ಜಿಲ್ಲೆಗಳು

ಬಿಟ್ಟೋದ ಪತಿರಾಯ, ಇಬ್ಬರು ಮಕ್ಕಳೊಟ್ಟಿಗೆ ಗ್ರಾಪಂ ಆವರಣದಲ್ಲಿ ಮಹಿಳೆಯ ವಾಸ

ಬಿಟ್ಟು ಹೋಗಿರುವ ಪತಿ; ವೃದ್ಧ ತಂದೆಯೇ ಆಧಾರಸ್ತಂಭ
ಮದ್ದೂರು: ಕಳೆದ ೧೧ ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಗ್ರಾ.ಪಂ. ಆವರಣದಲ್ಲಿ ತನ್ನಿಬ್ಬರು ಗಂಡು ಮಕ್ಕಳೊಂದಿಗೆ ವಾಸ ಮಾಡುವ ಮೂಲಕ ದಿನನಿತ್ಯದ ಜೀವನ ದೂಡುತ್ತಿರುವುದು ನೋಡುಗರ ಮನ ಕಲಕುವಂತಿದೆ.
ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮದ ಗ್ರಾ.ಪಂ. ಆವರಣದಲ್ಲಿ ಕುಣಿಗಲ್ ಮೂಲದವರಾದ ಅನ್ನಪೂರ್ಣ ಮತ್ತು ಈಕೆಯ ತಂದೆ ಸುರೇಶ್ ಸೇರಿದಂತೆ ತನ್ನಿಬ್ಬರು ಮಕ್ಕಳಾದ ತನ್ಮಯ್‌ಗೌಡ (೫ ವರ್ಷ) ಅಭಯ್‌ಗೌಡ (೩ ವರ್ಷ) ಹಾಗೂ ೧೧ ದಿನಗಳ ಹಿಂದೆ ಜನಿಸಿದ ಗಂಡು ಮಗುವಿನೊಂದಿಗೆ ಗ್ರಾ.ಪಂ. ಆವರಣದಲ್ಲೇ ನೆಲೆಸಿದ್ದಾರೆ.
ಎರಡು ತಿಂಗಳ ಗರ್ಭಿಣಿಯಾಗಿದ್ದ ಅನ್ನಪೂರ್ಣ ಅವರನ್ನು ಪತಿ ಬಿಟ್ಟು ಹೋದ ಹಿನ್ನೆಲೆಯಲ್ಲಿ ವಯಸ್ಸಾದ ತಂದೆ ಸುರೇಶ್ ಅವರೇ ಆಧಾರಸ್ತಂಭವಾಗಿದ್ದು, ಬಟ್ಟೆ ವ್ಯಾಪಾರ ನಡೆಸುತ್ತಿದ್ದ ಇವರು ವ್ಯಾಪಾರದಲ್ಲಿ ನಷ್ಟ ಉಂಟಾದ ಕಾರಣ ತನ್ನ ಮಗಳು ಹಾಗೂ ಮೊಮ್ಮಕಳ ಒಪ್ಪತ್ತಿನ ಊಟಕ್ಕಾಗಿ ಅವರಿವರನ್ನು ಬೇಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಕಳೆದ ೧೧ ದಿನಗಳ ಹಿಂದೆ ಮಂಡ್ಯದ ವಿಮ್ಸ್ ಆಸ್ಪತ್ರೆಯಲ್ಲಿ ಮಗು ಜನಿಸಿದ ಬಳಿಕ ಗ್ರಾ.ಪಂ. ಆವರಣ ಸೇರಿರುವ ಹಸಿ ಬಾಣಂತಿ ಮಳೆ, ಚಳಿ ಎನ್ನದೆ ಮತ್ತು ಯಾವುದೇ ಸೌಲಭ್ಯವಿಲ್ಲದೆ ಜೀವನ ನಡೆಸುತ್ತಿರುವುದು ಮನ ಕಲಕುವಂತಿದೆ.
ಇವರ ಕುಟುಂಬಕ್ಕೆ ಪಡಿತರ ಚೀಟಿ ಸೇರಿದಂತೆ ಸರ್ಕಾರದ ಯಾವೊಂದು ಸೌಲಭ್ಯವೂ ಸಿಗದೆ ವಂಚಿತವಾಗಿದ್ದು, ಹೆಮ್ಮನಹಳ್ಳಿ ಗ್ರಾಮಸ್ಥರು ನೀಡುವ ಆಹಾರವೇ ಅವರಿಗೆ ಹೊಟ್ಟೆ ತುಂಬಿಸಿಕೊಳ್ಳುವಂತಾಗಿದೆ. ಸರ್ಕಾರ ಬಾಣಂತಿಯರಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದರೂ ಸೌಲಭ್ಯದಿಂದ ದೂರವೇ ಉಳಿದಿದ್ದು, ಸ್ಥಳೀಯ ಗ್ರಾ.ಪಂ. ಹಾಗೂ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕಾಗಿದೆ.
ಗ್ರಾ.ಪಂ. ಆವರಣದಲ್ಲಿ ಸೊಳ್ಳೆಕಾಟ ಹಾಗೂ ದಿನ ನಿತ್ಯ ಸುರಿಯುತ್ತಿರುವ ಮಳೆ, ಚಳಿ ನಡುವೆಯೂ ತನ್ನ ಮೂರು ಮಕ್ಕಳೊಂದಿಗೆ ದಿನದೂಡುತ್ತಿದ್ದು, ಕೂಡಲೇ ಈಕೆಯ ನೆರವಿಗೆ ಸ್ಥಳೀಯ ಸಂಘ ಸಂಸ್ಥೆಗಳ ನೆರವಿನ ಜತೆಗೆ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತುರ್ತು ಕ್ರಮವಹಿಸಬೇಕಾಗಿದೆ.


 

ಜಿಲ್ಲಾ ಹಾಗೂ ತಾಲ್ಲೂಕು ಆಡಳಿತ ತಮ್ಮ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಹಲವು ಸೌಲಭ್ಯಗಳನ್ನು ಒದಗಿಸುವ ಮೂಲಕ ನಮ್ಮ ನೆರವಿಗೆ ಧಾವಿಸುವಂತೆ ಮತ್ತು ಮಕ್ಕಳ ಶಿಕ್ಷಣ, ವಯಸ್ಸಾದ ತಂದೆಯೊAದಿಗೆ ಜೀವನ ಸಾಗಿಸಲು ವಸತಿ ಸೌಲಭ್ಯ ಕಲ್ಪಿಸಲು ಮುಂದಾಗಬೇಕಿದೆ.
– ಅನ್ನಪೂರ್ಣ, ನೊಂದ ಮಹಿಳೆ


ಹೆಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮಹಿಳೆ ಮತ್ತು ಮಕ್ಕಳನ್ನು ದತ್ತು ಸ್ವೀಕಾರ ಕೇಂದ್ರಕ್ಕೆ ಕಳುಹಿಸಿ ಮಗುವಿನ ಹಾರೈಕೆ ಮತ್ತು ಮಕ್ಕಳ ಲಾಲನೆ ಪಾಲನೆ ಬಗ್ಗೆ ಕ್ರಮವಹಿಸಿ ಸರ್ಕಾರದ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗುವುದು.
ಜಿ. ಪ್ರದೀಪ್, ಸಿಡಿಪಿಒ, ಮದ್ದೂರು.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

8 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago