ಜಿಲ್ಲೆಗಳು

ಬಿಟ್ಟೋದ ಪತಿರಾಯ, ಇಬ್ಬರು ಮಕ್ಕಳೊಟ್ಟಿಗೆ ಗ್ರಾಪಂ ಆವರಣದಲ್ಲಿ ಮಹಿಳೆಯ ವಾಸ

ಬಿಟ್ಟು ಹೋಗಿರುವ ಪತಿ; ವೃದ್ಧ ತಂದೆಯೇ ಆಧಾರಸ್ತಂಭ
ಮದ್ದೂರು: ಕಳೆದ ೧೧ ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಗ್ರಾ.ಪಂ. ಆವರಣದಲ್ಲಿ ತನ್ನಿಬ್ಬರು ಗಂಡು ಮಕ್ಕಳೊಂದಿಗೆ ವಾಸ ಮಾಡುವ ಮೂಲಕ ದಿನನಿತ್ಯದ ಜೀವನ ದೂಡುತ್ತಿರುವುದು ನೋಡುಗರ ಮನ ಕಲಕುವಂತಿದೆ.
ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮದ ಗ್ರಾ.ಪಂ. ಆವರಣದಲ್ಲಿ ಕುಣಿಗಲ್ ಮೂಲದವರಾದ ಅನ್ನಪೂರ್ಣ ಮತ್ತು ಈಕೆಯ ತಂದೆ ಸುರೇಶ್ ಸೇರಿದಂತೆ ತನ್ನಿಬ್ಬರು ಮಕ್ಕಳಾದ ತನ್ಮಯ್‌ಗೌಡ (೫ ವರ್ಷ) ಅಭಯ್‌ಗೌಡ (೩ ವರ್ಷ) ಹಾಗೂ ೧೧ ದಿನಗಳ ಹಿಂದೆ ಜನಿಸಿದ ಗಂಡು ಮಗುವಿನೊಂದಿಗೆ ಗ್ರಾ.ಪಂ. ಆವರಣದಲ್ಲೇ ನೆಲೆಸಿದ್ದಾರೆ.
ಎರಡು ತಿಂಗಳ ಗರ್ಭಿಣಿಯಾಗಿದ್ದ ಅನ್ನಪೂರ್ಣ ಅವರನ್ನು ಪತಿ ಬಿಟ್ಟು ಹೋದ ಹಿನ್ನೆಲೆಯಲ್ಲಿ ವಯಸ್ಸಾದ ತಂದೆ ಸುರೇಶ್ ಅವರೇ ಆಧಾರಸ್ತಂಭವಾಗಿದ್ದು, ಬಟ್ಟೆ ವ್ಯಾಪಾರ ನಡೆಸುತ್ತಿದ್ದ ಇವರು ವ್ಯಾಪಾರದಲ್ಲಿ ನಷ್ಟ ಉಂಟಾದ ಕಾರಣ ತನ್ನ ಮಗಳು ಹಾಗೂ ಮೊಮ್ಮಕಳ ಒಪ್ಪತ್ತಿನ ಊಟಕ್ಕಾಗಿ ಅವರಿವರನ್ನು ಬೇಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಕಳೆದ ೧೧ ದಿನಗಳ ಹಿಂದೆ ಮಂಡ್ಯದ ವಿಮ್ಸ್ ಆಸ್ಪತ್ರೆಯಲ್ಲಿ ಮಗು ಜನಿಸಿದ ಬಳಿಕ ಗ್ರಾ.ಪಂ. ಆವರಣ ಸೇರಿರುವ ಹಸಿ ಬಾಣಂತಿ ಮಳೆ, ಚಳಿ ಎನ್ನದೆ ಮತ್ತು ಯಾವುದೇ ಸೌಲಭ್ಯವಿಲ್ಲದೆ ಜೀವನ ನಡೆಸುತ್ತಿರುವುದು ಮನ ಕಲಕುವಂತಿದೆ.
ಇವರ ಕುಟುಂಬಕ್ಕೆ ಪಡಿತರ ಚೀಟಿ ಸೇರಿದಂತೆ ಸರ್ಕಾರದ ಯಾವೊಂದು ಸೌಲಭ್ಯವೂ ಸಿಗದೆ ವಂಚಿತವಾಗಿದ್ದು, ಹೆಮ್ಮನಹಳ್ಳಿ ಗ್ರಾಮಸ್ಥರು ನೀಡುವ ಆಹಾರವೇ ಅವರಿಗೆ ಹೊಟ್ಟೆ ತುಂಬಿಸಿಕೊಳ್ಳುವಂತಾಗಿದೆ. ಸರ್ಕಾರ ಬಾಣಂತಿಯರಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದರೂ ಸೌಲಭ್ಯದಿಂದ ದೂರವೇ ಉಳಿದಿದ್ದು, ಸ್ಥಳೀಯ ಗ್ರಾ.ಪಂ. ಹಾಗೂ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕಾಗಿದೆ.
ಗ್ರಾ.ಪಂ. ಆವರಣದಲ್ಲಿ ಸೊಳ್ಳೆಕಾಟ ಹಾಗೂ ದಿನ ನಿತ್ಯ ಸುರಿಯುತ್ತಿರುವ ಮಳೆ, ಚಳಿ ನಡುವೆಯೂ ತನ್ನ ಮೂರು ಮಕ್ಕಳೊಂದಿಗೆ ದಿನದೂಡುತ್ತಿದ್ದು, ಕೂಡಲೇ ಈಕೆಯ ನೆರವಿಗೆ ಸ್ಥಳೀಯ ಸಂಘ ಸಂಸ್ಥೆಗಳ ನೆರವಿನ ಜತೆಗೆ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತುರ್ತು ಕ್ರಮವಹಿಸಬೇಕಾಗಿದೆ.


 

ಜಿಲ್ಲಾ ಹಾಗೂ ತಾಲ್ಲೂಕು ಆಡಳಿತ ತಮ್ಮ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಹಲವು ಸೌಲಭ್ಯಗಳನ್ನು ಒದಗಿಸುವ ಮೂಲಕ ನಮ್ಮ ನೆರವಿಗೆ ಧಾವಿಸುವಂತೆ ಮತ್ತು ಮಕ್ಕಳ ಶಿಕ್ಷಣ, ವಯಸ್ಸಾದ ತಂದೆಯೊAದಿಗೆ ಜೀವನ ಸಾಗಿಸಲು ವಸತಿ ಸೌಲಭ್ಯ ಕಲ್ಪಿಸಲು ಮುಂದಾಗಬೇಕಿದೆ.
– ಅನ್ನಪೂರ್ಣ, ನೊಂದ ಮಹಿಳೆ


ಹೆಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮಹಿಳೆ ಮತ್ತು ಮಕ್ಕಳನ್ನು ದತ್ತು ಸ್ವೀಕಾರ ಕೇಂದ್ರಕ್ಕೆ ಕಳುಹಿಸಿ ಮಗುವಿನ ಹಾರೈಕೆ ಮತ್ತು ಮಕ್ಕಳ ಲಾಲನೆ ಪಾಲನೆ ಬಗ್ಗೆ ಕ್ರಮವಹಿಸಿ ಸರ್ಕಾರದ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗುವುದು.
ಜಿ. ಪ್ರದೀಪ್, ಸಿಡಿಪಿಒ, ಮದ್ದೂರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

3 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

4 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

10 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

10 hours ago