ಜನಪ್ರತಿನಿಧಿಗಳು ಕಾನೂನು ತಜ್ಞರು ಸಮುದಾಯದ ಮುಖಂಡರು ಒಳಗೊಂಡ ವಿಪ್ರನಿಯೋಗ ರಚಿಸಿ ಸರ್ಕಾರದ ಗಮನ ಸೆಳೆದು ಸಮುದಾಯಕ್ಕೆ ಸವಲತ್ತು ತಲುಪಿಸಲು ಶ್ರಮಿಸಬೇಕಿದೆ ಎಂದು ಮನವಿ ಸಲ್ಲಿಸಿದರು.

ಸಂಸದರಾದ ಪ್ರತಾಪ್ ಸಿಂಹ, ಮೂಡ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್, ಹೊಯ್ಸಳ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ಕೆ.ಆರ್ ಸತ್ಯನಾರಾಯಣ್, ಬ್ರಾಹ್ಮಣ ಸಂಘದ ಅಧ್ಯಕ್ಷ ಡಿಟಿ. ಪ್ರಕಾಶ್, ನಗರಪಾಲಿಕೆ ಸದಸ್ಯ ಮಾವಿ. ರಾಂಪ್ರಸಾದ್, ಮೈಸೂರು ಬ್ರಾಹ್ಮಣ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಜಯಸಿಂಹ ಶ್ರೀಧರ್, ರಂಗನಾಥ್, ವಿಜಯ್ ಕುಮಾರ್, ಜಗದೀಶ್, ಪ್ರಶಾಂತ್, ಸುಚೀಂದ್ರ ಚಕ್ರಪಾಣಿ ಮುಂತಾದವರು ಇದ್ದರು .

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

7 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

8 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

9 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

14 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

21 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

21 hours ago